ಇತ್ತ, ಪಿಎಸ್ಐ ಪ್ರವೀಣ ಬೀಳಗಿ ನೇತೃತ್ವದ ತಂಡವು ಕವಿತಾ ಬಾಡನವರ ಅವರನ್ನು ಅವರ ಮನೆಗೆ ಕರೆದೊಯ್ದು ಪಂಚನಾಮೆ ನಡೆಸಿತು. ಬಾಡನವರ ಮನೆಯಲ್ಲಿ ಗರ್ಭಪಾತ ನಡೆದಿರುವ ಕಾರಣ, ಬನಹಟ್ಟಿ ಪಿಎಸ್ಸೈ ಶಾಂತಾ ಹಳ್ಳಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಿ.ಎಂ. ವಜ್ಜರಮಟ್ಟಿ, ಕಾನ್ಸ್ಟೆಬಲ್ಗಳಾದ ರೂಪಾ ರಾಚನ್ನವರ, ರೇಣುಕಾ ಪಾಟೀಲ, ದೀಪಾ ಹುಲ್ಯಾಳ ಹಾಗೂ ಸಾಕ್ಷಿದಾರರ ಸಮ್ಮುಖದಲ್ಲಿ ಸ್ಥಳದ ಪಂಚನಾಮೆ ನಡೆಸಲಾಯಿತು.