<p><strong>ಬಾದಾಮಿ</strong>: ‘ನಸಬಿ ಗ್ರಾಮದ ಸಮೀಪ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಕಾಮಗಾರಿ ಅವೈಜ್ಞಾನಿವಾಗಿ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಸರಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು’ ಎಂದು ರೈತರು ಹುಬ್ಬಳ್ಳಿ ವಿಭಾಗದ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ತಾಲ್ಲೂಕಿನ ನಸಬಿ ಗ್ರಾಮದ ಸಮೀಪ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಬಾಣಾಪುರ-ಗದ್ದನಕೇರಿ 367 ರಾಷ್ಟ್ರೀಯ ಹೆದ್ದಾರಿ ಕುರಿತು ರೈತರು ಸೋಮವಾರ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ರೈತರು ಬೆಳೆ ಸಾಗಿಸಲು ಸರ್ವಿಸ್ ರಸ್ತೆ ನಿರ್ಮಿಸಬೇಕು. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುವ ಸೇತುವೆಯನ್ನು ನದಿಯಿಂದ ಶಿವಯೋಗಮಂದಿರ ರಸ್ತೆ ವರೆಗೆ ಕಾಲಂ ಸೇತುವೆ ರೂಪಿಸಲು ರೈತರು ಆಗ್ರಹಿಸಿದರು.</p>.<p>‘ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಕಾಮಗಾರಿ ಪರಿಶೀಲನೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮತ್ತು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ಹುಬ್ಬಳ್ಳಿ ವಿಭಾಗದ ರಾಷ್ಟ್ರೀಯ ಹೆದ್ದಾರಿ ರಸ್ತೆ ಎಂಜಿನಿಯರ್ ವೀರೇಶ ಪಾಟೀಲ ಪ್ರತಿಕ್ರಿಯಿಸಿದರು.</p>.<p>ನಾಗರಾಳ ಎಸ್.ಪಿ, ಚೊಳಚಗುಡ್ಡ, ನಸಬಿ, ನವಿಲುಹೊಳೆ, ಮುಮರಡ್ಡಿಕೊಪ್ಪ ಮತ್ತು ನೆಲವಗಿ ಗ್ರಾಮದ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong>: ‘ನಸಬಿ ಗ್ರಾಮದ ಸಮೀಪ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಕಾಮಗಾರಿ ಅವೈಜ್ಞಾನಿವಾಗಿ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಸರಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು’ ಎಂದು ರೈತರು ಹುಬ್ಬಳ್ಳಿ ವಿಭಾಗದ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ತಾಲ್ಲೂಕಿನ ನಸಬಿ ಗ್ರಾಮದ ಸಮೀಪ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಬಾಣಾಪುರ-ಗದ್ದನಕೇರಿ 367 ರಾಷ್ಟ್ರೀಯ ಹೆದ್ದಾರಿ ಕುರಿತು ರೈತರು ಸೋಮವಾರ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ರೈತರು ಬೆಳೆ ಸಾಗಿಸಲು ಸರ್ವಿಸ್ ರಸ್ತೆ ನಿರ್ಮಿಸಬೇಕು. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುವ ಸೇತುವೆಯನ್ನು ನದಿಯಿಂದ ಶಿವಯೋಗಮಂದಿರ ರಸ್ತೆ ವರೆಗೆ ಕಾಲಂ ಸೇತುವೆ ರೂಪಿಸಲು ರೈತರು ಆಗ್ರಹಿಸಿದರು.</p>.<p>‘ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಕಾಮಗಾರಿ ಪರಿಶೀಲನೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮತ್ತು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ಹುಬ್ಬಳ್ಳಿ ವಿಭಾಗದ ರಾಷ್ಟ್ರೀಯ ಹೆದ್ದಾರಿ ರಸ್ತೆ ಎಂಜಿನಿಯರ್ ವೀರೇಶ ಪಾಟೀಲ ಪ್ರತಿಕ್ರಿಯಿಸಿದರು.</p>.<p>ನಾಗರಾಳ ಎಸ್.ಪಿ, ಚೊಳಚಗುಡ್ಡ, ನಸಬಿ, ನವಿಲುಹೊಳೆ, ಮುಮರಡ್ಡಿಕೊಪ್ಪ ಮತ್ತು ನೆಲವಗಿ ಗ್ರಾಮದ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>