ಬಾಗಲಕೋಟೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಜಲಸಂಪನ್ಮೂಲಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಚಾರಕ್ಕೆ ತಪ್ಪು ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಬಾಗಲಕೋಟೆಗೆ ಭೇಟಿ ನೀಡಿರುವ ಅವರು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್ದು, ‘ಯಡಿಯೂರಪ್ಪ ಅವರು ತಮ್ಮ ಕ್ಷೇತ್ರದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸುವುದಕ್ಕಾಗಿ ಭೇಟಿ ಮಾಡಿದ್ದಾರೆ. ಹಾಗೆಂದು ಅವರೇ ಹೇಳಿಕೊಂಡಿದ್ದಾರೆ. ಹೀಗಿರುವಾಗ ಅವರ ಭೇಟಿಗೆರಾಜಕೀಯ ಅರ್ಥ ನೀಡುವುದು ಸರಿಯಲ್ಲ’ ಎಂದು ಹೇಳಿದರು.
‘ಈ ಅಧಿವೇಶನದ ಒಳಗಡೆ ಸಂಪುಟ ರಚನೆ ಮಾಡಲಾಗುವುದು.ಈಗಾಗಲೇ ನಮ್ಮ ಸಮ್ಮಿಶ್ರ ಸರ್ಕಾರದ ಮುಖಂಡರು ಅದರ ಬಗ್ಗೆ ಚಿಂತನೆ ನಡೆಸಿದ್ದಾರೆ.ಚಳಿಗಾಲದ ಅಧಿವೇಶನದ ಒಳಗಾಗಿ ಸಂಪುಟ ಪುನರ್ ರಚನೆಯಾಗುತ್ತೆ’ ಎಂದರು.