ಯರಗಟ್ಟಿ: ಕೈಕೊಟ್ಟ ಬೆಳೆ, ರೈತ ಆತ್ಮಹತ್ಯೆ

ರಬಕವಿ ಬನಹಟ್ಟಿ: ತಾಲ್ಲೂಕಿನ ಯರಗಟ್ಟಿ ಗ್ರಾಮದ ರೈತ ಮಹಾದೇವ ಮಾದರ (35) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಾದೇವ ₹ 2 ಲಕ್ಷ ಸಾಲ ಮಾಡಿದ್ದು, ಸರಿಯಾದ ರೀತಿಯಲ್ಲಿ ಬೆಳೆ ಬಾರದೆ ಇರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಸಿಪಿಐ ಜೆ.ಕರುಣೇಶಗೌಡ, ಪಿಎಸ್ಐ ಸುರೇಶ ಮಂಟೂರ, ಹೆಚ್ಚುವರಿ ಪಿಎಸ್ಐ ಪುರದಂರ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗೊಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.