<p>ಜಮಖಂಡಿ: ‘ದೇಶದಲ್ಲಿ ಒಳ್ಳೆಯ ಶಿಕ್ಷಣ ಇದ್ದರೆ ಆ ದೇಶ ವೇಗವಾಗಿ ಬೆಳೆದು ಸಾಧನೆಗಳನ್ನು ಮಾಡುತ್ತದೆ, ಒಳ್ಳೆಯ ಶಿಕ್ಷಣ ಇಲ್ಲದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಸನದಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕಾಡಳಿತ ಆಶ್ರಯದಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಅಭಿಯಾನ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಾರ್ವಜನಿಕರು, ವಿದ್ಯಾರ್ಥಿಗಳು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು’ ಎಂದರು.</p>.<p>ಕಾರ್ಮಿಕ ನಿರೀಕ್ಷಕ ಪಿ.ವಿ.ಮಾವರಕರ ಮಾತನಾಡಿ, ‘ಮಕ್ಕಳ ಮೇಲೆ ದೌರ್ಜನ್ಯ ನಡೆದರೆ, ಬಾಲ ಕಾರ್ಮಿಕರು ಕಂಡರೆ 1098 ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು’ ಎಂದು ಹೇಳಿದರು.</p>.<p>‘ದೇಶದಲ್ಲಿ 1.25 ಕೋಟಿಗೂ ಹೆಚ್ಚು ಬಾಲ ಕಾರ್ಮಿಕರಿದ್ದಾರೆ. ಇಂತಹ ಸಂದರ್ಭದಲ್ಲಿ ಕೇವಲ ದಿನಾಚರಣೆ ಆಚರಿಸಿ ಜಾಗೃತಿ ಮೂಡಿಸಿದರಷ್ಟೇ ಈ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಅದರ ಬದಲು ಮಕ್ಕಳು ದೇಶದ ಆಸ್ತಿ ಅವರ ಭವಿಷ್ಯಕ್ಕೆ ಉತ್ತಮ ಶಿಕ್ಷಣ ನೀಡಬೇಕೆಂಬ ಮನಸ್ಥಿತಿ ಎಲ್ಲರಲ್ಲಿ ಬರಬೇಕಿದೆ’ ಎಂದು ಹೇಳಿದರು.</p>.<p>ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಊಂಡೋಡಿ ಉದ್ಘಾಟಿಸಿದರು. ಬಿಇಒ ಎ.ಕೆ.ಬಸಣ್ಣವರ, ಸಿಡಿಪಿಒ ಎಂ.ಪಿ.ದಾಸರ, ಉಪಪ್ರಾಚಾರ್ಯ ಮಹಾಂತೇಶ ನರಸನಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮಖಂಡಿ: ‘ದೇಶದಲ್ಲಿ ಒಳ್ಳೆಯ ಶಿಕ್ಷಣ ಇದ್ದರೆ ಆ ದೇಶ ವೇಗವಾಗಿ ಬೆಳೆದು ಸಾಧನೆಗಳನ್ನು ಮಾಡುತ್ತದೆ, ಒಳ್ಳೆಯ ಶಿಕ್ಷಣ ಇಲ್ಲದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಸನದಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕಾಡಳಿತ ಆಶ್ರಯದಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಅಭಿಯಾನ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಾರ್ವಜನಿಕರು, ವಿದ್ಯಾರ್ಥಿಗಳು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು’ ಎಂದರು.</p>.<p>ಕಾರ್ಮಿಕ ನಿರೀಕ್ಷಕ ಪಿ.ವಿ.ಮಾವರಕರ ಮಾತನಾಡಿ, ‘ಮಕ್ಕಳ ಮೇಲೆ ದೌರ್ಜನ್ಯ ನಡೆದರೆ, ಬಾಲ ಕಾರ್ಮಿಕರು ಕಂಡರೆ 1098 ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು’ ಎಂದು ಹೇಳಿದರು.</p>.<p>‘ದೇಶದಲ್ಲಿ 1.25 ಕೋಟಿಗೂ ಹೆಚ್ಚು ಬಾಲ ಕಾರ್ಮಿಕರಿದ್ದಾರೆ. ಇಂತಹ ಸಂದರ್ಭದಲ್ಲಿ ಕೇವಲ ದಿನಾಚರಣೆ ಆಚರಿಸಿ ಜಾಗೃತಿ ಮೂಡಿಸಿದರಷ್ಟೇ ಈ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಅದರ ಬದಲು ಮಕ್ಕಳು ದೇಶದ ಆಸ್ತಿ ಅವರ ಭವಿಷ್ಯಕ್ಕೆ ಉತ್ತಮ ಶಿಕ್ಷಣ ನೀಡಬೇಕೆಂಬ ಮನಸ್ಥಿತಿ ಎಲ್ಲರಲ್ಲಿ ಬರಬೇಕಿದೆ’ ಎಂದು ಹೇಳಿದರು.</p>.<p>ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಊಂಡೋಡಿ ಉದ್ಘಾಟಿಸಿದರು. ಬಿಇಒ ಎ.ಕೆ.ಬಸಣ್ಣವರ, ಸಿಡಿಪಿಒ ಎಂ.ಪಿ.ದಾಸರ, ಉಪಪ್ರಾಚಾರ್ಯ ಮಹಾಂತೇಶ ನರಸನಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>