<p><strong>ಕೆರೂರ</strong>: ಪಟ್ಟಣ ಸೇರಿದಂತೆ ಹೋಬಳಿಯ ಸುತ್ತಮುತ್ತ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರೈತರು ಯೂರಿಯಾ ಗೊಬ್ಬರ ಖರೀದಿಸಲು ಅಂಗಡಿಗೆ ಮುಗಿಬಿದ್ದ ದೃಶ್ಯ ಮಂಗಳವಾರ ಕಂಡುಬಂತು.</p>.<p>ಭರದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರು, ಹೆಚ್ಚಾಗಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ಕಳೆದ 15 ದಿನಗಳಿಂದ ಗೊಬ್ಬರಕ್ಕಾಗಿ ಅಲೆದಾಡುವುದು ಸಾಮಾನ್ಯವಾಗಿತ್ತು.</p>.<p>‘ಕೇವಲ 170 ಚೀಲ ಗೊಬ್ಬರ ಬಂದಿರುವುದರಿಂದ ಕೆಲವೇ ರೈತರು ಖರೀದಿಸಿದ್ದಾರೆ. ಕೆಲವರು ನಿರಾಸೆಯಿಂದ ಹಿಂದಿರುಗಿದ್ದಾರೆ. ಅಗತ್ಯಕ್ಕೆ ತಕ್ಕಂತೆ ಗೊಬ್ಬರ ಪೂರೈಕೆಯಾಗುತ್ತಿಲ್ಲ’ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ರೈತರನ್ನು ನಿಯಂತ್ರಿಸಲು ಪೊಲೀಸರು ಸಹಾಯದೊಂದಿಗೆ ಗೊಬ್ಬರ ವಿತರಣೆ ಮಾಡಲಾಯಿತು.</p>.<p>‘ಒಂದು ಆಧಾರ್ ಕಾರ್ಡ್ಗೆ 1ರಿಂದ 2 ಚೀಲ ಪೂರೈಕೆ ಮಾಡಲಾಗಿದೆ’ ಎಂದು ರಡ್ಡೇರ ತಿಮ್ಮಾಪೂರ ಪಿಕೆಪಿಎಸ್ ಸೊಸೈಟಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ</strong>: ಪಟ್ಟಣ ಸೇರಿದಂತೆ ಹೋಬಳಿಯ ಸುತ್ತಮುತ್ತ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರೈತರು ಯೂರಿಯಾ ಗೊಬ್ಬರ ಖರೀದಿಸಲು ಅಂಗಡಿಗೆ ಮುಗಿಬಿದ್ದ ದೃಶ್ಯ ಮಂಗಳವಾರ ಕಂಡುಬಂತು.</p>.<p>ಭರದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರು, ಹೆಚ್ಚಾಗಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ಕಳೆದ 15 ದಿನಗಳಿಂದ ಗೊಬ್ಬರಕ್ಕಾಗಿ ಅಲೆದಾಡುವುದು ಸಾಮಾನ್ಯವಾಗಿತ್ತು.</p>.<p>‘ಕೇವಲ 170 ಚೀಲ ಗೊಬ್ಬರ ಬಂದಿರುವುದರಿಂದ ಕೆಲವೇ ರೈತರು ಖರೀದಿಸಿದ್ದಾರೆ. ಕೆಲವರು ನಿರಾಸೆಯಿಂದ ಹಿಂದಿರುಗಿದ್ದಾರೆ. ಅಗತ್ಯಕ್ಕೆ ತಕ್ಕಂತೆ ಗೊಬ್ಬರ ಪೂರೈಕೆಯಾಗುತ್ತಿಲ್ಲ’ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ರೈತರನ್ನು ನಿಯಂತ್ರಿಸಲು ಪೊಲೀಸರು ಸಹಾಯದೊಂದಿಗೆ ಗೊಬ್ಬರ ವಿತರಣೆ ಮಾಡಲಾಯಿತು.</p>.<p>‘ಒಂದು ಆಧಾರ್ ಕಾರ್ಡ್ಗೆ 1ರಿಂದ 2 ಚೀಲ ಪೂರೈಕೆ ಮಾಡಲಾಗಿದೆ’ ಎಂದು ರಡ್ಡೇರ ತಿಮ್ಮಾಪೂರ ಪಿಕೆಪಿಎಸ್ ಸೊಸೈಟಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>