<p><strong>ಬಾಗಲಕೋಟೆ</strong>: ಜಿಲ್ಲೆ ವ್ಯಾಪ್ತಿಯಲ್ಲಿ ಹಂಚಿಕೆಯಾಗದ ಮತ್ತು ಸ್ಥಗಿತಗೊಂಡಿರುವ ಎಂಟು ಮದ್ಯದಂಗಡಿ ಸನ್ನದುಗಳ ಹರಾಜು ಪ್ರಕ್ರಿಯೆಗೆ ಅಬಕಾರಿ ಇಲಾಖೆ ಚಾಲನೆ ನೀಡಿದೆ ಎಂದು ಬೆಳಗಾವಿ ವಿಭಾಗದ ಜಂಟಿ ಆಯುಕ್ತ ಫಕೀರಪ್ಪ ಚಲವಾದಿ ಹೇಳಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸನ್ನದುಗಳನ್ನು ಪಾರದರ್ಶಕ ಇ–ಹರಾಜು ಮೂಲಕ ಹಂಚಿಕೆ ಮಾಡಲಾಗುತ್ತಿದೆ. ಬಾದಾಮಿ, ಹುನಗುಂದದಲ್ಲಿ ಎರಡು, ಬಾಗಲಕೋಟೆ, ಬೀಳಗಿ, ಜಮಖಂಡಿ, ಮುಧೋಳದಲ್ಲಿ ತಲಾ ಒಂದು ಸನ್ನದುಗಳಿವೆ. ಏಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಒಂದು ಎಸ್ಟಿಗೆ ಮೀಸಲಾಗಿದೆ ಎಂದರು.</p>.<p>ಯಾವುದೇ ವ್ಯಕ್ತಿ, ಏಕವ್ಯಕ್ತಿ ಮಾಲೀಕತ್ವದ ಸಂಸ್ಥೆ, ಟ್ರಸ್ಟ್, ಸೊಸೈಟಿ, ಪಾಲುದಾರಿಕೆ ಸಂಸ್ಥೆ, ಸೀಮಿತ ಪಾಲುದಾರಿಕೆ ಸಂಸ್ಥೆಗಳು ಇ–ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಇ–ಹರಾಜು ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರದ ಎಂಎಸ್ಟಿಸಿ ಲಿಮಿಟೆಡ್ನ ಇ–ಪೋರ್ಟಲ್ನಲ್ಲಿ ನಡೆಸಲಾಗುತ್ತದೆ. ಹರಾಜಿನಲ್ಲಿ ಭಾಗವಹಿಸಲು ಬಯಸುವವರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಪ್ರತಿ ನೋಂದಣಿಗೆ ₹1,000 ಶುಲ್ಕ ನಿಗದಿಪಡಿಸಲಾಗಿದೆ. ಪ್ರತಿ ಅರ್ಜಿಗೆ ₹50 ಸಾವಿರ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿ ಮಾಡಬೇಕು. ಈ ಹಣವನ್ನು ವಾಪಸ್ ಮಾಡಲಾಗುವುದಿಲ್ಲ. ಜತೆಗೆ ಪ್ರತಿ ಸನ್ನದಿಗೆ ಸಲ್ಲಿಸುವ ಅರ್ಜಿಯ ಜತೆಗೆ ಮೂಲ ಬೆಲೆಯ ಶೇ 2ರಷ್ಟು ಇಎಂಡಿ ಇರಿಸಬೇಕಾಗುತ್ತದೆ ಎಂದರು.</p>.<p>ಹರಾಜು ಬಿಡ್ಡಿಂಗ್ನಲ್ಲಿ ಸರ್ವರ್ ಡೌನ್ ಆದರೆ, ಮತ್ತೆ ಬಿಡ್ ಸಲ್ಲಿಸಲು ಅವಕಾಶ ನೀಡಲಾಗುವುದು. ಸರ್ವರ್ ತೊಂದರೆಯಾಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾರ್ಚ್ 2025ರಿಂದ ಐದು ವರ್ಷಗಳ ಅವಧಿಗೆ ನೀಡಲಾಗುತ್ತದೆ ಎಂದು ಹೇಳಿದರು.</p>.<p>ಅಬಕಾರಿ ಇಲಾಖೆ ಪ್ರಭಾರಿ ಉಪಆಯುಕ್ತ ತಿಪ್ಪೇಸ್ವಾಮಿ, ಸೂಪರಿಟೆಂಡೆಂಟ್ ಹನುಮಂತಪ್ಪ ಭಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆ ವ್ಯಾಪ್ತಿಯಲ್ಲಿ ಹಂಚಿಕೆಯಾಗದ ಮತ್ತು ಸ್ಥಗಿತಗೊಂಡಿರುವ ಎಂಟು ಮದ್ಯದಂಗಡಿ ಸನ್ನದುಗಳ ಹರಾಜು ಪ್ರಕ್ರಿಯೆಗೆ ಅಬಕಾರಿ ಇಲಾಖೆ ಚಾಲನೆ ನೀಡಿದೆ ಎಂದು ಬೆಳಗಾವಿ ವಿಭಾಗದ ಜಂಟಿ ಆಯುಕ್ತ ಫಕೀರಪ್ಪ ಚಲವಾದಿ ಹೇಳಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸನ್ನದುಗಳನ್ನು ಪಾರದರ್ಶಕ ಇ–ಹರಾಜು ಮೂಲಕ ಹಂಚಿಕೆ ಮಾಡಲಾಗುತ್ತಿದೆ. ಬಾದಾಮಿ, ಹುನಗುಂದದಲ್ಲಿ ಎರಡು, ಬಾಗಲಕೋಟೆ, ಬೀಳಗಿ, ಜಮಖಂಡಿ, ಮುಧೋಳದಲ್ಲಿ ತಲಾ ಒಂದು ಸನ್ನದುಗಳಿವೆ. ಏಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಒಂದು ಎಸ್ಟಿಗೆ ಮೀಸಲಾಗಿದೆ ಎಂದರು.</p>.<p>ಯಾವುದೇ ವ್ಯಕ್ತಿ, ಏಕವ್ಯಕ್ತಿ ಮಾಲೀಕತ್ವದ ಸಂಸ್ಥೆ, ಟ್ರಸ್ಟ್, ಸೊಸೈಟಿ, ಪಾಲುದಾರಿಕೆ ಸಂಸ್ಥೆ, ಸೀಮಿತ ಪಾಲುದಾರಿಕೆ ಸಂಸ್ಥೆಗಳು ಇ–ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಇ–ಹರಾಜು ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರದ ಎಂಎಸ್ಟಿಸಿ ಲಿಮಿಟೆಡ್ನ ಇ–ಪೋರ್ಟಲ್ನಲ್ಲಿ ನಡೆಸಲಾಗುತ್ತದೆ. ಹರಾಜಿನಲ್ಲಿ ಭಾಗವಹಿಸಲು ಬಯಸುವವರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಪ್ರತಿ ನೋಂದಣಿಗೆ ₹1,000 ಶುಲ್ಕ ನಿಗದಿಪಡಿಸಲಾಗಿದೆ. ಪ್ರತಿ ಅರ್ಜಿಗೆ ₹50 ಸಾವಿರ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿ ಮಾಡಬೇಕು. ಈ ಹಣವನ್ನು ವಾಪಸ್ ಮಾಡಲಾಗುವುದಿಲ್ಲ. ಜತೆಗೆ ಪ್ರತಿ ಸನ್ನದಿಗೆ ಸಲ್ಲಿಸುವ ಅರ್ಜಿಯ ಜತೆಗೆ ಮೂಲ ಬೆಲೆಯ ಶೇ 2ರಷ್ಟು ಇಎಂಡಿ ಇರಿಸಬೇಕಾಗುತ್ತದೆ ಎಂದರು.</p>.<p>ಹರಾಜು ಬಿಡ್ಡಿಂಗ್ನಲ್ಲಿ ಸರ್ವರ್ ಡೌನ್ ಆದರೆ, ಮತ್ತೆ ಬಿಡ್ ಸಲ್ಲಿಸಲು ಅವಕಾಶ ನೀಡಲಾಗುವುದು. ಸರ್ವರ್ ತೊಂದರೆಯಾಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾರ್ಚ್ 2025ರಿಂದ ಐದು ವರ್ಷಗಳ ಅವಧಿಗೆ ನೀಡಲಾಗುತ್ತದೆ ಎಂದು ಹೇಳಿದರು.</p>.<p>ಅಬಕಾರಿ ಇಲಾಖೆ ಪ್ರಭಾರಿ ಉಪಆಯುಕ್ತ ತಿಪ್ಪೇಸ್ವಾಮಿ, ಸೂಪರಿಟೆಂಡೆಂಟ್ ಹನುಮಂತಪ್ಪ ಭಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>