<p><strong>ಬಾಗಲಕೋಟೆ:</strong> ‘ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ರೋಗ ತಡೆಗೆ ಸೂಕ್ತ ಕ್ರಮವಹಿಸಿ ರೋಗಿಗಳು ಮರಣ ಹೊಂದದಂತೆ ತಡೆಯಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡೆಂಗಿ ಹಾಗೂ ಚಿಕುನ್ ಗುನ್ಯಾ ನಿಯಂತ್ರಣ ಪೋಸ್ಟರ್ ಬಿಡುಗಡೆ ಹಾಗೂ ಲಾರ್ವಾ ನಿರ್ಮೂಲನಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಡೆಂಗಿ ನಿಯಂತ್ರಣಕ್ಕೆ ಅಭಿಯಾನದ ರೂಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರತಿ ಶುಕ್ರವಾರ ಆಶಾ ಕಾರ್ಯಕರ್ತರು ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು ಸೇರಿ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು ಎಂದರು.</p>.<p>ರೋಗ ಲಕ್ಷಣ ತಿಳಿಸಬೇಕು. ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವ ಲಾರ್ವಾ ನಾಶ ಪಡಿಸುವ ಬಗ್ಗೆ ಮಾಹಿತಿ ನೀಡುವ ಕೆಲಸವಾಗಬೇಕು. ಶೇಖರಣೆಗೊಂಡ ನೀರು ಉಪಯೋಗವಾಗುತ್ತಿರಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಸಾರ್ವಜನಿಕರಿಗೆ ಲಾರ್ವಾ ಮೊಟ್ಟೆಗಳನ್ನು ತಿನ್ನುವ ಮೀನುಗಳನ್ನು ವಿತರಿಸಲಾಯಿತು. ಶಾಸಕರಾದ ಎಚ್.ವೈ. ಮೇಟಿ, ಭೀಮಸೇನ ಚಿಮ್ಮನಕಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತ ರಂದೀಪ, ಎಂ.ಡಿ.ಎನ್.ಎಚ್.ಎಂ ನವೀನ ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ರೋಗ ತಡೆಗೆ ಸೂಕ್ತ ಕ್ರಮವಹಿಸಿ ರೋಗಿಗಳು ಮರಣ ಹೊಂದದಂತೆ ತಡೆಯಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡೆಂಗಿ ಹಾಗೂ ಚಿಕುನ್ ಗುನ್ಯಾ ನಿಯಂತ್ರಣ ಪೋಸ್ಟರ್ ಬಿಡುಗಡೆ ಹಾಗೂ ಲಾರ್ವಾ ನಿರ್ಮೂಲನಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಡೆಂಗಿ ನಿಯಂತ್ರಣಕ್ಕೆ ಅಭಿಯಾನದ ರೂಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರತಿ ಶುಕ್ರವಾರ ಆಶಾ ಕಾರ್ಯಕರ್ತರು ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು ಸೇರಿ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು ಎಂದರು.</p>.<p>ರೋಗ ಲಕ್ಷಣ ತಿಳಿಸಬೇಕು. ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವ ಲಾರ್ವಾ ನಾಶ ಪಡಿಸುವ ಬಗ್ಗೆ ಮಾಹಿತಿ ನೀಡುವ ಕೆಲಸವಾಗಬೇಕು. ಶೇಖರಣೆಗೊಂಡ ನೀರು ಉಪಯೋಗವಾಗುತ್ತಿರಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಸಾರ್ವಜನಿಕರಿಗೆ ಲಾರ್ವಾ ಮೊಟ್ಟೆಗಳನ್ನು ತಿನ್ನುವ ಮೀನುಗಳನ್ನು ವಿತರಿಸಲಾಯಿತು. ಶಾಸಕರಾದ ಎಚ್.ವೈ. ಮೇಟಿ, ಭೀಮಸೇನ ಚಿಮ್ಮನಕಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತ ರಂದೀಪ, ಎಂ.ಡಿ.ಎನ್.ಎಚ್.ಎಂ ನವೀನ ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>