<p><strong>ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ):</strong> ‘ಭ್ರೂಣಹತ್ಯೆ ಪ್ರಕರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸೂಕ್ತ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ನ್ಯಾ. ಎಸ್.ಕೆ. ಒಂಟಗೋಡಿ ಹೇಳಿದರು.</p>.<p>ಭ್ರೂಣಹತ್ಯೆ ಆರೋಪದಡಿ ಬಂಧಿಸಲ್ಪಟ್ಟ ಕವಿತಾ ಬಾಡನವರ ಮನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ‘ತನಿಖೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಘಟನೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಆಯೋಗದಿಂದಲೂ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಭ್ರೂಣಹತ್ಯೆ ನಡೆದಿರುವ ಮನೆಯನ್ನು ಮಹಜರು ಮಾಡಿ, ಆರೋಗ್ಯ ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ. 2022ರಲ್ಲಿ ಮುಖ್ಯದ್ವಾರವನ್ನು ಬಂದ್ ಮಾಡಲಾಗಿತ್ತು. ಆದರೆ, ಮನೆ ಒಳಗಡೆ ಸಂಪರ್ಕ ಕಲ್ಪಿಸುವ ಇನ್ನೆರಡು ಬಾಗಿಲುಗಳನ್ನು ಬಂದ್ ಮಾಡಿರಲಿಲ್ಲ. ಇದರಿಂದ ಆರೋಪಿಗಳಿಗೆ ಕೃತ್ಯ ಎಸಗಲು ಅನುಕೂಲವಾಗಿತ್ತು’ ಎಂದರು.</p>.<p>ಮನೆಯ ಮಹಜರು ಕುರಿತು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ಅವರನ್ನು ಒಂಟಗೋಡಿ ಅವರು ತರಾಟೆಗೆ ತೆಗೆದುಕೊಂಡರು.</p>.<h2>‘ಸಾಹೇಬರು’ ಹೆಸರು ಬಾಯ್ಬಿಟ್ಟ ಆರೋಪಿ:</h2>.<p>ಮೊಬೈಲ್ ಫೋನ್ನಲ್ಲಿ ದಾಖಲಿಸಿಕೊಂಡಿರುವ ‘ಸಾಹೇಬರು’ ಹೆಸರಿನ ವ್ಯಕ್ತಿಯ ಕುರಿತು ಆರೋಪಿ ಕವಿತಾ ಬಾಡನವರ ಪೊಲೀಸರ ವಿಚಾರಣೆ ವೇಳೆ ಬಹಿರಂಗಪಡಿಸಿದ್ದು, 2014ರಿಂದ ಆ ವ್ಯಕ್ತಿ ಪರಿಚಯವಿದೆ ಎಂದು ತಿಳಿಸಿದ್ದಾರೆ. ಕೆಲ ಮುಖಂಡರಿಂದ ಫೋನ್ ಪೇ ಮೂಲಕ ಕವಿತಾ ಮೊಬೈಲ್ಗೆ ಹಣ ಬಂದಿರುವ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ಅವರನ್ನು ಕರೆಸಿ ವಿಚಾರಣೆ ಮಾಡುವ ಸಾಧ್ಯತೆಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ):</strong> ‘ಭ್ರೂಣಹತ್ಯೆ ಪ್ರಕರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸೂಕ್ತ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ನ್ಯಾ. ಎಸ್.ಕೆ. ಒಂಟಗೋಡಿ ಹೇಳಿದರು.</p>.<p>ಭ್ರೂಣಹತ್ಯೆ ಆರೋಪದಡಿ ಬಂಧಿಸಲ್ಪಟ್ಟ ಕವಿತಾ ಬಾಡನವರ ಮನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ‘ತನಿಖೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಘಟನೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಆಯೋಗದಿಂದಲೂ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಭ್ರೂಣಹತ್ಯೆ ನಡೆದಿರುವ ಮನೆಯನ್ನು ಮಹಜರು ಮಾಡಿ, ಆರೋಗ್ಯ ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ. 2022ರಲ್ಲಿ ಮುಖ್ಯದ್ವಾರವನ್ನು ಬಂದ್ ಮಾಡಲಾಗಿತ್ತು. ಆದರೆ, ಮನೆ ಒಳಗಡೆ ಸಂಪರ್ಕ ಕಲ್ಪಿಸುವ ಇನ್ನೆರಡು ಬಾಗಿಲುಗಳನ್ನು ಬಂದ್ ಮಾಡಿರಲಿಲ್ಲ. ಇದರಿಂದ ಆರೋಪಿಗಳಿಗೆ ಕೃತ್ಯ ಎಸಗಲು ಅನುಕೂಲವಾಗಿತ್ತು’ ಎಂದರು.</p>.<p>ಮನೆಯ ಮಹಜರು ಕುರಿತು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ಅವರನ್ನು ಒಂಟಗೋಡಿ ಅವರು ತರಾಟೆಗೆ ತೆಗೆದುಕೊಂಡರು.</p>.<h2>‘ಸಾಹೇಬರು’ ಹೆಸರು ಬಾಯ್ಬಿಟ್ಟ ಆರೋಪಿ:</h2>.<p>ಮೊಬೈಲ್ ಫೋನ್ನಲ್ಲಿ ದಾಖಲಿಸಿಕೊಂಡಿರುವ ‘ಸಾಹೇಬರು’ ಹೆಸರಿನ ವ್ಯಕ್ತಿಯ ಕುರಿತು ಆರೋಪಿ ಕವಿತಾ ಬಾಡನವರ ಪೊಲೀಸರ ವಿಚಾರಣೆ ವೇಳೆ ಬಹಿರಂಗಪಡಿಸಿದ್ದು, 2014ರಿಂದ ಆ ವ್ಯಕ್ತಿ ಪರಿಚಯವಿದೆ ಎಂದು ತಿಳಿಸಿದ್ದಾರೆ. ಕೆಲ ಮುಖಂಡರಿಂದ ಫೋನ್ ಪೇ ಮೂಲಕ ಕವಿತಾ ಮೊಬೈಲ್ಗೆ ಹಣ ಬಂದಿರುವ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ಅವರನ್ನು ಕರೆಸಿ ವಿಚಾರಣೆ ಮಾಡುವ ಸಾಧ್ಯತೆಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>