<p><strong>ರಬಕವಿ ಬನಹಟ್ಟಿ:</strong> ‘2016ರಿಂದ 2026ವರೆಗೆ ಮಾಜಿ ದೇವದಾಸಿಯರಿಗೆ ಮಂಜೂರಾದ ಮನೆಗಳ ಅಂಕಿ–ಅಂಶ ಮತ್ತು ಪ್ರಗತಿಯ ವರದಿ ಪ್ರಕಟಿಸಬೇಕು’ ಎಂದು ಕರ್ನಾಟಕ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷೆ ಮಹಾನಂದಾ ದೊಡಮನಿ ಆಗ್ರಹಿಸಿದರು.</p>.<p>ಇಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದರು.</p>.<p>‘ಪ್ರತಿ ವರ್ಷ ಎಷ್ಟು ಫಲಾನುಭವಿಗಳನ್ನು ಗುರುತಿಸಲಾಗಿದೆ, ಎಷ್ಟು ಮನೆಗಳನ್ನು ಮಂಜೂರು ಮಾಡಲಾಗಿದೆ, ಮಂಜೂರಾದ ಪೈಕಿ ಎಷ್ಟು ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ, ಎಷ್ಟು ಮನೆಗಳ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ ಎಂಬ ಮಾಹಿತಿ ಬಹಿರಂಗಪಡಿಸಬೇಕಿದೆ’ ಎಂದರು.</p>.<p>‘ವಸತಿ ಸೌಲಭ್ಯ ಕೋರಿ ಇಲಾಖೆಗೆ ಸಲ್ಲಿಕೆಯಾಗಿರುವ ಅರ್ಜಿಗಳು, ಯೋಜನೆಯಿಂದ ವಂಚಿತರಾದವರ ಸಂಖ್ಯೆ ಮತ್ತು ಮಂಜೂರಾದ ಅನುದಾನದ ಬಗ್ಗೆಯೂ ಮಾಹಿತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಉಪಾಧ್ಯಕ್ಷ ಸಂತೋಷ ಜಮಖಂಡಿ, ಕಾರ್ಯದರ್ಶಿ ಕಲಾವತಿ ಮಾದರ, ಸದಸ್ಯರಾದ ಮಾಲಾ ಹರಿಜನ ಮತ್ತು ತಂಗೆವ್ವ ರಡ್ಡರಟ್ಟಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ‘2016ರಿಂದ 2026ವರೆಗೆ ಮಾಜಿ ದೇವದಾಸಿಯರಿಗೆ ಮಂಜೂರಾದ ಮನೆಗಳ ಅಂಕಿ–ಅಂಶ ಮತ್ತು ಪ್ರಗತಿಯ ವರದಿ ಪ್ರಕಟಿಸಬೇಕು’ ಎಂದು ಕರ್ನಾಟಕ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷೆ ಮಹಾನಂದಾ ದೊಡಮನಿ ಆಗ್ರಹಿಸಿದರು.</p>.<p>ಇಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದರು.</p>.<p>‘ಪ್ರತಿ ವರ್ಷ ಎಷ್ಟು ಫಲಾನುಭವಿಗಳನ್ನು ಗುರುತಿಸಲಾಗಿದೆ, ಎಷ್ಟು ಮನೆಗಳನ್ನು ಮಂಜೂರು ಮಾಡಲಾಗಿದೆ, ಮಂಜೂರಾದ ಪೈಕಿ ಎಷ್ಟು ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ, ಎಷ್ಟು ಮನೆಗಳ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ ಎಂಬ ಮಾಹಿತಿ ಬಹಿರಂಗಪಡಿಸಬೇಕಿದೆ’ ಎಂದರು.</p>.<p>‘ವಸತಿ ಸೌಲಭ್ಯ ಕೋರಿ ಇಲಾಖೆಗೆ ಸಲ್ಲಿಕೆಯಾಗಿರುವ ಅರ್ಜಿಗಳು, ಯೋಜನೆಯಿಂದ ವಂಚಿತರಾದವರ ಸಂಖ್ಯೆ ಮತ್ತು ಮಂಜೂರಾದ ಅನುದಾನದ ಬಗ್ಗೆಯೂ ಮಾಹಿತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಉಪಾಧ್ಯಕ್ಷ ಸಂತೋಷ ಜಮಖಂಡಿ, ಕಾರ್ಯದರ್ಶಿ ಕಲಾವತಿ ಮಾದರ, ಸದಸ್ಯರಾದ ಮಾಲಾ ಹರಿಜನ ಮತ್ತು ತಂಗೆವ್ವ ರಡ್ಡರಟ್ಟಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>