<p><strong>ಬಾದಾಮಿ:</strong> ‘ನಿತ್ಯ ಜೀವನದಲ್ಲಿ ಅಗ್ನಿಯಿಂದಾಗುವ ಅಪಾಯಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮುನ್ನೆಚ್ಚರಿಕೆ ಕುರಿತು ತಿಳಿವಳಿಕೆ ಪಡೆಯುವುದು ಅವಶ್ಯಕ’ ಎಂದು ಅಗ್ನಿ ಶಾಮಕ ದಳದ ರಾಜು ಲಮಾಣಿ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.</p>.<p>ಇಲ್ಲಿನ ಎಸ್.ಬಿ. ಮಮದಾಪುರ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದಿಂದ ಅಗ್ನಿಶಾಮಕದಳ ಆಶ್ರಯದಲ್ಲಿ ಗುರುವಾರ ಅಗ್ನಿ ಅವಘಡದ ಬಗ್ಗೆ ನಡೆದ ಪ್ರಾತ್ಯಕ್ಷಿಕೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಗ್ನಿಯಲ್ಲಿ ಎ.ಬಿ.ಸಿ.ಡಿ ಎಂದು ನಾಲ್ಕು ಪ್ರಕಾರಗಳಿವೆ. ಇವುಗಳಿಂದ ಅನಾಹುತ ತಪ್ಪಿಸಲು ವಿವಿಧ ರೀತಿಯ ಜ್ಞಾನದ ಕೌಶಲ ಅವಶ್ಯವಾಗಿದೆ’ ಎಂದು ಅಗ್ನಿಶಾಮಕ ಠಾಣಾಧಿಕಾರಿ ಬಿ.ಪಿ. ಮರಡಿ ಹೇಳಿದರು.</p>.<p>ಪ್ರಾಚಾರ್ಯ ಎ.ಎ. ತೋಪಲಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಗ್ನಿಶಾಮಕ ಸಿಬ್ಬಂದಿ ಪ್ರವೀಣ ಮಾಡಲಗೇರಿ, ಬಿ.ಟಿ. ಕೋನೇರಿ, ಎಲ್.ಎ. ಓಗೆನ್ನವರ, ಬಸವರಾಜ ಹಗರಗುಂಡಿ, ಶ್ರೀಧರ ದೊಡಮನಿ, ಎಸ್.ಆರ್. ಮಗಿ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ನಿತ್ಯ ಜೀವನದಲ್ಲಿ ಅಗ್ನಿಯಿಂದಾಗುವ ಅಪಾಯಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮುನ್ನೆಚ್ಚರಿಕೆ ಕುರಿತು ತಿಳಿವಳಿಕೆ ಪಡೆಯುವುದು ಅವಶ್ಯಕ’ ಎಂದು ಅಗ್ನಿ ಶಾಮಕ ದಳದ ರಾಜು ಲಮಾಣಿ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.</p>.<p>ಇಲ್ಲಿನ ಎಸ್.ಬಿ. ಮಮದಾಪುರ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದಿಂದ ಅಗ್ನಿಶಾಮಕದಳ ಆಶ್ರಯದಲ್ಲಿ ಗುರುವಾರ ಅಗ್ನಿ ಅವಘಡದ ಬಗ್ಗೆ ನಡೆದ ಪ್ರಾತ್ಯಕ್ಷಿಕೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಗ್ನಿಯಲ್ಲಿ ಎ.ಬಿ.ಸಿ.ಡಿ ಎಂದು ನಾಲ್ಕು ಪ್ರಕಾರಗಳಿವೆ. ಇವುಗಳಿಂದ ಅನಾಹುತ ತಪ್ಪಿಸಲು ವಿವಿಧ ರೀತಿಯ ಜ್ಞಾನದ ಕೌಶಲ ಅವಶ್ಯವಾಗಿದೆ’ ಎಂದು ಅಗ್ನಿಶಾಮಕ ಠಾಣಾಧಿಕಾರಿ ಬಿ.ಪಿ. ಮರಡಿ ಹೇಳಿದರು.</p>.<p>ಪ್ರಾಚಾರ್ಯ ಎ.ಎ. ತೋಪಲಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಗ್ನಿಶಾಮಕ ಸಿಬ್ಬಂದಿ ಪ್ರವೀಣ ಮಾಡಲಗೇರಿ, ಬಿ.ಟಿ. ಕೋನೇರಿ, ಎಲ್.ಎ. ಓಗೆನ್ನವರ, ಬಸವರಾಜ ಹಗರಗುಂಡಿ, ಶ್ರೀಧರ ದೊಡಮನಿ, ಎಸ್.ಆರ್. ಮಗಿ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>