<p><strong>ಬಾಗಲಕೋಟೆ</strong>: ಕಳೆದೊಂದು ವಾರದಿಂದ ಅತಿವೃಷ್ಟಿ ಹಾಗೂಪ್ರವಾಹದಿಂದಾಗಿ ಬೆಳಗಾವಿ ವಿಭಾಗದಲ್ಲಿ ಲೋಕೋಪಯೋಗಿ ಇಲಾಖೆಗೆ ₹ 550 ಕೋಟಿ ಹಾನಿಯಾಗಿದೆ.ಇಲಾಖೆಗೆ ಸಂಬಂಧಿಸಿದಂತೆ ಹಾನಿಯಾಗಿರುವ ಕಟ್ಟಡ, ರಸ್ತೆ, ಸೇತುವೆಗಳ ತಾತ್ಕಾಲಿಕ ದುರಸ್ತಿಗೆ ತಕ್ಷಣ ₹ 50 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿರುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.</p>.<p>ಮುಧೋಳ ತಾಲ್ಲೂಕಿನ ಮಿರ್ಜಿಯಲ್ಲಿ ಶನಿವಾರ ಘಟಪ್ರಭಾ ನದಿ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಿದ ಅವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ರಾಜ್ಯದಲ್ಲಿ ಮಳೆಯಿಂದಾಗಿ ಲೋಕೋಪಯೋಗಿ ಇಲಾಖೆಯ ಆಸ್ತಿಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ಅವುಗಳ ತುರ್ತು ನಿರ್ವಹಣೆಗಾಗಿಯೇ ₹ 120 ಕೋಟಿ ಅಗತ್ಯವಿದೆ ಎಂದರು.</p>.<p>ಈವರೆಗೆ ರಾಜ್ಯದಲ್ಲಿ ಪ್ರವಾಹದಿಂದಾಗಿ 101 ಕಟ್ಟಡ, 1,400 ಕಿ.ಮೀ ರಸ್ತೆ ಹಾನಿಯಾಗಿದೆ. 259 ಸಿಡಿ ಕಾಮಗಾರಿ ಮತ್ತು 294 ಇತರೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ. ಅದಕ್ಕಾಗಿ ಇಲಾಖೆಯಿಂದ ತುರ್ತು ಅನುದಾನಕ್ಕೆ ಕೋರಲಾಗಿದೆ ಎಂದು ತಿಳಿಸಿದರು.</p>.<p>2019ರಲ್ಲಿ ಪ್ರವಾಹ ಉಂಟಾದಾಗ ಇಲಾಖೆಗೆ ₹ 8ಸಾವಿರ ಕೋಟಿ ನಷ್ಟವಾಗಿತ್ತು, 2020ರಲ್ಲಿ ₹ 3,500 ಕೋಟಿ ನಷ್ಟ ಉಂಟಾಗಿತ್ತು ಎಂದರು.</p>.<p>ಮಳೆಯಿಂದಾಗಿ ಬೆಳಗಾವಿಯಲ್ಲಿ 70ಕ್ಕೂ ಅಧಿಕ ರಸ್ತೆ, 36 ಸೇತುವೆಗಳು ಜಲಾವೃತಗೊಂಡಿವೆ. 6 ಮಿಲಿಮೀಟರ್ ಆಗಬೇಕಾದ ಜಾಗದಲ್ಲಿ 66 ಮಿಲಿಮೀಟರ್ ಮಳೆ ಆಗಿದೆ. ಇದರಿಂದ ಪ್ರವಾಹ ಸೃಷ್ಟಿಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲೂ ಪ್ರವಾಹ ಸನ್ನಿವೇಶ ನಿರ್ಮಾಣವಾಗಿರುವುದರಿಂದ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು.</p>.<p>ಮನೆಗಳು, ಜನ-ಜಾನುವಾರುಗಳಿಗೆ ಹಾನಿಯಾದರೆ ತಕ್ಷಣ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ನಿಯಮಾವಳಿಯಂತೆ ಪರಿಹಾರಧನ ನೀಡಲು ಸೂಚಿಸಲಾಗಿದೆ. ಯಾವುದೇ ಜೀವನ ಹಾನಿಯಾಗದಂತೆ ಕ್ರಮವಹಿಸಲು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಕಳೆದೊಂದು ವಾರದಿಂದ ಅತಿವೃಷ್ಟಿ ಹಾಗೂಪ್ರವಾಹದಿಂದಾಗಿ ಬೆಳಗಾವಿ ವಿಭಾಗದಲ್ಲಿ ಲೋಕೋಪಯೋಗಿ ಇಲಾಖೆಗೆ ₹ 550 ಕೋಟಿ ಹಾನಿಯಾಗಿದೆ.ಇಲಾಖೆಗೆ ಸಂಬಂಧಿಸಿದಂತೆ ಹಾನಿಯಾಗಿರುವ ಕಟ್ಟಡ, ರಸ್ತೆ, ಸೇತುವೆಗಳ ತಾತ್ಕಾಲಿಕ ದುರಸ್ತಿಗೆ ತಕ್ಷಣ ₹ 50 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿರುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.</p>.<p>ಮುಧೋಳ ತಾಲ್ಲೂಕಿನ ಮಿರ್ಜಿಯಲ್ಲಿ ಶನಿವಾರ ಘಟಪ್ರಭಾ ನದಿ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಿದ ಅವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ರಾಜ್ಯದಲ್ಲಿ ಮಳೆಯಿಂದಾಗಿ ಲೋಕೋಪಯೋಗಿ ಇಲಾಖೆಯ ಆಸ್ತಿಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ಅವುಗಳ ತುರ್ತು ನಿರ್ವಹಣೆಗಾಗಿಯೇ ₹ 120 ಕೋಟಿ ಅಗತ್ಯವಿದೆ ಎಂದರು.</p>.<p>ಈವರೆಗೆ ರಾಜ್ಯದಲ್ಲಿ ಪ್ರವಾಹದಿಂದಾಗಿ 101 ಕಟ್ಟಡ, 1,400 ಕಿ.ಮೀ ರಸ್ತೆ ಹಾನಿಯಾಗಿದೆ. 259 ಸಿಡಿ ಕಾಮಗಾರಿ ಮತ್ತು 294 ಇತರೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ. ಅದಕ್ಕಾಗಿ ಇಲಾಖೆಯಿಂದ ತುರ್ತು ಅನುದಾನಕ್ಕೆ ಕೋರಲಾಗಿದೆ ಎಂದು ತಿಳಿಸಿದರು.</p>.<p>2019ರಲ್ಲಿ ಪ್ರವಾಹ ಉಂಟಾದಾಗ ಇಲಾಖೆಗೆ ₹ 8ಸಾವಿರ ಕೋಟಿ ನಷ್ಟವಾಗಿತ್ತು, 2020ರಲ್ಲಿ ₹ 3,500 ಕೋಟಿ ನಷ್ಟ ಉಂಟಾಗಿತ್ತು ಎಂದರು.</p>.<p>ಮಳೆಯಿಂದಾಗಿ ಬೆಳಗಾವಿಯಲ್ಲಿ 70ಕ್ಕೂ ಅಧಿಕ ರಸ್ತೆ, 36 ಸೇತುವೆಗಳು ಜಲಾವೃತಗೊಂಡಿವೆ. 6 ಮಿಲಿಮೀಟರ್ ಆಗಬೇಕಾದ ಜಾಗದಲ್ಲಿ 66 ಮಿಲಿಮೀಟರ್ ಮಳೆ ಆಗಿದೆ. ಇದರಿಂದ ಪ್ರವಾಹ ಸೃಷ್ಟಿಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲೂ ಪ್ರವಾಹ ಸನ್ನಿವೇಶ ನಿರ್ಮಾಣವಾಗಿರುವುದರಿಂದ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು.</p>.<p>ಮನೆಗಳು, ಜನ-ಜಾನುವಾರುಗಳಿಗೆ ಹಾನಿಯಾದರೆ ತಕ್ಷಣ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ನಿಯಮಾವಳಿಯಂತೆ ಪರಿಹಾರಧನ ನೀಡಲು ಸೂಚಿಸಲಾಗಿದೆ. ಯಾವುದೇ ಜೀವನ ಹಾನಿಯಾಗದಂತೆ ಕ್ರಮವಹಿಸಲು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>