<p><strong>ಮಹಾಲಿಂಗಪುರ:</strong> ಆಕಸ್ಮಿಕ ಬೆಂಕಿ ಅವಘಡದಿಂದ ಆಗುವ ಹಾನಿ ತಪ್ಪಿಸಲು ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲು ಅಗ್ನಿಶಾಮಕ ಇಲಾಖೆ ಮುಂದಾಗಿದ್ದು, ಠಾಣೆ ಸ್ಥಾಪಿಸಲು ಅಗತ್ಯವಿರುವ ಜಾಗವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದೆ.</p>.<p>ಈ ಭಾಗದಲ್ಲಿ ಅಧಿಕ ಕಬ್ಬು ಬೆಳೆಯಲಾಗುತ್ತದೆ. ಪ್ರತಿವರ್ಷ ಡಿಸೆಂಬರ್-ಮಾರ್ಚ್ ಅವಧಿಯಲ್ಲಿ ಕಾರ್ಖಾನೆಗಳಿಗೆ ಕಬ್ಬು ಸಾಗಣೆ ಮಾಡಲಾಗುತ್ತದೆ. ಈ ವೇಳೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಹಾನಿ ಆಗುತ್ತಿದೆ. ಅಲ್ಲದೆ, ಬೇರೆ ಬೇರೆ ಗೃಹ ಕೈಗಾರಿಕಾ ಉತ್ಪಾದನಾ ಘಟಕಗಳು ಇಲ್ಲಿದ್ದು, ಆಗಾಗ್ಗೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಈ ಕಾರಣ ಅಗ್ನಿಶಾಮಕ ಇಲಾಖೆಯು ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲು ಒಂದು ವರ್ಷದಿಂದ ಪ್ರಯತ್ನಿಸುತ್ತಿದೆ.</p>.<p>‘ನಗರದಲ್ಲಿ 10 ಕಿ.ಮೀ., ಗ್ರಾಮೀಣದಲ್ಲಿ 50 ಕಿ.ಮೀ. ವ್ಯಾಪ್ತಿಗೆ ಒಂದು ಅಗ್ನಿಶಾಮಕ ಠಾಣೆ ಇರಬೇಕೆಂಬ ಮಾನದಂಡವನ್ನು ಕೇಂದ್ರ ಸರ್ಕಾರದ ಅಗ್ನಿ ಅವಘಡ ಕುರಿತ ಸಲಹಾ ಸಮಿತಿ ವಿಧಿಸಿದೆ. ಪಟ್ಟಣದಿಂದ 12 ಕಿ.ಮೀ. ದೂರದ ರಬಕವಿ-ಬನಹಟ್ಟಿ ಹಾಗೂ 20 ಕಿ.ಮೀ. ದೂರದ ಮುಧೋಳದಲ್ಲಿ ಅಗ್ನಿಶಾಮಕ ಠಾಣೆ ಇದೆ. ಆದರೆ, ಈ ಭಾಗದಲ್ಲಿ ಆಗುತ್ತಿರುವ ಹೆಚ್ಚಿನ ಅಗ್ನಿ ಅವಘಡ ತಪ್ಪಿಸಲು ಇಲ್ಲಿ ಠಾಣೆ ಸ್ಥಾಪಿಸುವುದು ಅಗತ್ಯವಿದೆ’ ಎನ್ನುತ್ತಾರೆ ಸಾರ್ವಜನಿಕರು.</p>.<p>‘ರಬಕವಿ-ಬನಹಟ್ಟಿಯಲ್ಲಿ ಅಗ್ನಿಶಾಮಕ ಠಾಣೆ ಇದ್ದರೂ ಪ್ರಯೋಜನವಾಗುತ್ತಿಲ್ಲ. ತುರ್ತಾಗಿ ಸಮೀರವಾಡಿ ಸಕ್ಕರೆ ಕಾರ್ಖಾನೆಯ ವಾಹನವನ್ನೂ ತರಿಸಲಾಗುತ್ತಿದೆ. ಆದರೆ, ಸಮೀಪದ ಜಾಗದಲ್ಲಿ ಅಗ್ನಿ ಶಾಮಕ ಠಾಣೆ ಇದ್ದರೆ ಬೇಗ ಬಂದು ಬೆಂಕಿ ನಂದಿಸಬಹುದು. ಹೆಚ್ಚಿನ ಅನಾಹುತವನ್ನೂ ತಪ್ಪಿಸಬಹುದು’ ಎಂಬ ಅಭಿಪ್ರಾಯವನ್ನು ಸಾರ್ವಜನಿಕರು ವ್ಯಕ್ತಪಡಿಸುತ್ತಾರೆ.</p>.<p>ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲು ಉಚಿತವಾಗಿ 2 ಎಕರೆ ಜಮೀನು ಮಂಜೂರು ಮಾಡುವಂತೆ ಕೋರಿ ಜಿಲ್ಲಾಧಿಕಾರಿಗೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಕಳೆದ ವರ್ಷ ಜ.3 ರಂದು ಪತ್ರ ಬರೆದಿದ್ದಾರೆ. ಇದರನ್ವಯ ಮಹಾಲಿಂಗಪುರದ ರಿ.ಸ.ನಂ.29/1 ಕ್ಷೇತ್ರದ 2 ಎಕರೆ ಜಮೀನನ್ನು ಅಗ್ನಿಶಾಮಕ ಇಲಾಖೆಗೆ ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ರಬಕವಿ-ಬನಹಟ್ಟಿ ತಹಶೀಲ್ದಾರ್ ಪ್ರಸ್ತಾವ ಸಲ್ಲಿಸಲಿದ್ದಾರೆ. ಈ ಕಾರಣದಿಂದ ಜಮೀನು ಪರಿಶೀಲಿಸಿ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್ಒಸಿ) ಸಲ್ಲಿಸಲು ಸಂಬಂಧಿಸಿದ ಏಳು ಇಲಾಖೆಗಳಿಗೆ ತಹಶೀಲ್ದಾರ್ ಅವರು ಪತ್ರ ಬರೆದಿದ್ದಾರೆ.</p>.<div><blockquote>ಕಬ್ಬು ಬೆಳೆಯುವ ಪ್ರದೇಶ ಇರುವುದರಿಂದ ಮಹಾಲಿಂಗಪುರದಲ್ಲಿ ಅಗ್ನಿಶಾಮಕ ಠಾಣೆ ಅಗತ್ಯವಿದೆ. ಠಾಣೆ ಸ್ಥಾಪನೆಗೆ ಜಾಗ ಮಂಜೂರು ಮಾಡಲು ಇಲಾಖೆಗಳಿಂದ ಎನ್ಒಸಿ ಬಂದಿದೆ. ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. </blockquote><span class="attribution">ಪ್ರಕಾಶ ಪವಾರಜಿಲ್ಲಾ ಅಗ್ನಿಶಾಮಕ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ:</strong> ಆಕಸ್ಮಿಕ ಬೆಂಕಿ ಅವಘಡದಿಂದ ಆಗುವ ಹಾನಿ ತಪ್ಪಿಸಲು ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲು ಅಗ್ನಿಶಾಮಕ ಇಲಾಖೆ ಮುಂದಾಗಿದ್ದು, ಠಾಣೆ ಸ್ಥಾಪಿಸಲು ಅಗತ್ಯವಿರುವ ಜಾಗವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದೆ.</p>.<p>ಈ ಭಾಗದಲ್ಲಿ ಅಧಿಕ ಕಬ್ಬು ಬೆಳೆಯಲಾಗುತ್ತದೆ. ಪ್ರತಿವರ್ಷ ಡಿಸೆಂಬರ್-ಮಾರ್ಚ್ ಅವಧಿಯಲ್ಲಿ ಕಾರ್ಖಾನೆಗಳಿಗೆ ಕಬ್ಬು ಸಾಗಣೆ ಮಾಡಲಾಗುತ್ತದೆ. ಈ ವೇಳೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಹಾನಿ ಆಗುತ್ತಿದೆ. ಅಲ್ಲದೆ, ಬೇರೆ ಬೇರೆ ಗೃಹ ಕೈಗಾರಿಕಾ ಉತ್ಪಾದನಾ ಘಟಕಗಳು ಇಲ್ಲಿದ್ದು, ಆಗಾಗ್ಗೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಈ ಕಾರಣ ಅಗ್ನಿಶಾಮಕ ಇಲಾಖೆಯು ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲು ಒಂದು ವರ್ಷದಿಂದ ಪ್ರಯತ್ನಿಸುತ್ತಿದೆ.</p>.<p>‘ನಗರದಲ್ಲಿ 10 ಕಿ.ಮೀ., ಗ್ರಾಮೀಣದಲ್ಲಿ 50 ಕಿ.ಮೀ. ವ್ಯಾಪ್ತಿಗೆ ಒಂದು ಅಗ್ನಿಶಾಮಕ ಠಾಣೆ ಇರಬೇಕೆಂಬ ಮಾನದಂಡವನ್ನು ಕೇಂದ್ರ ಸರ್ಕಾರದ ಅಗ್ನಿ ಅವಘಡ ಕುರಿತ ಸಲಹಾ ಸಮಿತಿ ವಿಧಿಸಿದೆ. ಪಟ್ಟಣದಿಂದ 12 ಕಿ.ಮೀ. ದೂರದ ರಬಕವಿ-ಬನಹಟ್ಟಿ ಹಾಗೂ 20 ಕಿ.ಮೀ. ದೂರದ ಮುಧೋಳದಲ್ಲಿ ಅಗ್ನಿಶಾಮಕ ಠಾಣೆ ಇದೆ. ಆದರೆ, ಈ ಭಾಗದಲ್ಲಿ ಆಗುತ್ತಿರುವ ಹೆಚ್ಚಿನ ಅಗ್ನಿ ಅವಘಡ ತಪ್ಪಿಸಲು ಇಲ್ಲಿ ಠಾಣೆ ಸ್ಥಾಪಿಸುವುದು ಅಗತ್ಯವಿದೆ’ ಎನ್ನುತ್ತಾರೆ ಸಾರ್ವಜನಿಕರು.</p>.<p>‘ರಬಕವಿ-ಬನಹಟ್ಟಿಯಲ್ಲಿ ಅಗ್ನಿಶಾಮಕ ಠಾಣೆ ಇದ್ದರೂ ಪ್ರಯೋಜನವಾಗುತ್ತಿಲ್ಲ. ತುರ್ತಾಗಿ ಸಮೀರವಾಡಿ ಸಕ್ಕರೆ ಕಾರ್ಖಾನೆಯ ವಾಹನವನ್ನೂ ತರಿಸಲಾಗುತ್ತಿದೆ. ಆದರೆ, ಸಮೀಪದ ಜಾಗದಲ್ಲಿ ಅಗ್ನಿ ಶಾಮಕ ಠಾಣೆ ಇದ್ದರೆ ಬೇಗ ಬಂದು ಬೆಂಕಿ ನಂದಿಸಬಹುದು. ಹೆಚ್ಚಿನ ಅನಾಹುತವನ್ನೂ ತಪ್ಪಿಸಬಹುದು’ ಎಂಬ ಅಭಿಪ್ರಾಯವನ್ನು ಸಾರ್ವಜನಿಕರು ವ್ಯಕ್ತಪಡಿಸುತ್ತಾರೆ.</p>.<p>ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲು ಉಚಿತವಾಗಿ 2 ಎಕರೆ ಜಮೀನು ಮಂಜೂರು ಮಾಡುವಂತೆ ಕೋರಿ ಜಿಲ್ಲಾಧಿಕಾರಿಗೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಕಳೆದ ವರ್ಷ ಜ.3 ರಂದು ಪತ್ರ ಬರೆದಿದ್ದಾರೆ. ಇದರನ್ವಯ ಮಹಾಲಿಂಗಪುರದ ರಿ.ಸ.ನಂ.29/1 ಕ್ಷೇತ್ರದ 2 ಎಕರೆ ಜಮೀನನ್ನು ಅಗ್ನಿಶಾಮಕ ಇಲಾಖೆಗೆ ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ರಬಕವಿ-ಬನಹಟ್ಟಿ ತಹಶೀಲ್ದಾರ್ ಪ್ರಸ್ತಾವ ಸಲ್ಲಿಸಲಿದ್ದಾರೆ. ಈ ಕಾರಣದಿಂದ ಜಮೀನು ಪರಿಶೀಲಿಸಿ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್ಒಸಿ) ಸಲ್ಲಿಸಲು ಸಂಬಂಧಿಸಿದ ಏಳು ಇಲಾಖೆಗಳಿಗೆ ತಹಶೀಲ್ದಾರ್ ಅವರು ಪತ್ರ ಬರೆದಿದ್ದಾರೆ.</p>.<div><blockquote>ಕಬ್ಬು ಬೆಳೆಯುವ ಪ್ರದೇಶ ಇರುವುದರಿಂದ ಮಹಾಲಿಂಗಪುರದಲ್ಲಿ ಅಗ್ನಿಶಾಮಕ ಠಾಣೆ ಅಗತ್ಯವಿದೆ. ಠಾಣೆ ಸ್ಥಾಪನೆಗೆ ಜಾಗ ಮಂಜೂರು ಮಾಡಲು ಇಲಾಖೆಗಳಿಂದ ಎನ್ಒಸಿ ಬಂದಿದೆ. ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. </blockquote><span class="attribution">ಪ್ರಕಾಶ ಪವಾರಜಿಲ್ಲಾ ಅಗ್ನಿಶಾಮಕ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>