<p>ತೇರದಾಳ: ‘ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಿ, ಕಾನೂನು ಕಾಯ್ದೆಗಳ ಅಡಿ ಕೆಲಸ ಮಾಡುವುದು ಪೊಲೀಸ್ ಇಲಾಖೆಯ ಉದ್ದೇಶವಾಗಿದೆ. ಪೊಲೀಸರು ಎಂದರೆ ಭಯ ಬೇಡ, ನಮ್ಮವರೆಂಬ ಭಾವವಿರಲಿ’ ಎಂದು ಸ್ಥಳೀಯ ಠಾಣಾಧಿಕಾರಿ ಅಪ್ಪು ಐಗಳಿ ಹೇಳಿದರು.</p>.<p>ಗುರುವಾರ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ನಡೆದ ‘ತೆರೆದ ಬಾಗಿಲು ಕಾರ್ಯಕ್ರಮ'ದ ಅಡಿಯಲ್ಲಿ ಕುರುಹಿನಶೆಟ್ಟಿ ನೀಲಕಂಠೇಶ್ವರ ಶಿಕ್ಷಣ ಸಂಸ್ಥೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು.</p>.<p>‘18 ವರ್ಷ ಪೂರ್ಣಗೊಳ್ಳುವ ಮುನ್ನ ಹಾಗೂ ಪರವಾನಗಿ ಇಲ್ಲದೇ ಯಾರು ಬೈಕ್ ಓಡಿಸಬಾರದು. ಈ ವಯಸ್ಸಿನಲ್ಲಿ ಬೈಕ್ ಓಡಿಸುವುದು ಅಪರಾಧ’ ಎಂದು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದರು.</p>.<p>ಪೋಕ್ಸೊ ಕಾಯ್ದೆ ಕುರಿತು ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸಿ, ಕೆಲ ಅಂಶಗಳ ಕುರಿತು ಮಾಹಿತಿ ನೀಡಿದರು.</p>.<p>ಉಜ್ವಲ ಭವಿಷ್ಯ ರೂಪಗೊಳ್ಳಲು ಶಿಕ್ಷಣ ಬಹಳಷ್ಟು ಮಹತ್ವದ್ದಾಗಿದೆ. ಆದ್ದರಿಂದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ. ಬಾಲ್ಯ ವಿವಾಹ ಕುರಿತು ಪಾಲಕರಿಗೆ ಜಾಗೃತಿ ಮೂಡಿಸಿ ಎಂದು ಕಿವಿಮಾತು ಹೇಳಿದರು.</p>.<p>ವಿವೇಕ ಸುರ್ವಖಂಡಿ, ಸವದಿ, ಶಿಕ್ಷಕ ಉಮೇಶ ಕಳಸದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೇರದಾಳ: ‘ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಿ, ಕಾನೂನು ಕಾಯ್ದೆಗಳ ಅಡಿ ಕೆಲಸ ಮಾಡುವುದು ಪೊಲೀಸ್ ಇಲಾಖೆಯ ಉದ್ದೇಶವಾಗಿದೆ. ಪೊಲೀಸರು ಎಂದರೆ ಭಯ ಬೇಡ, ನಮ್ಮವರೆಂಬ ಭಾವವಿರಲಿ’ ಎಂದು ಸ್ಥಳೀಯ ಠಾಣಾಧಿಕಾರಿ ಅಪ್ಪು ಐಗಳಿ ಹೇಳಿದರು.</p>.<p>ಗುರುವಾರ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ನಡೆದ ‘ತೆರೆದ ಬಾಗಿಲು ಕಾರ್ಯಕ್ರಮ'ದ ಅಡಿಯಲ್ಲಿ ಕುರುಹಿನಶೆಟ್ಟಿ ನೀಲಕಂಠೇಶ್ವರ ಶಿಕ್ಷಣ ಸಂಸ್ಥೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು.</p>.<p>‘18 ವರ್ಷ ಪೂರ್ಣಗೊಳ್ಳುವ ಮುನ್ನ ಹಾಗೂ ಪರವಾನಗಿ ಇಲ್ಲದೇ ಯಾರು ಬೈಕ್ ಓಡಿಸಬಾರದು. ಈ ವಯಸ್ಸಿನಲ್ಲಿ ಬೈಕ್ ಓಡಿಸುವುದು ಅಪರಾಧ’ ಎಂದು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದರು.</p>.<p>ಪೋಕ್ಸೊ ಕಾಯ್ದೆ ಕುರಿತು ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸಿ, ಕೆಲ ಅಂಶಗಳ ಕುರಿತು ಮಾಹಿತಿ ನೀಡಿದರು.</p>.<p>ಉಜ್ವಲ ಭವಿಷ್ಯ ರೂಪಗೊಳ್ಳಲು ಶಿಕ್ಷಣ ಬಹಳಷ್ಟು ಮಹತ್ವದ್ದಾಗಿದೆ. ಆದ್ದರಿಂದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ. ಬಾಲ್ಯ ವಿವಾಹ ಕುರಿತು ಪಾಲಕರಿಗೆ ಜಾಗೃತಿ ಮೂಡಿಸಿ ಎಂದು ಕಿವಿಮಾತು ಹೇಳಿದರು.</p>.<p>ವಿವೇಕ ಸುರ್ವಖಂಡಿ, ಸವದಿ, ಶಿಕ್ಷಕ ಉಮೇಶ ಕಳಸದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>