ಈ ಸಂದರ್ಭದಲ್ಲಿ ಎಬಿವಿಪಿ ಸಂಚಾಲಕ ಶಿವು ಕಾಂಬಳೆ ಮಾತನಾಡಿ ‘ಶಿಕ್ಷಣ ಇಂದಿನ ದಿನದಲ್ಲಿ ಮಾರಾಟದ ವಸ್ತು ಆಗುತ್ತಿದೆ. ಬಡವರಿಗೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಕಷ್ಟದಾಯಕವಾಗಿದೆ. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್ ಪಾಸ್ ವಿತರಿಸಬೇಕು. ನಿಗದಿತ ಸಮಯಕ್ಕೆ ಬಸ್ ಓಡಿಸಬೇಕು. ಬಸ್ ಸಂಚಾರ ಇಲ್ಲದ ಗ್ರಾಮಗಳಿಗೂ ಬಸ್ ಸಂಚಾರ ಆರಂಭಿಸಬೇಕು. ಎಸ್ಸಿ, ಎಸ್ಟಿ ಹಾಸ್ಟೇಲ್ ಉನ್ನತಿಕರಿಸಬೇಕು, ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಬೇಕು’ ಎಂದು ಆಗ್ರಹಿಸಿದರು.