<p><strong>ಬಾಗಲಕೋಟೆ</strong>: ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗುವ ಅವಕಾಶ ದೊರೆತಿದೆ. ನಾರಾಯಣ ಭಾಂಡಗೆ ಆಯ್ಕೆಯಾಗಿರುವುದು ಘೋಷಣೆಯಾಗುತ್ತಿದ್ದಂತೆಯೇ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ರಾಜ್ಯಸಭೆ ನಾಲ್ಕು ಸ್ಥಾನಗಳಿಗೆ ಐದನೇಯವರು ಸ್ಪರ್ಧೆಗೆ ಇಳಿದಿದ್ದರಿಂದ ಚುನಾವಣೆ ಕುತೂಹಲ ಮೂಡಿಸಿತ್ತು. ಆದರೆ, ಬಿಜೆಪಿಯು ತನ್ನ ಅಭ್ಯರ್ಥಿ ಆಯ್ಕೆಗೆ ಅವಶ್ಯಕ ಮತಗಳನ್ನು ಹೊಂದಿದ್ದರಿಂದ ಗೆಲುವಿನ ವಿಶ್ವಾಸವಿತ್ತು. ಅದರಂತೆಯೇ ಗೆಲುವು ಸಾಧಿಸಿದ್ದಾರೆ.</p>.<p>ಜಿಲ್ಲೆಯಿಂದ ಈ ಹಿಂದೆ ಎಸ್. ನಿಜಲಿಂಗಪ್ಪ ಅವರ ಆತ್ಮೀಯರಾಗಿದ್ದ ರಾಚೋಟಪ್ಪ ಎಂ. ದೇಸಾಯಿ ರಾಜ್ಯಸಭೆ ಸದಸ್ಯರಾಗಿದ್ದರು. ಎರಡನೇ ಬಾರಿಗೆ ಅಂತಹ ಅವಕಾಶ ಭಾಂಡಗೆ ಅವರ ಮೂಲಕ ದೊರೆತಿದೆ.</p>.<p>ಕೃಷ್ಣಾ ಭಾಂಡಗೆ, ಸೋನಾಬಾಯಿ ಭಾಂಡಗೆ ಅವರ ಪುತ್ರ ನಾರಾಯಣ ಬಾಂಡಗೆ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಸಕ್ರಿ ಹೈಸ್ಕೂಲ್ನಲ್ಲಿ, ಕಲಾ ಪದವಿಯನ್ನು ಬಿ.ವಿ.ವಿ. ಸಂಘದ ಬಸವೇಶ್ವರ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ.</p>.<p>ಜನಸಂಘದ ಮೂಲಕ ಸಾರ್ವಜನಿಕ ಕಾಲಿಟ್ಟ ಅವರು, ಜನ ಸಂಘದ ನಗರ ಘಟಕದ ಮೊದಲ ಅಧ್ಯಕ್ಷರಾಗಿದ್ದಾರೆ. ಬಿಜೆಪಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ರಾಮ ಮಂದಿರ ಸೇರಿದಂತೆ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗುವ ಅವಕಾಶ ದೊರೆತಿದೆ. ನಾರಾಯಣ ಭಾಂಡಗೆ ಆಯ್ಕೆಯಾಗಿರುವುದು ಘೋಷಣೆಯಾಗುತ್ತಿದ್ದಂತೆಯೇ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ರಾಜ್ಯಸಭೆ ನಾಲ್ಕು ಸ್ಥಾನಗಳಿಗೆ ಐದನೇಯವರು ಸ್ಪರ್ಧೆಗೆ ಇಳಿದಿದ್ದರಿಂದ ಚುನಾವಣೆ ಕುತೂಹಲ ಮೂಡಿಸಿತ್ತು. ಆದರೆ, ಬಿಜೆಪಿಯು ತನ್ನ ಅಭ್ಯರ್ಥಿ ಆಯ್ಕೆಗೆ ಅವಶ್ಯಕ ಮತಗಳನ್ನು ಹೊಂದಿದ್ದರಿಂದ ಗೆಲುವಿನ ವಿಶ್ವಾಸವಿತ್ತು. ಅದರಂತೆಯೇ ಗೆಲುವು ಸಾಧಿಸಿದ್ದಾರೆ.</p>.<p>ಜಿಲ್ಲೆಯಿಂದ ಈ ಹಿಂದೆ ಎಸ್. ನಿಜಲಿಂಗಪ್ಪ ಅವರ ಆತ್ಮೀಯರಾಗಿದ್ದ ರಾಚೋಟಪ್ಪ ಎಂ. ದೇಸಾಯಿ ರಾಜ್ಯಸಭೆ ಸದಸ್ಯರಾಗಿದ್ದರು. ಎರಡನೇ ಬಾರಿಗೆ ಅಂತಹ ಅವಕಾಶ ಭಾಂಡಗೆ ಅವರ ಮೂಲಕ ದೊರೆತಿದೆ.</p>.<p>ಕೃಷ್ಣಾ ಭಾಂಡಗೆ, ಸೋನಾಬಾಯಿ ಭಾಂಡಗೆ ಅವರ ಪುತ್ರ ನಾರಾಯಣ ಬಾಂಡಗೆ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಸಕ್ರಿ ಹೈಸ್ಕೂಲ್ನಲ್ಲಿ, ಕಲಾ ಪದವಿಯನ್ನು ಬಿ.ವಿ.ವಿ. ಸಂಘದ ಬಸವೇಶ್ವರ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ.</p>.<p>ಜನಸಂಘದ ಮೂಲಕ ಸಾರ್ವಜನಿಕ ಕಾಲಿಟ್ಟ ಅವರು, ಜನ ಸಂಘದ ನಗರ ಘಟಕದ ಮೊದಲ ಅಧ್ಯಕ್ಷರಾಗಿದ್ದಾರೆ. ಬಿಜೆಪಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ರಾಮ ಮಂದಿರ ಸೇರಿದಂತೆ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>