ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಹಲವು ದಶಕಗಳ ಹಿಂದೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಾಖಲೆ ನಿರ್ಮಿಸುತ್ತಿರುವ ಶಾಲೆಗಳು ದಕ್ಷಿಣ ಕರ್ನಾಟಕದ ಭಾಗದಲ್ಲಿ ಹೆಚ್ಚು ಕಂಡು ಬರುತ್ತಿದ್ದವು. ಈ ವರ್ಷ ಅಂಕಿತಾಳ ಸಾಧನೆಯಿಂದಾಗಿ ಜಿಲ್ಲೆ ಅಷ್ಟೇ ಅಲ್ಲ, ಉತ್ತರ ಕರ್ನಾಟಕ ಭಾಗವು ಶೈಕ್ಷಣಿಕವಾಗಿ ಅಭಿವೃದ್ದಿಯತ್ತ ಸಾಗುತ್ತಿರುವುದು ಕಂಡುಬಂದಿದೆ ಎಂದರು.