<p><strong>ಬೀಳಗಿ</strong>: ತಾಲ್ಲೂಕಿನ ರೈತರು ಮುಂಗಾರು ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ವಿಮೆ ಮಾಡಿಸಿದ ಬೆಳೆ ಹಾಗೂ ಪಹಣಿಯಲ್ಲಿ ದಾಖಲಾದ ಬೆಳೆ ವ್ಯತ್ಯಾಸದಿಂದ ಮುಂಗಾರು ಹಂಗಾಮಿನಲ್ಲಿ 52 ಹಾಗೂ ಹಿಂಗಾರು ಹಂಗಾಮಿನಲ್ಲಿ 4 ಅರ್ಜಿಗಳು ತಿರಸ್ಕೃತಗೊಂಡಿವೆ.</p>.<p>ರೈತರ ವಿವರವನ್ನು ಬೀಳಗಿ ತಾಲ್ಲೂಕಿನ ಕೃಷಿ / ತೋಟಗಾರಿಕೆ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರ, ಬೀಳಗಿ/ಅನಗವಾಡಿ ಕಚೇರಿಗಳ ಸೂಚನಾ ಫಲಕಗಳ ಮೇಲೆ ಅಳವಡಿಸಲಾಗಿದೆ.</p>.<p>ಈ ಕುರಿತು ಆಕ್ಷೇಪಣೆ ಇದ್ದಲ್ಲಿ ಮರು ಪರಿಶೀಲನೆಗೆ ರೈತರು ಪ್ರಕಟಣೆಯ ದಿನಾಂಕದಿಂದ 15 ದಿನದೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಪ್ರಕಟಣೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಆಕ್ಷೇಪಣೆಗೆ ಸಲ್ಲಿಸಲು ಬೇಕಾದ ದಾಖಲಾತಿಗಳು: 2022-23 ರ ಪಹಣಿ ಪತ್ರಿಕೆಯಲ್ಲಿ (ಆರ್ಟಿಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನೆ ಪಡೆದ ರಶೀದಿ ಹಾಗೂ ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ರಶೀದಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ತಾಲ್ಲೂಕಿನ ರೈತರು ಮುಂಗಾರು ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ವಿಮೆ ಮಾಡಿಸಿದ ಬೆಳೆ ಹಾಗೂ ಪಹಣಿಯಲ್ಲಿ ದಾಖಲಾದ ಬೆಳೆ ವ್ಯತ್ಯಾಸದಿಂದ ಮುಂಗಾರು ಹಂಗಾಮಿನಲ್ಲಿ 52 ಹಾಗೂ ಹಿಂಗಾರು ಹಂಗಾಮಿನಲ್ಲಿ 4 ಅರ್ಜಿಗಳು ತಿರಸ್ಕೃತಗೊಂಡಿವೆ.</p>.<p>ರೈತರ ವಿವರವನ್ನು ಬೀಳಗಿ ತಾಲ್ಲೂಕಿನ ಕೃಷಿ / ತೋಟಗಾರಿಕೆ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರ, ಬೀಳಗಿ/ಅನಗವಾಡಿ ಕಚೇರಿಗಳ ಸೂಚನಾ ಫಲಕಗಳ ಮೇಲೆ ಅಳವಡಿಸಲಾಗಿದೆ.</p>.<p>ಈ ಕುರಿತು ಆಕ್ಷೇಪಣೆ ಇದ್ದಲ್ಲಿ ಮರು ಪರಿಶೀಲನೆಗೆ ರೈತರು ಪ್ರಕಟಣೆಯ ದಿನಾಂಕದಿಂದ 15 ದಿನದೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಪ್ರಕಟಣೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಆಕ್ಷೇಪಣೆಗೆ ಸಲ್ಲಿಸಲು ಬೇಕಾದ ದಾಖಲಾತಿಗಳು: 2022-23 ರ ಪಹಣಿ ಪತ್ರಿಕೆಯಲ್ಲಿ (ಆರ್ಟಿಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನೆ ಪಡೆದ ರಶೀದಿ ಹಾಗೂ ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ರಶೀದಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>