<p><strong>ಮುಧೋಳ:</strong> ನಕಲಿ ಗುಟ್ಕಾ ಮತ್ತು ತಂಬಾಕು ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಯಲ್ಲಿ ಮಾರುತ್ತಿದ್ದ ರಾಜ್ಯ ಹಾಗೂ ಹೊರ ರಾಜ್ಯಗಳ ಒಂಬತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ದೇವದುರ್ಗದ ಮಹಮ್ಮದ್ ವಶೀಂ, ಹೈದರಾಬಾದ್ನ ಮುನೀರ್, ಹಿಮಾಯತ, ದೆಹಲಿಯ ಮಹಮ್ಮದ್ ಅಲಿ, ನಿಪ್ಪಾಣಿಯ ವಿಕಾಸ ಚವಾಣ್, ಸಂತೋಷ ಬಳ್ಳೊಳ್ಳೆ, ಬೆಳಗಾವಿಯ ಜಹೀರ್ ಅಬ್ಬಾಸ್, ನದೀಮ್ ಮತ್ತು ಇಕ್ಬಾಲ್ ಬಂಧಿತರು. ನಕಲಿ ವಸ್ತುಗಳು, ಪ್ಲಾಸ್ಟಿಕ್ ಸ್ಯಾಶೆ, ಯಂತ್ರಗಳು ಸೇರಿ ₹ 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆರೋಪಿಗಳು ನಕಲಿ ಆರ್ಎಂಡಿ ಪಾನ್ ಮಸಾಲಾ ಮತ್ತು ಎಂ ಗೋಲ್ಡ್ ಸುಗಂಧಿತ ತಂಬಾಕನ್ನು ಸಿದ್ಧಪಡಿಸಿ ಮಾರುತ್ತಿದ್ದು, ಆರ್ಥಿಕವಾಗಿ ನಷ್ಟವಾಗುತ್ತಿರುವ ಬಗ್ಗೆ ತಂಬಾಕು ಸಂಸ್ಥೆಯವರು ಮುಧೋಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ತನಿಖೆ ಕೈಗೊಂಡು ದೆಹಲಿ ಸೇರಿ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಿಪಿಐ ಆರ್.ಆರ್.ಪಾಟೀಲ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಅಜಿತಕುಮಾರ ಹೊಸಮನಿ, ರಮೇಶ ಪಾಟೀಲ, ರಾಕೇಶ ಬಗಲಿ ಪೊಲೀಸ್ ಸಿಬ್ಬಂದಿ ಆರ್.ಬಿ.ಕಟಗೇರಿ, ಬೀರಪ್ಪ ಕುರಿ, ಹನಮಂತ ಮಾದರ, ಮಾರುತಿ ದಳವಾಯಿ, ದಾದಾಪೀರ್ ಅತ್ರಾವತ, ಎಚ್.ವೈ. ಕೋಳಿ, ಎನ್.ವೈ. ಐದಮನಿ ಅವರ ತಂಡ ಕಾರ್ಯಾಚರಣೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ:</strong> ನಕಲಿ ಗುಟ್ಕಾ ಮತ್ತು ತಂಬಾಕು ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಯಲ್ಲಿ ಮಾರುತ್ತಿದ್ದ ರಾಜ್ಯ ಹಾಗೂ ಹೊರ ರಾಜ್ಯಗಳ ಒಂಬತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ದೇವದುರ್ಗದ ಮಹಮ್ಮದ್ ವಶೀಂ, ಹೈದರಾಬಾದ್ನ ಮುನೀರ್, ಹಿಮಾಯತ, ದೆಹಲಿಯ ಮಹಮ್ಮದ್ ಅಲಿ, ನಿಪ್ಪಾಣಿಯ ವಿಕಾಸ ಚವಾಣ್, ಸಂತೋಷ ಬಳ್ಳೊಳ್ಳೆ, ಬೆಳಗಾವಿಯ ಜಹೀರ್ ಅಬ್ಬಾಸ್, ನದೀಮ್ ಮತ್ತು ಇಕ್ಬಾಲ್ ಬಂಧಿತರು. ನಕಲಿ ವಸ್ತುಗಳು, ಪ್ಲಾಸ್ಟಿಕ್ ಸ್ಯಾಶೆ, ಯಂತ್ರಗಳು ಸೇರಿ ₹ 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆರೋಪಿಗಳು ನಕಲಿ ಆರ್ಎಂಡಿ ಪಾನ್ ಮಸಾಲಾ ಮತ್ತು ಎಂ ಗೋಲ್ಡ್ ಸುಗಂಧಿತ ತಂಬಾಕನ್ನು ಸಿದ್ಧಪಡಿಸಿ ಮಾರುತ್ತಿದ್ದು, ಆರ್ಥಿಕವಾಗಿ ನಷ್ಟವಾಗುತ್ತಿರುವ ಬಗ್ಗೆ ತಂಬಾಕು ಸಂಸ್ಥೆಯವರು ಮುಧೋಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ತನಿಖೆ ಕೈಗೊಂಡು ದೆಹಲಿ ಸೇರಿ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಿಪಿಐ ಆರ್.ಆರ್.ಪಾಟೀಲ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಅಜಿತಕುಮಾರ ಹೊಸಮನಿ, ರಮೇಶ ಪಾಟೀಲ, ರಾಕೇಶ ಬಗಲಿ ಪೊಲೀಸ್ ಸಿಬ್ಬಂದಿ ಆರ್.ಬಿ.ಕಟಗೇರಿ, ಬೀರಪ್ಪ ಕುರಿ, ಹನಮಂತ ಮಾದರ, ಮಾರುತಿ ದಳವಾಯಿ, ದಾದಾಪೀರ್ ಅತ್ರಾವತ, ಎಚ್.ವೈ. ಕೋಳಿ, ಎನ್.ವೈ. ಐದಮನಿ ಅವರ ತಂಡ ಕಾರ್ಯಾಚರಣೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>