<p>ಮುಧೋಳ: ನಗರದಲ್ಲಿ ಶುಕ್ರವಾರ ರಾತ್ರಿ ಇಬ್ಬರು ವ್ಯಕ್ತಿಗಳ ಮಧ್ಯೆ ನಡೆದ ವೈಯಕ್ತಿಕ ಜಗಳಕ್ಕೆ ಕೋಮುಬಣ್ಣ ಬಳಿದು ಯಾರೂ ಸಮಾಜದ ಸ್ವಾಸ್ಥ್ಯ ಹದಗೆಡಿಸಬಾರದು ಎಂದು ಅಂಜುಮನ್ ಕಮಿಟಿ ಮಾಜಿ ಅಧ್ಯಕ್ಷ ಐ.ಎಚ್. ಅಂಬಿ ಮನವಿ ಮಾಡಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ರಾತ್ರಿ ಅವಿನಾಶ ಮುಂಡಗನೂರ ಹಾಗೂ ಸೈಫನಸಾಬ್ ಎಂಬುವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಈ ಕುರಿತು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿ ಆದರೆ ಇದೇ ಕಾರಣವನ್ನು ಮುಂದಿಟ್ಟುಕೊಂಡು ಯಾರು ಕೋಮುದ್ವೇಷಕ್ಕೆ ಮುಂದಾಗಬಾರದು’ ಎಂದು ತಿಳಿಸಿದರು.</p>.<p>‘ಮುಧೋಳ ನಗರ ಹಿಂದಿನಿಂದಲೂ ಸಹೋದರತ್ವಕ್ಕೆ ಮಾದರಿಯಾಗಿದೆ. ಅದಕ್ಕೆ ಯಾರೂ ಧಕ್ಕೆ ತರಲು ಮುಂದಾಗಬಾರದು’ ಎಂದರು.</p>.<p>ಅಂಜುಮನ್ ಕಮಿಟಿ ಅಧ್ಯಕ್ಷ ಆರೀಫ್ ಮೋಮಿನ್, ಉಪಾಧ್ಯಕ್ಷ ರಫೀಕ್ ಫಠಾಣ, ಇಲಾಹಿ ಮಹಿಷವಾಡಗಿ, ಇಸ್ಮಾಯಿಲ್ ವಾಲೀಕಾರ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಧೋಳ: ನಗರದಲ್ಲಿ ಶುಕ್ರವಾರ ರಾತ್ರಿ ಇಬ್ಬರು ವ್ಯಕ್ತಿಗಳ ಮಧ್ಯೆ ನಡೆದ ವೈಯಕ್ತಿಕ ಜಗಳಕ್ಕೆ ಕೋಮುಬಣ್ಣ ಬಳಿದು ಯಾರೂ ಸಮಾಜದ ಸ್ವಾಸ್ಥ್ಯ ಹದಗೆಡಿಸಬಾರದು ಎಂದು ಅಂಜುಮನ್ ಕಮಿಟಿ ಮಾಜಿ ಅಧ್ಯಕ್ಷ ಐ.ಎಚ್. ಅಂಬಿ ಮನವಿ ಮಾಡಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ರಾತ್ರಿ ಅವಿನಾಶ ಮುಂಡಗನೂರ ಹಾಗೂ ಸೈಫನಸಾಬ್ ಎಂಬುವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಈ ಕುರಿತು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿ ಆದರೆ ಇದೇ ಕಾರಣವನ್ನು ಮುಂದಿಟ್ಟುಕೊಂಡು ಯಾರು ಕೋಮುದ್ವೇಷಕ್ಕೆ ಮುಂದಾಗಬಾರದು’ ಎಂದು ತಿಳಿಸಿದರು.</p>.<p>‘ಮುಧೋಳ ನಗರ ಹಿಂದಿನಿಂದಲೂ ಸಹೋದರತ್ವಕ್ಕೆ ಮಾದರಿಯಾಗಿದೆ. ಅದಕ್ಕೆ ಯಾರೂ ಧಕ್ಕೆ ತರಲು ಮುಂದಾಗಬಾರದು’ ಎಂದರು.</p>.<p>ಅಂಜುಮನ್ ಕಮಿಟಿ ಅಧ್ಯಕ್ಷ ಆರೀಫ್ ಮೋಮಿನ್, ಉಪಾಧ್ಯಕ್ಷ ರಫೀಕ್ ಫಠಾಣ, ಇಲಾಹಿ ಮಹಿಷವಾಡಗಿ, ಇಸ್ಮಾಯಿಲ್ ವಾಲೀಕಾರ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>