<p><strong>ಬಾಗಲಕೋಟೆ:</strong> ಮೌಲ್ಯಾಧಾರಿತ ಶಿಕ್ಷಣ, ಗ್ರಾಮೀಣ ಆರೋಗ್ಯ ಸೇವೆ, ವಿದ್ಯಾರ್ಥಿ ಮತ್ತು ಸಿಬ್ಬಂದಿ ವಿನಿಮಯ ಕಾರ್ಯಕ್ರಮಗಳಿಗೆ ಬಿವಿವಿ ಸಂಘ ಹಾಗೂ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ನಡುವೆ ಗುರುವಾರ ಒಪ್ಪಂದ ಮಾಡಿಕೊಳ್ಳಲಾಯಿತು.</p>.<p>ಶೈಕ್ಷಣಿಕ ಯೋಜನೆಗಳ ಜೊತೆಗೆ ವೇದ ಅಧ್ಯಯನ, ಪ್ರದರ್ಶನ ಕಲೆಗಳಿಗೆ ಉತ್ತೇಜನ, ಮಾನವೀಯ ಮೌಲ್ಯಗಳ ಕುರಿತ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸುವ ಕಾರ್ಯ ನಡೆಯಲಿದೆ. ಆ ಮೂಲಕ ಸಮಗ್ರಮ ಶಿಕ್ಷಣ ಹಾಗೂ ಸಮುದಾಯ ಶಕ್ತೀಕರಣ ಉತ್ತೇಜಿಸಲು ಉದ್ದೇಶಿಸಲಾಗಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಸತ್ಯಸಾಯಿ ಬಾಬಾರವರ 100ನೇ ಜನ್ಮ ದಿನ ಅಂಗವಾಗಿ ನಡೆಯುತ್ತಿರುವ ವಿಶ್ವ ಸಾಂಸ್ಕೃತಿಕ ಮಹೋತ್ಸವದಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಭಾಗಿಯಾಗಿ 'ವಸುಧೈವ ಕುಟುಂಬಕಂ' ಸಂದೇಶ ಸಾರುವ ಪ್ರಚಾರಕರಾಗಿ ಸೇರಿಕೊಂಡರು.</p>.<p>ವಿಶ್ವವಿದ್ಯಾಲಯದ ಸ್ಥಾಪಕ ಕುಲಾಧಿಪತಿ ಮಧುಸೂದನ ಸಾಯಿ ಶ್ರೀ, ಉಪ ಕುಲಪತಿ ಶ್ರೀಕಂಠಮೂರ್ತಿ, ಸತ್ಯ ಸಾಯಿ ಲೋಕ ಸೇವಾ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಮಾರ್ಗದರ್ಶಕ ನರಸಿಂಹ ಮೂರ್ತಿ, ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಮೌಲ್ಯಾಧಾರಿತ ಶಿಕ್ಷಣ, ಗ್ರಾಮೀಣ ಆರೋಗ್ಯ ಸೇವೆ, ವಿದ್ಯಾರ್ಥಿ ಮತ್ತು ಸಿಬ್ಬಂದಿ ವಿನಿಮಯ ಕಾರ್ಯಕ್ರಮಗಳಿಗೆ ಬಿವಿವಿ ಸಂಘ ಹಾಗೂ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ನಡುವೆ ಗುರುವಾರ ಒಪ್ಪಂದ ಮಾಡಿಕೊಳ್ಳಲಾಯಿತು.</p>.<p>ಶೈಕ್ಷಣಿಕ ಯೋಜನೆಗಳ ಜೊತೆಗೆ ವೇದ ಅಧ್ಯಯನ, ಪ್ರದರ್ಶನ ಕಲೆಗಳಿಗೆ ಉತ್ತೇಜನ, ಮಾನವೀಯ ಮೌಲ್ಯಗಳ ಕುರಿತ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸುವ ಕಾರ್ಯ ನಡೆಯಲಿದೆ. ಆ ಮೂಲಕ ಸಮಗ್ರಮ ಶಿಕ್ಷಣ ಹಾಗೂ ಸಮುದಾಯ ಶಕ್ತೀಕರಣ ಉತ್ತೇಜಿಸಲು ಉದ್ದೇಶಿಸಲಾಗಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಸತ್ಯಸಾಯಿ ಬಾಬಾರವರ 100ನೇ ಜನ್ಮ ದಿನ ಅಂಗವಾಗಿ ನಡೆಯುತ್ತಿರುವ ವಿಶ್ವ ಸಾಂಸ್ಕೃತಿಕ ಮಹೋತ್ಸವದಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಭಾಗಿಯಾಗಿ 'ವಸುಧೈವ ಕುಟುಂಬಕಂ' ಸಂದೇಶ ಸಾರುವ ಪ್ರಚಾರಕರಾಗಿ ಸೇರಿಕೊಂಡರು.</p>.<p>ವಿಶ್ವವಿದ್ಯಾಲಯದ ಸ್ಥಾಪಕ ಕುಲಾಧಿಪತಿ ಮಧುಸೂದನ ಸಾಯಿ ಶ್ರೀ, ಉಪ ಕುಲಪತಿ ಶ್ರೀಕಂಠಮೂರ್ತಿ, ಸತ್ಯ ಸಾಯಿ ಲೋಕ ಸೇವಾ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಮಾರ್ಗದರ್ಶಕ ನರಸಿಂಹ ಮೂರ್ತಿ, ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>