ಕಲಾದಗಿ: ಸಮೀಪದ ಕಳಸಕೊಪ್ಪ ಗ್ರಾಮದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಇರುವುದನ್ನು ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಪರಿಶೀಲಿಸಿದರು.
ಗ್ರಾಮದಲ್ಲಿನ ಕೊಳವೆಬಾವಿಗಳು ಬತ್ತಿ ಹೋಗಿದ್ದು, ಕೂಡಲೇ ಹೊಸ ಕೊಳವೆಬಾವಿ ಕೋರಿಯಿಸಲು ಸ್ಥಳದಲ್ಲಿದ್ದ ಎಂಜಿನಿಯರ್ ಚಿದಾನಂದ ಭಜಂತ್ರಿ ಅವರಿಗೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಸೂಚಿಸಿದರು.
ತಹಶೀಲ್ದಾರ್ ಅಮರೇಶ ಪಮ್ಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ.ದುಂಡಪ್ಪ. ನಾಯ್ಕರ, ಗ್ರಾಮ ಆಡಳಿತ ಅಧಿಕಾರಿ ರವಿಕುಮಾರ ಕುಳ್ಳೊಳ್ಳಿ ಇದ್ದರು.