‘ಅಕ್ರಮ ಗಣಿಗಾರಿಕೆ ಕುರಿತು, ಬಿಜೆಪಿ ನೇತೃತ್ವದ ಸರ್ಕಾರವಿದ್ದಾಗ ನಾನು ಕೊಟ್ಟ ವರದಿಯನ್ನು ಜಾರಿಗೆ ತರಲಿಲ್ಲ. ನಂತರ ಬೆಂಗಳೂರಿನಿಂದ ಬಳ್ಳಾರಿವರೆಗೆ ಕಾಂಗ್ರೆಸ್ ಮುಖಂಡರು ಪಾದಯಾತ್ರೆ ಮಾಡಿದರು. ಆದರೆ, ಅಧಿಕಾರಕ್ಕೆ ಬಂದ ಮೇಲೂ ಕ್ರಮ ಕೈಗೊಳ್ಳಲಿಲ್ಲ. ದುರಂತ ಎಂದರೆ, ಲೋಕಾಯುಕ್ತಕ್ಕೆ ಇದ್ದ ಅಧಿಕಾರವನ್ನು ಎಸಿಬಿಗೆ ಕೊಟ್ಟಿದ್ದಾರೆ. ತಮಾಷೆ ಎಂದರೆ, ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಲೋಕಾಯುಕ್ತವನ್ನು ಬಲಿಷ್ಠಗೊಳಿಸುತ್ತೇವೆ ಎನ್ನುವ ಭರವಸೆಯನ್ನು ಪ್ರಮುಖ ಪಕ್ಷಗಳು ಕೊಟ್ಟಿದ್ದವು. ಪ್ರಜಾಪ್ರಭುತ್ವದಲ್ಲಿ ಉತ್ತಮ ಆಡಳಿತ ಇರಬೇಕಾದರೆ ರಾಜ್ಯದಲ್ಲಿ ಬಲಿಷ್ಠ ಲೋಕಾಯುಕ್ತ ಇರಬೇಕು’ ಎಂದರು.