<p><strong>ಬಾಗಲಕೋಟೆ</strong>: ವಿವಿಧ ಕಂಪನಿಗಳಲ್ಲಿ ಠೇವಣಿ ಇಟ್ಟು ಮೋಸ ಹೋಗಿರುವ ಜನರಿಗೆ ಠೇವಣಿ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರ ಕುಟುಂಬದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.</p>.<p>2019ರಲ್ಲಿ ಸಂಸತ್ತು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ ಅನ್ವಯ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆದರೆ, ಇಲ್ಲಿಯವರೆಗೆ ನ್ಯಾಯ ಕೊಡಿಸುವ ಕೆಲಸ ಆಗಿಲ್ಲ ಎಂದು ದೂರಿದರು.</p>.<p>ಕಷ್ಟಪಟ್ಟು ದುಡಿದ ಹಣವನ್ನು ಕಳೆದುಕೊಂಡಿದ್ದೇವೆ. ಠೇವಣಿದಾರರು ಹಾಗೂ ಏಜೆಂಟರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಣ ಹಿಂದಿರುಗಿಸಲು ಕ್ರಮಕೈಗೊಳ್ಳುವುದಾಗಿ ಪ್ರಧಾನಮಂತ್ರಿಯೇ ಭರವಸೆ ನೀಡಿದ್ದರು. ಇಂದಿಗೂ ಈಡೇರಿಲ್ಲ. ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಅರ್ಜಿಗಳನ್ನು ತೆಗೆದುಕೊಂಡು ಹಲವು ವರ್ಷಗಳು ಕಳೆದಿದ್ದರೂ, ಯಾವುದೇ ಕ್ರಮ ಆಗಿಲ್ಲ. ಏಜೆಂಟರಿಗೆ ಭದ್ರತೆ, ಉದ್ಯೋಗ, ಪುನರ್ವಸತಿ ಕಲ್ಪಿಸಬೇಕು. ಮೋಸ ಮಾಡಿದವರಿಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ವಿವಿಧ ಕಂಪನಿಗಳಲ್ಲಿ ಠೇವಣಿ ಇಟ್ಟು ಮೋಸ ಹೋಗಿರುವ ಜನರಿಗೆ ಠೇವಣಿ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರ ಕುಟುಂಬದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.</p>.<p>2019ರಲ್ಲಿ ಸಂಸತ್ತು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ ಅನ್ವಯ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆದರೆ, ಇಲ್ಲಿಯವರೆಗೆ ನ್ಯಾಯ ಕೊಡಿಸುವ ಕೆಲಸ ಆಗಿಲ್ಲ ಎಂದು ದೂರಿದರು.</p>.<p>ಕಷ್ಟಪಟ್ಟು ದುಡಿದ ಹಣವನ್ನು ಕಳೆದುಕೊಂಡಿದ್ದೇವೆ. ಠೇವಣಿದಾರರು ಹಾಗೂ ಏಜೆಂಟರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಣ ಹಿಂದಿರುಗಿಸಲು ಕ್ರಮಕೈಗೊಳ್ಳುವುದಾಗಿ ಪ್ರಧಾನಮಂತ್ರಿಯೇ ಭರವಸೆ ನೀಡಿದ್ದರು. ಇಂದಿಗೂ ಈಡೇರಿಲ್ಲ. ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಅರ್ಜಿಗಳನ್ನು ತೆಗೆದುಕೊಂಡು ಹಲವು ವರ್ಷಗಳು ಕಳೆದಿದ್ದರೂ, ಯಾವುದೇ ಕ್ರಮ ಆಗಿಲ್ಲ. ಏಜೆಂಟರಿಗೆ ಭದ್ರತೆ, ಉದ್ಯೋಗ, ಪುನರ್ವಸತಿ ಕಲ್ಪಿಸಬೇಕು. ಮೋಸ ಮಾಡಿದವರಿಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>