<p><strong>ಬಾಗಲಕೋಟೆ:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಿಂತಲೂ ಮೊದಲೇ ಆರಂಭವಾಗಿದ್ದ ವಿಮುಕ್ತ ದೇವದಾಸಿಯರ ಪುನರ್ ಸಮೀಕ್ಷೆಗೆ ನಿಗದಿಪಡಿಸಲಾಗಿದ್ದ ಅವಧಿಯು ಮುಗಿಯಲು ಸಮೀಪಿಸಿದ್ದರೂ ಇದುವರೆಗೂ ಶೇ 33.84ರಷ್ಟು ಮಾತ್ರವೇ ಸಮೀಕ್ಷೆ ಪ್ರಕ್ರಿಯೆ ಪೂರ್ಣಗೊಂಡಿದೆ.</p>.<p>2007–08ನೇ ಸಾಲಿನಲ್ಲಿ ಸಮೀಕ್ಷೆ ನಡೆದಾಗ ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಕೊಪ್ಪಳ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ 46,600 ವಿಮುಕ್ತ ದೇವದಾಸಿಯರನ್ನು ಗುರುತಿಸಲಾಗಿತ್ತು.</p>.<p>ಈಗ ಸೆ.15ರಂದೇ ಸಮೀಕ್ಷೆ ಆರಂಭಿಸಲಾಗಿದ್ದು, 45 ಕೆಲಸದ ದಿನಗಳಲ್ಲಿ ಪೂರ್ಣಗೊಳಿಸಬೇಕಿದೆ. ಇಲ್ಲಿಯವರೆಗೆ 15,770 ಜನರ ಸಮೀಕ್ಷೆ ಪೂರ್ಣಗೊಂಡಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 7,827 ವಿಮುಕ್ತ ದೇವದಾಸಿಯರಿದ್ದು, ಇಲ್ಲಿಯವರೆಗೆ 1,800 ಜನರ ಸಮೀಕ್ಷೆ ಮಾಡಲಾಗಿದೆ.</p>.<p>2007–08ರ ಸಮೀಕ್ಷೆ ಬಳಿಕ ಮತ್ತೆ ನಡೆದಿಲ್ಲ. ಈ ಅವಧಿಯಲ್ಲಿ ಸಾಕಷ್ಟು ಜನರು ಮೃತರಾಗಿದ್ದಾರೆ. ಹೀಗಾಗಿ ಅವರ ಸಂಖ್ಯೆ ಕಡಿಮೆ ಇದೆ. ಕೆಲವರು ಉದ್ಯೋಗ, ಇತರೆ ಕಾರಣಗಳಿಗಾಗಿ ವಲಸೆ ಹೋಗಿದ್ದಾರೆ. ಜಿಲ್ಲೆಯಲ್ಲಿ 2,935 ಮಂದಿ ಮೃತಪಟ್ಟಿದ್ದು, 236 ಜನ ವಲಸೆ ಹೋಗಿರುವ ಅಂದಾಜು ಇದೆ. </p>.<p>ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮೀಕ್ಷೆದಾರರೇ ಮನೆ ಬಾಗಿಲಿಗೆ ಬಂದರೆ, ವಿಮುಕ್ತ ದೇವದಾಸಿಯರ ಸಮೀಕ್ಷೆಯಲ್ಲಿ ಸಮೀಕ್ಷೆಗೆ ಒಳಪಡಬೇಕಾದವರೆ ದಾಖಲೆಗಳ ಸಮೇತ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರಳಿ ಮಾಹಿತಿ ನೀಡಬೇಕಿದೆ.</p>.<p>ವಿಮುಕ್ತ ದೇವದಾಸಿಯರ ಗೋಪ್ಯತೆ ರಕ್ಷಿಸಲು ಈ ಕ್ರಮ ಅನುಸರಿಸಲಾಗುತ್ತಿದೆ. ಆದರೆ, ಪುನರ್ ಸಮೀಕ್ಷೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸದ ಕಾರಣ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಒಬ್ಬರಿಂದ ಒಬ್ಬರಿಗೆ ವಿಷಯ ಗೊತ್ತಾಗಿ ಬರಲಾರಂಭಿಸಿದ್ದಾರೆ.</p>.<p>ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್, ವಂಶಾವಳಿ, ಶಾಲಾ ದಾಖಲಾತಿ, ಜಾತಿ ಪ್ರಮಾಣಪತ್ರ, ಮಕ್ಕಳ ಆಧಾರ್ ಕಾರ್ಡ್ ಅಂತಹ ದಾಖಲೆಗಳನ್ನು ನೀಡಬೇಕು. ಶಾಲಾ ದಾಖಲೆ, ಆಧಾರ್ ಕಾರ್ಡ್ನಲ್ಲಿ ಹೆಸರು ಭಿನ್ನವಾಗಿರುವ ಕಾರಣ ಸಮೀಕ್ಷೆಗೆ ಒಳಪಡಿಸುವುದು ಸವಾಲಾಗಿದೆ. </p>.<p>ವಂಶಾವಳಿ ಪ್ರಮಾಣಪತ್ರ ಪಡೆಯಲು ತಿರುಗಾಡುತ್ತಿದ್ದಾರೆ. ಬಹುತೇಕರು ಅನಕ್ಷರಸ್ಥರಾಗಿದ್ದು, ಅಗತ್ಯ ದಾಖಲೆಗಳನ್ನು ಹೊಂದಿಸುವುದೇ ಹದಿನೈದು ದಿನಗಳಿಂದ ಕೆಲಸವಾಗಿದೆ. </p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೂ ಸಾಮಾಜಿಕ, ಶೈಕ್ಷಣಿಕ ಗಣತಿಯಲ್ಲಿ ತೊಡಗಿಸಿಕೊಂಡಿರುವುದರಿಂದ ವಿಮುಕ್ತ ದೇವದಾಸಿಯರ ಪುನರ್ ಸಮೀಕ್ಷೆಗೆ ಚುರುಕುದೊರೆತಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಿಂತಲೂ ಮೊದಲೇ ಆರಂಭವಾಗಿದ್ದ ವಿಮುಕ್ತ ದೇವದಾಸಿಯರ ಪುನರ್ ಸಮೀಕ್ಷೆಗೆ ನಿಗದಿಪಡಿಸಲಾಗಿದ್ದ ಅವಧಿಯು ಮುಗಿಯಲು ಸಮೀಪಿಸಿದ್ದರೂ ಇದುವರೆಗೂ ಶೇ 33.84ರಷ್ಟು ಮಾತ್ರವೇ ಸಮೀಕ್ಷೆ ಪ್ರಕ್ರಿಯೆ ಪೂರ್ಣಗೊಂಡಿದೆ.</p>.<p>2007–08ನೇ ಸಾಲಿನಲ್ಲಿ ಸಮೀಕ್ಷೆ ನಡೆದಾಗ ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಕೊಪ್ಪಳ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ 46,600 ವಿಮುಕ್ತ ದೇವದಾಸಿಯರನ್ನು ಗುರುತಿಸಲಾಗಿತ್ತು.</p>.<p>ಈಗ ಸೆ.15ರಂದೇ ಸಮೀಕ್ಷೆ ಆರಂಭಿಸಲಾಗಿದ್ದು, 45 ಕೆಲಸದ ದಿನಗಳಲ್ಲಿ ಪೂರ್ಣಗೊಳಿಸಬೇಕಿದೆ. ಇಲ್ಲಿಯವರೆಗೆ 15,770 ಜನರ ಸಮೀಕ್ಷೆ ಪೂರ್ಣಗೊಂಡಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 7,827 ವಿಮುಕ್ತ ದೇವದಾಸಿಯರಿದ್ದು, ಇಲ್ಲಿಯವರೆಗೆ 1,800 ಜನರ ಸಮೀಕ್ಷೆ ಮಾಡಲಾಗಿದೆ.</p>.<p>2007–08ರ ಸಮೀಕ್ಷೆ ಬಳಿಕ ಮತ್ತೆ ನಡೆದಿಲ್ಲ. ಈ ಅವಧಿಯಲ್ಲಿ ಸಾಕಷ್ಟು ಜನರು ಮೃತರಾಗಿದ್ದಾರೆ. ಹೀಗಾಗಿ ಅವರ ಸಂಖ್ಯೆ ಕಡಿಮೆ ಇದೆ. ಕೆಲವರು ಉದ್ಯೋಗ, ಇತರೆ ಕಾರಣಗಳಿಗಾಗಿ ವಲಸೆ ಹೋಗಿದ್ದಾರೆ. ಜಿಲ್ಲೆಯಲ್ಲಿ 2,935 ಮಂದಿ ಮೃತಪಟ್ಟಿದ್ದು, 236 ಜನ ವಲಸೆ ಹೋಗಿರುವ ಅಂದಾಜು ಇದೆ. </p>.<p>ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮೀಕ್ಷೆದಾರರೇ ಮನೆ ಬಾಗಿಲಿಗೆ ಬಂದರೆ, ವಿಮುಕ್ತ ದೇವದಾಸಿಯರ ಸಮೀಕ್ಷೆಯಲ್ಲಿ ಸಮೀಕ್ಷೆಗೆ ಒಳಪಡಬೇಕಾದವರೆ ದಾಖಲೆಗಳ ಸಮೇತ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರಳಿ ಮಾಹಿತಿ ನೀಡಬೇಕಿದೆ.</p>.<p>ವಿಮುಕ್ತ ದೇವದಾಸಿಯರ ಗೋಪ್ಯತೆ ರಕ್ಷಿಸಲು ಈ ಕ್ರಮ ಅನುಸರಿಸಲಾಗುತ್ತಿದೆ. ಆದರೆ, ಪುನರ್ ಸಮೀಕ್ಷೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸದ ಕಾರಣ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಒಬ್ಬರಿಂದ ಒಬ್ಬರಿಗೆ ವಿಷಯ ಗೊತ್ತಾಗಿ ಬರಲಾರಂಭಿಸಿದ್ದಾರೆ.</p>.<p>ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್, ವಂಶಾವಳಿ, ಶಾಲಾ ದಾಖಲಾತಿ, ಜಾತಿ ಪ್ರಮಾಣಪತ್ರ, ಮಕ್ಕಳ ಆಧಾರ್ ಕಾರ್ಡ್ ಅಂತಹ ದಾಖಲೆಗಳನ್ನು ನೀಡಬೇಕು. ಶಾಲಾ ದಾಖಲೆ, ಆಧಾರ್ ಕಾರ್ಡ್ನಲ್ಲಿ ಹೆಸರು ಭಿನ್ನವಾಗಿರುವ ಕಾರಣ ಸಮೀಕ್ಷೆಗೆ ಒಳಪಡಿಸುವುದು ಸವಾಲಾಗಿದೆ. </p>.<p>ವಂಶಾವಳಿ ಪ್ರಮಾಣಪತ್ರ ಪಡೆಯಲು ತಿರುಗಾಡುತ್ತಿದ್ದಾರೆ. ಬಹುತೇಕರು ಅನಕ್ಷರಸ್ಥರಾಗಿದ್ದು, ಅಗತ್ಯ ದಾಖಲೆಗಳನ್ನು ಹೊಂದಿಸುವುದೇ ಹದಿನೈದು ದಿನಗಳಿಂದ ಕೆಲಸವಾಗಿದೆ. </p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೂ ಸಾಮಾಜಿಕ, ಶೈಕ್ಷಣಿಕ ಗಣತಿಯಲ್ಲಿ ತೊಡಗಿಸಿಕೊಂಡಿರುವುದರಿಂದ ವಿಮುಕ್ತ ದೇವದಾಸಿಯರ ಪುನರ್ ಸಮೀಕ್ಷೆಗೆ ಚುರುಕುದೊರೆತಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>