ಖಚಿತ ಮಾಹಿತಿ ಮೇರೆಗೆ ಬಾಗಲಕೋಟೆ ಜಿಲ್ಲಾ ಅಬಕಾರಿ ಉಪ ಆಯುಕ್ತ ರಮೇಶ ಕುಮಾರ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡು ಜಮೀನಿನ ಮಾಲೀಕನನ್ನು ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆ ಮುಧೋಳ ತಾಲ್ಲೂಕಿನ ಮಂಟೂರು ಸಮೀಪ ಕಬ್ಬಿನ ಗದ್ದೆಯಲ್ಲಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ಅಬಕಾರಿ ಅಧಿಕಾರಿಗಳ ತಂಡ ವಶಪಡಿಸಿಕೊಂಡಿದ್ದನ್ನು ಸ್ಮರಿಸಬಹುದು.