ಹುನಗುಂದ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾ ಸಮಿತಿ ಸದಸ್ಯರು ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಐ ಚೆನ್ನಯ್ಯ ದೇವೂರು ಅವರಿಗೆ ಬುಧವಾರ ದೂರು ನೀಡಿದರು.
ಸಮಿತಿ ಸದಸ್ಯೆ ರುಬಿನಾಬೇಗಮ್ ನದಾಫ್ ಮಾತನಾಡಿ, ‘ಕಲ್ಲಡ್ಕ ಪ್ರಭಾಕರ್ ಭಟ್ಟ ಅವರು ಅತ್ಯಂತ ಕೀಳಾಗಿ ಬಹಿರಂಗವಾಗಿ ಅವಮಾನಿಸುವ ರೀತಿಯಲ್ಲಿ ಮಾತನಾಡಿ, ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಯಿಂದ ಮುಸ್ಲಿಂ ಸಮುದಾಯದ ಮಹಿಳೆಯರಿಗೆ ನೋವಾಗಿದೆ’ ಎಂದರು.