<p><strong>ಬಾಗಲಕೋಟೆ:</strong> ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ನೀಡಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಟೀಕಿಸಿದರು. </p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಒಂದೆಡೆ ನೀಡಿ, ಬೆಲೆ ಏರಿಕೆ ಮೂಲಕ ಇನ್ನೊಂದು ಕಡೆ ಜನರಿಂದಲೇ ವಸೂಲು ಮಾಡುತ್ತಿದೆ. ಜನಸಾಮಾನ್ಯರ ಬದುಕಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಮೋಸ ಮಾಡುತ್ತಿದೆ. ಶಕ್ತಿ ಯೋಜನೆ ಬಿಟ್ಟರೆ ಇನ್ನುಳಿದ ಯಾವ ಯೋಜನೆಗಳೂ ರಾಜ್ಯದಲ್ಲಿ ಕೆಲಸ ಮಾಡುತ್ತಿಲ್ಲ. ಅಧಿಕಾರಕ್ಕೆ ಬಂದು ವರ್ಷದಲ್ಲಿ ₹ 95 ಸಾವಿರ ಕೋಟಿ ಸಾಲ ಮಾಡಿದೆ’ ಎಂದು ಟೀಕಿಸಿದರು.</p>.<p>‘ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ಶಾಸಕರೇ ಅಸಮಾಧಾನ ಹೊರಹಾಕುತ್ತಿದ್ದು, ಮತ್ತೊಂದು ಕಡೆ ತಾವೇ ತಮ್ಮ ಯೋಜನೆಗಳನ್ನು ಸಮರ್ಥಿಸಿಕೊಂಡಂತೆ ನಾಟಕವಾಡುತ್ತಿದ್ದಾರೆ. ರಾಜ್ಯ ಸರ್ಕಾರ ಅಭಿವೃದ್ಧಿ ಮರೆತಿದೆ’ ಎಂದು ಆರೋಪಿಸಿದರು.</p>.<p>‘ಜನರ ಪೀಡಕವಾಗಿರುವ ಸರ್ಕಾರ ವಿದ್ಯುತ್ ಉಚಿತ ಎಂದು ಇನ್ನೊಂದೆಡೆ ಕೈಗಾರಿಕೆ ವಿದ್ಯುತ್ ದರ ಹೆಚ್ಚಳ ಮಾಡಿದೆ. ಇದರಿಂದ ಕೈಗಾರಿಕೆಗಳು ಮುಚ್ಚುವ ಹಂತ ತಲುಪಿದ್ದು, ನೌಕರರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ’ ಎಂದರು.</p>.<p>‘ಬರಗಾಲದ ನಂತರ ಮಳೆಯಾಗಿದೆ ಎಂದು ರೈತರು ಸಂತಸದಲ್ಲಿದ್ದಾಗ ರಸಗೊಬ್ಬರ, ಬೀಜದ ದರ ಏರಿಕೆ ಮಾಡಿ ರೈತರಿಗೆ ಹೊಡೆತ ನೀಡಿದೆ. ಸರಣಿ ಬೆಲೆ ಏರಿಕೆ ಮಾಡುತ್ತಿರುವುದನ್ನು ನೋಡಿದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ’ ಎಂದು ದೂರಿದರು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಎಸ್ಸಿ–ಎಸ್ಟಿ ಸಮುದಾಯದವರು ಜಮೀನು ಖರೀದಿಸಿದರೆ ನೀಡುತ್ತಿದ್ದ ಸಹಾಯಧನ ನಿಂತು ಹೋಗಿದೆ ಎಂದು ಆರೋಪಿಸಿದರು.</p>.<p>ಬಿಟಿಡಿಎದಲ್ಲಿ ವ್ಯಕ್ತಿಯೊಬ್ಬರ ಆಡಳಿತ ನಡೆಯುತ್ತಿದೆ. ಭ್ರಷ್ಟಾಚಾರ ಹೆಚ್ಚಾಗಿದೆ. ಸಂತ್ರಸ್ತರ ಸಂಕಷ್ಟ ಕೇಳುವ ಕೆಲಸ ಆಗುತ್ತಿಲ್ಲ ಎಂದು ಟೀಕಿಸಿದರು.</p>.<p>ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಮಾತನಾಡಿ, ‘ಗ್ಯಾರಂಟಿ ಆಮಿಷವೊಡ್ಡಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಈಗ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ’ ಎಂದು ದೂರಿದರು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನೂರ, ಮಾಧ್ಯಮ ಸಂಚಾಲಕ ಶಿವಾನಂದ ಸುರಪುರ ಇದ್ದರು.</p>.<p><strong>ಪ್ರತಿಭಟನೆ: </strong> </p><p>ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಸೋಮವಾರ ಬೆಳಿಗ್ಗೆ 11.30ಕ್ಕೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಬೀಳೂರು ಅಜ್ಜನವರ ಗುಡಿಯಿಂದ ಬಸವೇಶ್ವರ ವೃತ್ತದವರೆಗೆ ರ್ಯಾಲಿ ನಡೆಯಲಿದೆ. ಸಂಸದ ಪಿ.ಸಿ. ಗದ್ದಿಗೌಡರ ಶಾಸಕರು ಮಾಜಿ ಶಾಸಕರು ವಿಧಾನ ಪರಿಷತ್ತಿನ ಸದಸ್ಯರು ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ನೀಡಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಟೀಕಿಸಿದರು. </p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಒಂದೆಡೆ ನೀಡಿ, ಬೆಲೆ ಏರಿಕೆ ಮೂಲಕ ಇನ್ನೊಂದು ಕಡೆ ಜನರಿಂದಲೇ ವಸೂಲು ಮಾಡುತ್ತಿದೆ. ಜನಸಾಮಾನ್ಯರ ಬದುಕಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>‘ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಮೋಸ ಮಾಡುತ್ತಿದೆ. ಶಕ್ತಿ ಯೋಜನೆ ಬಿಟ್ಟರೆ ಇನ್ನುಳಿದ ಯಾವ ಯೋಜನೆಗಳೂ ರಾಜ್ಯದಲ್ಲಿ ಕೆಲಸ ಮಾಡುತ್ತಿಲ್ಲ. ಅಧಿಕಾರಕ್ಕೆ ಬಂದು ವರ್ಷದಲ್ಲಿ ₹ 95 ಸಾವಿರ ಕೋಟಿ ಸಾಲ ಮಾಡಿದೆ’ ಎಂದು ಟೀಕಿಸಿದರು.</p>.<p>‘ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ಶಾಸಕರೇ ಅಸಮಾಧಾನ ಹೊರಹಾಕುತ್ತಿದ್ದು, ಮತ್ತೊಂದು ಕಡೆ ತಾವೇ ತಮ್ಮ ಯೋಜನೆಗಳನ್ನು ಸಮರ್ಥಿಸಿಕೊಂಡಂತೆ ನಾಟಕವಾಡುತ್ತಿದ್ದಾರೆ. ರಾಜ್ಯ ಸರ್ಕಾರ ಅಭಿವೃದ್ಧಿ ಮರೆತಿದೆ’ ಎಂದು ಆರೋಪಿಸಿದರು.</p>.<p>‘ಜನರ ಪೀಡಕವಾಗಿರುವ ಸರ್ಕಾರ ವಿದ್ಯುತ್ ಉಚಿತ ಎಂದು ಇನ್ನೊಂದೆಡೆ ಕೈಗಾರಿಕೆ ವಿದ್ಯುತ್ ದರ ಹೆಚ್ಚಳ ಮಾಡಿದೆ. ಇದರಿಂದ ಕೈಗಾರಿಕೆಗಳು ಮುಚ್ಚುವ ಹಂತ ತಲುಪಿದ್ದು, ನೌಕರರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ’ ಎಂದರು.</p>.<p>‘ಬರಗಾಲದ ನಂತರ ಮಳೆಯಾಗಿದೆ ಎಂದು ರೈತರು ಸಂತಸದಲ್ಲಿದ್ದಾಗ ರಸಗೊಬ್ಬರ, ಬೀಜದ ದರ ಏರಿಕೆ ಮಾಡಿ ರೈತರಿಗೆ ಹೊಡೆತ ನೀಡಿದೆ. ಸರಣಿ ಬೆಲೆ ಏರಿಕೆ ಮಾಡುತ್ತಿರುವುದನ್ನು ನೋಡಿದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ’ ಎಂದು ದೂರಿದರು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಎಸ್ಸಿ–ಎಸ್ಟಿ ಸಮುದಾಯದವರು ಜಮೀನು ಖರೀದಿಸಿದರೆ ನೀಡುತ್ತಿದ್ದ ಸಹಾಯಧನ ನಿಂತು ಹೋಗಿದೆ ಎಂದು ಆರೋಪಿಸಿದರು.</p>.<p>ಬಿಟಿಡಿಎದಲ್ಲಿ ವ್ಯಕ್ತಿಯೊಬ್ಬರ ಆಡಳಿತ ನಡೆಯುತ್ತಿದೆ. ಭ್ರಷ್ಟಾಚಾರ ಹೆಚ್ಚಾಗಿದೆ. ಸಂತ್ರಸ್ತರ ಸಂಕಷ್ಟ ಕೇಳುವ ಕೆಲಸ ಆಗುತ್ತಿಲ್ಲ ಎಂದು ಟೀಕಿಸಿದರು.</p>.<p>ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಮಾತನಾಡಿ, ‘ಗ್ಯಾರಂಟಿ ಆಮಿಷವೊಡ್ಡಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಈಗ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ’ ಎಂದು ದೂರಿದರು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನೂರ, ಮಾಧ್ಯಮ ಸಂಚಾಲಕ ಶಿವಾನಂದ ಸುರಪುರ ಇದ್ದರು.</p>.<p><strong>ಪ್ರತಿಭಟನೆ: </strong> </p><p>ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಸೋಮವಾರ ಬೆಳಿಗ್ಗೆ 11.30ಕ್ಕೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಬೀಳೂರು ಅಜ್ಜನವರ ಗುಡಿಯಿಂದ ಬಸವೇಶ್ವರ ವೃತ್ತದವರೆಗೆ ರ್ಯಾಲಿ ನಡೆಯಲಿದೆ. ಸಂಸದ ಪಿ.ಸಿ. ಗದ್ದಿಗೌಡರ ಶಾಸಕರು ಮಾಜಿ ಶಾಸಕರು ವಿಧಾನ ಪರಿಷತ್ತಿನ ಸದಸ್ಯರು ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>