<p><strong>ಬಾಗಲಕೋಟೆ</strong>: ‘ವಿದ್ಯಾರ್ಥಿಗಳು ಅಧ್ಯಯನ ಮತ್ತು ಕ್ರಿಯಾತ್ಮಕ ವಿಚಾರಗಳಲ್ಲಿ ಸಮಯ ವಿನಿಯೋಗಿಸುವುದು ಅಗತ್ಯವಾಗಿದೆ. ಕ್ರಿಯಾತ್ಮಕ ವಿಚಾರಗಳಿಂದ ರ್ಯಾಗಿಂಗ್ ಪಿಡುಗನ್ನು ನಿರ್ಮೂಲನೆ ಮಾಡಲು ಸಾಧ್ಯವಿದೆ’ ಎಂದು ಭಾರತೀಯ ದಂತವೈದ್ಯಕೀಯ ಮಂಡಳಿ ಸದಸ್ಯ ಡಾ.ಶಿವಶರಣ ಶೆಟ್ಟಿ ಅಭಿಪ್ರಾಯಪಟ್ಟರು. </p>.<p>ಬಿ.ವಿ.ವಿ ಸಂಘದ ಪಿ.ಎಂ.ಎನ್.ಎಂ ದಂತ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ರ್ಯಾಗಿಂಗ್ ವಿರೋಧಿ ಅಭಿಯಾನ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿ ಬದುಕಿನಲ್ಲಿ ತಾನು ಏನು ಮಾಡಬೇಕು ಎಂದು ನಿರ್ಧರಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲೆಯೇ ಇದೆ. ಎಂದರು.</p>.<p>‘ನಿಮ್ಮ ವಿಚಾರಗಳು ಕ್ರಿಯಾತ್ಮಕವಾಗಿದ್ದು, ಹೊಸತನದಿಂದ ಕೂಡಿರಲಿ. ಹೊಸ ತಂತ್ರಜ್ಞಾನ ದಂತ ವೈದ್ಯಕೀಯ ಕ್ಷೇತ್ರಕ್ಕೆ ಕಾಲಿಟ್ಟಿದೆ. ತಂತ್ರಜ್ಞಾನ ಬಳಸಿಕೊಂಡು ದಂತ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಗತಿ ಮತ್ತು ಬದಲಾವಣೆ ಮಾಡಿ. ರೋಗಿಗಳಿಗೆ ಉತ್ತಮ ಸೇವೆ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಗಳಿರಲಿ’ ಎಂದು ಹೇಳಿದರು.</p>.<p>ಪ್ರಾಚಾರ್ಯ ಡಾ.ರವಿರಾಜ ದೇಸಾಯಿ ಮಾತನಾಡಿ, ‘ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿಗೆ ಕಾಲೇಜುಗಳಲ್ಲಿ ರ್ಯಾಗಿಂಗ್ ಮುಕ್ತ ವಾತಾವರಣದ ಅವಶ್ಯಕತೆ ಇದೆ. ಓದಿನತ್ತ ಹೆಚ್ಚಿನ ಗಮನ ಹರಿಸಬೇಕು’ ಎಂದರು.</p>.<p>ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸಮಿತಿ ನೋಡಲ್ ಅಧಿಕಾರಿ ಡಾ.ಕಾಶಿನಾಥ ಅರಬ್ಬಿ, ನವನಗರ ಸಿಪಿಐ ಅಶೋಕ ಚವ್ಹಾಣ, ಡಾ.ಸಿದ್ಧರಾಮ ಪಾಟೀಲ, ಡಾ.ನಿವೇದಿತಾ, ಡಾ.ವಿಜಯಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ವಿದ್ಯಾರ್ಥಿಗಳು ಅಧ್ಯಯನ ಮತ್ತು ಕ್ರಿಯಾತ್ಮಕ ವಿಚಾರಗಳಲ್ಲಿ ಸಮಯ ವಿನಿಯೋಗಿಸುವುದು ಅಗತ್ಯವಾಗಿದೆ. ಕ್ರಿಯಾತ್ಮಕ ವಿಚಾರಗಳಿಂದ ರ್ಯಾಗಿಂಗ್ ಪಿಡುಗನ್ನು ನಿರ್ಮೂಲನೆ ಮಾಡಲು ಸಾಧ್ಯವಿದೆ’ ಎಂದು ಭಾರತೀಯ ದಂತವೈದ್ಯಕೀಯ ಮಂಡಳಿ ಸದಸ್ಯ ಡಾ.ಶಿವಶರಣ ಶೆಟ್ಟಿ ಅಭಿಪ್ರಾಯಪಟ್ಟರು. </p>.<p>ಬಿ.ವಿ.ವಿ ಸಂಘದ ಪಿ.ಎಂ.ಎನ್.ಎಂ ದಂತ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ರ್ಯಾಗಿಂಗ್ ವಿರೋಧಿ ಅಭಿಯಾನ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿ ಬದುಕಿನಲ್ಲಿ ತಾನು ಏನು ಮಾಡಬೇಕು ಎಂದು ನಿರ್ಧರಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲೆಯೇ ಇದೆ. ಎಂದರು.</p>.<p>‘ನಿಮ್ಮ ವಿಚಾರಗಳು ಕ್ರಿಯಾತ್ಮಕವಾಗಿದ್ದು, ಹೊಸತನದಿಂದ ಕೂಡಿರಲಿ. ಹೊಸ ತಂತ್ರಜ್ಞಾನ ದಂತ ವೈದ್ಯಕೀಯ ಕ್ಷೇತ್ರಕ್ಕೆ ಕಾಲಿಟ್ಟಿದೆ. ತಂತ್ರಜ್ಞಾನ ಬಳಸಿಕೊಂಡು ದಂತ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಗತಿ ಮತ್ತು ಬದಲಾವಣೆ ಮಾಡಿ. ರೋಗಿಗಳಿಗೆ ಉತ್ತಮ ಸೇವೆ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಗಳಿರಲಿ’ ಎಂದು ಹೇಳಿದರು.</p>.<p>ಪ್ರಾಚಾರ್ಯ ಡಾ.ರವಿರಾಜ ದೇಸಾಯಿ ಮಾತನಾಡಿ, ‘ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿಗೆ ಕಾಲೇಜುಗಳಲ್ಲಿ ರ್ಯಾಗಿಂಗ್ ಮುಕ್ತ ವಾತಾವರಣದ ಅವಶ್ಯಕತೆ ಇದೆ. ಓದಿನತ್ತ ಹೆಚ್ಚಿನ ಗಮನ ಹರಿಸಬೇಕು’ ಎಂದರು.</p>.<p>ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸಮಿತಿ ನೋಡಲ್ ಅಧಿಕಾರಿ ಡಾ.ಕಾಶಿನಾಥ ಅರಬ್ಬಿ, ನವನಗರ ಸಿಪಿಐ ಅಶೋಕ ಚವ್ಹಾಣ, ಡಾ.ಸಿದ್ಧರಾಮ ಪಾಟೀಲ, ಡಾ.ನಿವೇದಿತಾ, ಡಾ.ವಿಜಯಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>