ತಾಲ್ಲೂಕಿನ ಮರೋಳ ಗ್ರಾಮದ ಹತ್ತಿರವಿರುವ ಜಿಂದಾಲ್ ಕಂಪನಿಗೆ ನೀರು ಪೂರೈಸುವ ಪಂಪ್ ಹೌಸ್ ಗೇಟಿಗೆ ಹಾಕಲಾಗಿದ್ದ ಬೀಗವನ್ನು ಒಡೆದು ಒಳನುಗ್ಗಿದರು.
ಪಂಪ್ ಹೌಸ್ ಒಳ ಹೋಗಲು ರೈತರು ಮುನ್ನಗ್ಗಿದಾಗ ಭದ್ರತಾ ಸಿಬ್ಬಂದಿ ಪ್ರತಿರೋಧ ವ್ಯಕ್ತಪಡಿಸಿದರು. ಇದರಿಂದ ಮಾತಿನ ಚಕಮಕಿ ನಡೆಯಿತು. ಗೇಟ್ ಮುರಿದು ಒಳನುಗ್ಗಿ, ನೀರು ಪೂರೈಕೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ಅಲ್ಲಿನ ಸಿಬ್ಬಂದಿ ಸ್ಥಗಿತಗೊಳಿಸಿದರು.
ಬೆಳೆಗಳಿಗೆ ನೀರಿಲ್ಲದೇ ಒಣಗುತ್ತಿವೆ. ನೀರು ಬಿಡುವಂತೆ ಮನವಿ ಮಾಡಿದರೂ ಕಾಲುವೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಿದ್ದಾರೆ. ಆದರೆ, ಜಿಂದಾಲ್ಗೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡರಾದ ಗುರು ಗಾಣಿಗೇರ, ರಸೂಲ್ ಸಾಬ್ ತಹಶೀಲ್ದಾರ್, ಬಸನಗೌಡ ಸೇರಿದಂತೆ ವಿವಿಧ ಗ್ರಾಮಗಳ 50ಕ್ಕೂ ಹೆಚ್ಚು ರೈತರು ಪಾಲ್ಗೊಂಡಿದ್ದರು.