<p>ಕೆರೂರ (ಬಾಗಲಕೋಟೆ): ದೇಶದ ಗ್ರಾಮೀಣ ಸೊಗಡನ್ನು ಶ್ರಿಮಂತಗೊಳಿಸಿದ್ದು ಜಾನಪದ ಕಲೆ. ಅದು ದೇಶದ ಸಂಪತ್ತಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೇಲ್ಲಿಕೆರಿ ಹೇಳಿದರು.</p>.<p>ಕೆರೂರಿನ ದೇವಾಂಗ ಸಮುದಾಯ ಭವನದಲ್ಲಿ ನಡೆದ ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಕಾರ್ಯ ಚಟುವಟಿಕೆಗಳ ಉಧ್ಘಾಟನೆ ಹಾಗೂ ಜಾನಪದ ಸಂಭ್ರಮ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದ ಗ್ರಾಮೀಣ ಸೊಗಡಿನಲ್ಲಿ ಜಾನಪದ ಕಲೆ ತನ್ನದೆಯಾದ ಶಕ್ತಿಯೊಂದಿಗೆ ಸಾಂಸ್ಕೃತಿಕ ವಲಯದ ಬೆಳವಣಿಗೆಗೆ ಗಮನಾರ್ಹ ಕೊಡುಗೆ ನೀಡಿದೆ. ಜಾನಪದ ಕಲೆ ಉಳಿದು, ಬೆಳೆಯಬೇಕಾಗಿದೆ. ಯುವ ಜನಾಂಗವನ್ನು ಸಾಹಿತ್ಯ, ಕಲೆಗಳತ್ತ ಸೆಳೆಯಬೇಕಿದೆ ಎಂದರು.</p>.<p>ಜಾನಪದ ಪರಿಷತ್ತಿನ ಬಾದಾಮಿ ತಾಲ್ಲೂಕು ಪದಾಧಿಕಾರಿಗಳು ಇದೇ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದರು.</p>.<p>ಕೆರೂರಿನ ದೇವಾಂಗ ಸಮಾಜದ ಅಧ್ಯಕ್ಷ ಸಂಕಣ್ಣ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಕಾರ್ಯದರ್ಶಿ ಸಿ.ಎಸ್. ಬಾಳಕ್ಕವರ. ಕೋಶಾಧ್ಯಕ್ಷ ಆರ್.ಸಿ. ಚಿತ್ತವಾಡಗಿ, ಬಾದಾಮಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಫ್. ಹೊರಕೇರಿ, ಕ.ಜಾ.ಪ. ಬದಾಮಿ ತಾಲ್ಲೂಕು ಘಟಕದ ಅಧ್ಯಕ್ಷ ಲಿಂಗರಾಜ ಇದ್ದರು.</p>.<p>ವಿವಿದ ಜಾನಪದ ಕಲಾ ತಂಡಗಳು ದೇಶಭಕ್ತಿ ಗೀತೆ, ಸೋಬಾನೆ, ತತ್ವಪದ, ಬಿಸುಕಲ್ಲಿನ ಪದ ಹಾಡಿದರು. ಕಿತ್ತೂರ ರಾಣಿ ಚನ್ನಮ್ಮ ನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆರೂರ (ಬಾಗಲಕೋಟೆ): ದೇಶದ ಗ್ರಾಮೀಣ ಸೊಗಡನ್ನು ಶ್ರಿಮಂತಗೊಳಿಸಿದ್ದು ಜಾನಪದ ಕಲೆ. ಅದು ದೇಶದ ಸಂಪತ್ತಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೇಲ್ಲಿಕೆರಿ ಹೇಳಿದರು.</p>.<p>ಕೆರೂರಿನ ದೇವಾಂಗ ಸಮುದಾಯ ಭವನದಲ್ಲಿ ನಡೆದ ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಕಾರ್ಯ ಚಟುವಟಿಕೆಗಳ ಉಧ್ಘಾಟನೆ ಹಾಗೂ ಜಾನಪದ ಸಂಭ್ರಮ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದ ಗ್ರಾಮೀಣ ಸೊಗಡಿನಲ್ಲಿ ಜಾನಪದ ಕಲೆ ತನ್ನದೆಯಾದ ಶಕ್ತಿಯೊಂದಿಗೆ ಸಾಂಸ್ಕೃತಿಕ ವಲಯದ ಬೆಳವಣಿಗೆಗೆ ಗಮನಾರ್ಹ ಕೊಡುಗೆ ನೀಡಿದೆ. ಜಾನಪದ ಕಲೆ ಉಳಿದು, ಬೆಳೆಯಬೇಕಾಗಿದೆ. ಯುವ ಜನಾಂಗವನ್ನು ಸಾಹಿತ್ಯ, ಕಲೆಗಳತ್ತ ಸೆಳೆಯಬೇಕಿದೆ ಎಂದರು.</p>.<p>ಜಾನಪದ ಪರಿಷತ್ತಿನ ಬಾದಾಮಿ ತಾಲ್ಲೂಕು ಪದಾಧಿಕಾರಿಗಳು ಇದೇ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದರು.</p>.<p>ಕೆರೂರಿನ ದೇವಾಂಗ ಸಮಾಜದ ಅಧ್ಯಕ್ಷ ಸಂಕಣ್ಣ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಕಾರ್ಯದರ್ಶಿ ಸಿ.ಎಸ್. ಬಾಳಕ್ಕವರ. ಕೋಶಾಧ್ಯಕ್ಷ ಆರ್.ಸಿ. ಚಿತ್ತವಾಡಗಿ, ಬಾದಾಮಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಫ್. ಹೊರಕೇರಿ, ಕ.ಜಾ.ಪ. ಬದಾಮಿ ತಾಲ್ಲೂಕು ಘಟಕದ ಅಧ್ಯಕ್ಷ ಲಿಂಗರಾಜ ಇದ್ದರು.</p>.<p>ವಿವಿದ ಜಾನಪದ ಕಲಾ ತಂಡಗಳು ದೇಶಭಕ್ತಿ ಗೀತೆ, ಸೋಬಾನೆ, ತತ್ವಪದ, ಬಿಸುಕಲ್ಲಿನ ಪದ ಹಾಡಿದರು. ಕಿತ್ತೂರ ರಾಣಿ ಚನ್ನಮ್ಮ ನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>