<p><strong>ಕೆರೂರ</strong>: ಇಲ್ಲಿಯ ಹರಣಶಿಕಾರಿ ಜನಾಂಗದ ದುರ್ಗಾದೇವಿ ಜಾತ್ರೆ ಶುಕ್ರವಾರ ಸಂಭ್ರಮದಿಂದ ನಡೆಯಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ನಡೆಯಿತು. ನಂತರ ಪಲ್ಲಕ್ಕಿಯಲ್ಲಿ ದೇವಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಸಂಜೆ ದೇವಸ್ಥಾನದಲ್ಲಿ 11 ಕಾಯಿಗಳನ್ನು ದೇವಸ್ಥಾನದ ಅರ್ಚಕ ಬಾಬು ಪೂಜಾರಿ ತಲೆಗೆ ಒಡೆದುಕೊಂಡು,ಈ ಬಾರಿ ಉತ್ತಮ ಮಳೆ, ಬೆಳೆ ಆಗಲಿದೆ ಎಂದು ದೈವವಾಣಿ ನುಡಿದರು.</p>.<p>ದೇವಸ್ಥಾನಕ್ಕೆ ಬಂದಿದ್ದ ನೂರಾರು ಭಕ್ತರು ಸರತಿಯಲ್ಲಿ ನಿಂತು ದೇವಿಯ ಆಶೀರ್ವಾದ ಪಡೆದರು. ಜಾತ್ರೆ ಅಂಗವಾಗಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಜಿ.ಕಿತ್ತಲಿ, ಬಿ.ಕೆ.ಕೊವಳ್ಳಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಮದಿ, ಉಪಾಧ್ಯಕ್ಷ ಮೋದಿನಸಾಬ ಚಿಕ್ಕೂರ, ಪಟ್ಟಣ ಪಂಚಾಯಿತಿ ಸದಸ್ಯರಾದ ವಿಠ್ಠಲಗೌಡ ಗೌಡರ, ಬಸವರಾಜ ಹರಣಶಿಕಾರಿ, ಪ್ರಮುಖರಾದ ಬಾಬು ಹರಣಶಿಕಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ</strong>: ಇಲ್ಲಿಯ ಹರಣಶಿಕಾರಿ ಜನಾಂಗದ ದುರ್ಗಾದೇವಿ ಜಾತ್ರೆ ಶುಕ್ರವಾರ ಸಂಭ್ರಮದಿಂದ ನಡೆಯಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ನಡೆಯಿತು. ನಂತರ ಪಲ್ಲಕ್ಕಿಯಲ್ಲಿ ದೇವಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಸಂಜೆ ದೇವಸ್ಥಾನದಲ್ಲಿ 11 ಕಾಯಿಗಳನ್ನು ದೇವಸ್ಥಾನದ ಅರ್ಚಕ ಬಾಬು ಪೂಜಾರಿ ತಲೆಗೆ ಒಡೆದುಕೊಂಡು,ಈ ಬಾರಿ ಉತ್ತಮ ಮಳೆ, ಬೆಳೆ ಆಗಲಿದೆ ಎಂದು ದೈವವಾಣಿ ನುಡಿದರು.</p>.<p>ದೇವಸ್ಥಾನಕ್ಕೆ ಬಂದಿದ್ದ ನೂರಾರು ಭಕ್ತರು ಸರತಿಯಲ್ಲಿ ನಿಂತು ದೇವಿಯ ಆಶೀರ್ವಾದ ಪಡೆದರು. ಜಾತ್ರೆ ಅಂಗವಾಗಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಜಿ.ಕಿತ್ತಲಿ, ಬಿ.ಕೆ.ಕೊವಳ್ಳಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಮದಿ, ಉಪಾಧ್ಯಕ್ಷ ಮೋದಿನಸಾಬ ಚಿಕ್ಕೂರ, ಪಟ್ಟಣ ಪಂಚಾಯಿತಿ ಸದಸ್ಯರಾದ ವಿಠ್ಠಲಗೌಡ ಗೌಡರ, ಬಸವರಾಜ ಹರಣಶಿಕಾರಿ, ಪ್ರಮುಖರಾದ ಬಾಬು ಹರಣಶಿಕಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>