ಬಾಗಲಕೋಟೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಗೆಲುವಿನ ಹಿನ್ನೆಲೆಯಲ್ಲಿ ಶನಿವಾರ ರಬಕವಿ-ಬನಹಟ್ಟಿಯಲ್ಲಿ ಆಯೋಜಿಸಿರುವ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಶಾಸಕ ಕೆ.ಎಸ್.ಈಶ್ವರಪ್ಪ ಜಿಲ್ಲೆಗೆ ಬಂದರು.
ಬೆಂಗಳೂರಿನಿಂದ ರೈಲಿನಲ್ಲಿ ಬಂದ ಈಶ್ವರಪ್ಪ, ಬಾದಾಮಿಯಲ್ಲಿ ಇಳಿದು ಬನಶಂಕರಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಈ ವೇಳೆ ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಜೊತೆಗಿದ್ದರು.