<p><strong>ಬಾಗಲಕೋಟೆ:</strong> ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇ ಮೇಲ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿ ತಪಾಸಣೆ ನಡೆಸಿದರು.</p>.<p>ಬೆಳಿಗ್ಗೆ ಬಾಂಬ್ ಇಟ್ಟಿರುವ ಮೇಲ್ ವಿಷಯ ತಿಳಿಯುತ್ತಿದ್ದಂತೆಯೇ ಕಲಾಪವನ್ನೂ ಮುಂದೂಡಲಾಯಿತು. ಎಲ್ಲರನ್ನೂ ಹೊರಗೆ ಕಳುಹಿಸಲಾಯಿತು. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಯಿತು. ತಪಾಸಣೆ ನಂತರ ಹುಸಿ ಬೆದರಿಕೆ ಇ ಮೇಲ್ ಎಂಬುದು ಗೊತ್ತಾಯಿತು. ನಂತರ ಕಲಾಪಗಳು ಎಂದಿನಂತೆ ನಡೆದವು.</p>.<p>ನ್ಯಾಯಾಲಯದ ಇ–ಮೇಲ್ ಐಡಿಗೆ ಮೊಹಮ್ಮದ್ ವಿಕ್ರಂ ರಾಜಗುರು ಎನ್ನುವ ಹೆಸರಿನ ಐಡಿಯಿಂದ ಬಾಂಬ್ ಬೆದರಿಕೆ ಬಂದಿದೆ. ಮಧ್ಯಾಹ್ನ 1 ರಿಂದ 2ರೊಳಗೆ ರಿಮೋಟ್ ಮೂಲಕ ಬಾಂಬ್ ಸ್ಫೋಟ ಮಾಡಲಾಗುವುದು ಎಂದು ಬರೆಯಲಾಗಿತ್ತು</p>.<p>ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳಿಂದ ದೂರು ಪಡೆದುಕೊಂಡು ಕೇಸ್ ದಾಖಲಿಸಿಕೊಳ್ಳಲಾಗಿದೆ. ಇ– ಮೇಲ್ ಎಲ್ಲಿಂದ, ಯಾರಿಂದ ಬಂದಿದೆ ಎಂದು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಯಾರೂ ಭಯಪಡುವ ಅಗತ್ಯ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ಧಾರ್ಥ ಗೋಯಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇ ಮೇಲ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿ ತಪಾಸಣೆ ನಡೆಸಿದರು.</p>.<p>ಬೆಳಿಗ್ಗೆ ಬಾಂಬ್ ಇಟ್ಟಿರುವ ಮೇಲ್ ವಿಷಯ ತಿಳಿಯುತ್ತಿದ್ದಂತೆಯೇ ಕಲಾಪವನ್ನೂ ಮುಂದೂಡಲಾಯಿತು. ಎಲ್ಲರನ್ನೂ ಹೊರಗೆ ಕಳುಹಿಸಲಾಯಿತು. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಯಿತು. ತಪಾಸಣೆ ನಂತರ ಹುಸಿ ಬೆದರಿಕೆ ಇ ಮೇಲ್ ಎಂಬುದು ಗೊತ್ತಾಯಿತು. ನಂತರ ಕಲಾಪಗಳು ಎಂದಿನಂತೆ ನಡೆದವು.</p>.<p>ನ್ಯಾಯಾಲಯದ ಇ–ಮೇಲ್ ಐಡಿಗೆ ಮೊಹಮ್ಮದ್ ವಿಕ್ರಂ ರಾಜಗುರು ಎನ್ನುವ ಹೆಸರಿನ ಐಡಿಯಿಂದ ಬಾಂಬ್ ಬೆದರಿಕೆ ಬಂದಿದೆ. ಮಧ್ಯಾಹ್ನ 1 ರಿಂದ 2ರೊಳಗೆ ರಿಮೋಟ್ ಮೂಲಕ ಬಾಂಬ್ ಸ್ಫೋಟ ಮಾಡಲಾಗುವುದು ಎಂದು ಬರೆಯಲಾಗಿತ್ತು</p>.<p>ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳಿಂದ ದೂರು ಪಡೆದುಕೊಂಡು ಕೇಸ್ ದಾಖಲಿಸಿಕೊಳ್ಳಲಾಗಿದೆ. ಇ– ಮೇಲ್ ಎಲ್ಲಿಂದ, ಯಾರಿಂದ ಬಂದಿದೆ ಎಂದು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಯಾರೂ ಭಯಪಡುವ ಅಗತ್ಯ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ಧಾರ್ಥ ಗೋಯಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>