<p><strong>ಹುನಗುಂದ:</strong> ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ಪರಸ್ಪರ ಅರ್ಥಮಾಡಿಕೊಂಡು ಸುಖ ಸಂಸಾರ ನಡೆಸಬೇಕು ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.</p>.<p>ಸಮೀಪದ ಇಲಾಳ ಗ್ರಾಮದಲ್ಲಿ ಸೋಮವಾರ ನಡೆದ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗ್ರಾಮದಲ್ಲಿ ಜಾತಿ, ಮತ, ಪಂಥಗಳ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಸದ್ಭಾವನೆಯಿಂದ ಈ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸೊಸೆಯು ಅತ್ತೆ- ಮಾವಂದಿರನ್ನು ಹೆತ್ತ ತಂದೆ- ತಾಯಿಯಂತೆ ನೋಡಿಕೊಳ್ಳಬೇಕು. ಅತ್ತೆ-ಮಾವಂದಿರು ಸೊಸೆಯನ್ನು ಮಗಳಂತೆ ಕಾಣಬೇಕು. ಈ ಮೂಲಕ ಎರಡೂ ಮನೆತನದ ಕೀರ್ತಿ ಹೆಚ್ಚಿಸಬೇಕು ಎಂದರು.</p>.<p>ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 15 ಜೋಡಿಗಳು ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಹುನಗುಂದದ ಅಮರೇಶ್ವರ ದೇವರು, ಸರೂರಿನ ರೇವಣಸಿದ್ದಯ್ಯ ಗುರುವಿನ, ಬಾದಿಮನಾಳದ ಶಿವಸಿದ್ದೇಶ್ವರ ಸ್ವಾಮೀಜಿ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಬೊಮ್ಮಲಿಂಗಯ್ಯ ಕಟಾಪಪೂರಮಠ, ಶರಣಪ್ಪ ಗೋಡಿ, ಮಲ್ಲಯ್ಯ ಮುಗನೂರಮಠ, ಪ್ರಕಾಶ್ ಗೋಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ:</strong> ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ಪರಸ್ಪರ ಅರ್ಥಮಾಡಿಕೊಂಡು ಸುಖ ಸಂಸಾರ ನಡೆಸಬೇಕು ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.</p>.<p>ಸಮೀಪದ ಇಲಾಳ ಗ್ರಾಮದಲ್ಲಿ ಸೋಮವಾರ ನಡೆದ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗ್ರಾಮದಲ್ಲಿ ಜಾತಿ, ಮತ, ಪಂಥಗಳ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಸದ್ಭಾವನೆಯಿಂದ ಈ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸೊಸೆಯು ಅತ್ತೆ- ಮಾವಂದಿರನ್ನು ಹೆತ್ತ ತಂದೆ- ತಾಯಿಯಂತೆ ನೋಡಿಕೊಳ್ಳಬೇಕು. ಅತ್ತೆ-ಮಾವಂದಿರು ಸೊಸೆಯನ್ನು ಮಗಳಂತೆ ಕಾಣಬೇಕು. ಈ ಮೂಲಕ ಎರಡೂ ಮನೆತನದ ಕೀರ್ತಿ ಹೆಚ್ಚಿಸಬೇಕು ಎಂದರು.</p>.<p>ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 15 ಜೋಡಿಗಳು ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಹುನಗುಂದದ ಅಮರೇಶ್ವರ ದೇವರು, ಸರೂರಿನ ರೇವಣಸಿದ್ದಯ್ಯ ಗುರುವಿನ, ಬಾದಿಮನಾಳದ ಶಿವಸಿದ್ದೇಶ್ವರ ಸ್ವಾಮೀಜಿ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಬೊಮ್ಮಲಿಂಗಯ್ಯ ಕಟಾಪಪೂರಮಠ, ಶರಣಪ್ಪ ಗೋಡಿ, ಮಲ್ಲಯ್ಯ ಮುಗನೂರಮಠ, ಪ್ರಕಾಶ್ ಗೋಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>