<p><strong>ಬಾಗಲಕೋಟೆ:</strong> ಜಿಲ್ಲೆಯ ಉತ್ತೂರು, ಶಿರೋಳ, ಹನಗಂಡಿ ಸೇರಿ ವಿವಿಧ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ₹ 1 ಸಾವಿರದಿಂದ ₹ 2 ಸಾವಿರವರೆಗೆ ‘ಠೇವಣಿ’ ಇಡುವ ಯೋಜನೆ ಜಾರಿಗೊಳಿಸಲಾಗಿದೆ. </p>.<p><strong>ಉತ್ತೂರು:</strong> 108 ವರ್ಷದ ಉತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಯವರೆಗೆ 175 ವಿದ್ಯಾರ್ಥಿಗಳು ಇದ್ದಾರೆ. ತಾವು ಓದಿರುವ ಶಾಲೆಗೆ ಈಚೆಗೆ ಭೇಟಿ ನೀಡಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ‘ಒಂದನೇ ತರಗತಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ₹2 ಸಾವಿರ ಠೇವಣಿ ಇಡಲಾಗುವುದು’ ಎಂದು ಘೋಷಿಸಿದರು.</p>.<p>‘ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ಯುಬಿ ಕಂಪನಿಯು ಉತ್ತೂರು ಶಾಲೆಗೆ ₹5 ಕೋಟಿ ವೆಚ್ಚದಲ್ಲಿ 20 ಕೊಠಡಿಗಳನ್ನು ನಿರ್ಮಿಸಲಿದೆ. ಸಚಿವ ತಿಮ್ಮಾಪುರ ಅವರು ಆಸಕ್ತಿ ತೋರಿದ್ದಾರೆ. ಸದ್ಯ 8 ಮಕ್ಕಳು ಪ್ರವೇಶ ಪಡೆದಿದ್ದು, ಪ್ರಕ್ರಿಯೆ ಮುಂದುವರಿದಿದೆ’ ಎಂದು ಉತ್ತೂರು ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಅಶೋಕ ಬಾಗೋಜಿ ತಿಳಿಸಿದರು.</p>.<p><strong>ಶಿರೋಳ:</strong> 150 ವರ್ಷದ ಶಿರೋಳದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ 500 ರಿಂದ 205ಕ್ಕೆ ಇಳಿಮುಖವಾಗಿದೆ. ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಮೊದಲನೇ ತರಗತಿಗೆ ದಾಖಲಾಗುವ ಪ್ರತಿ ಮಗುವಿನ ಹೆಸರಿನಲ್ಲಿ ₹1 ಸಾವಿರ ಠೇವಣಿ ಇಡಲು ನಿರ್ಧರಿಸಿದೆ.</p>.<p>‘ಶಿರೋಳದ ಶಾಲೆಯಲ್ಲಿ ಮೊದಲನೇ ತರಗತಿಗೆ ದಾಖಲಾದ 7 ಮಕ್ಕಳ ಹೆಸರಿನಲ್ಲಿ ಠೇವಣಿ ಇಡಲಾಗಿದೆ. ಠೇವಣಿ ಜೊತೆಗೆ ಎರಡು ಸ್ಟಾರ್ಟ್ ಕ್ಲಾಸ್, ಗ್ರಂಥಾಲಯ ಸೇರಿ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ’ ಎಂದು ಶಿರೋಳ ಶಾಲೆಯ ಮುಖ್ಯ ಶಿಕ್ಷಕ ರಾಮನಗೌಡ ಪಾಟೀಲ ತಿಳಿಸಿದರು.</p>.<p>ಇದೇ ರೀತಿ ಹನಗಂಡಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಆರ್.ಎಲ್. ಪತ್ತಾರ, ಅಲಗೂರ್ ತೋಟದ ಶಾಲೆಯ ಶಿಕ್ಷಕ ಬಿ.ಎಸ್. ಅರವತ್ತಿ ಮತ್ತು ಲಿಂಗನೂರ ಶಾಲೆ ಎಸ್ಡಿಎಂಸಿ ಸದಸ್ಯರು ಠೇವಣಿ ಇಡಲು ನಿರ್ಧರಿಸಿದ್ದಾರೆ.</p>.<div><blockquote>ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳಿವೆ. ಮಕ್ಕಳನ್ನು ಪ್ರೋತ್ಸಾಹಿಲು ಠೇವಣಿ ಯೋಜನೆ ಜಾರಿಗೊಳಿಸಲಾಗಿದೆ. ಇದು ಸದ್ಬಳಕೆ ಆಗಬೇಕು.</blockquote><span class="attribution"> ಆರ್.ಬಿ. ತಿಮ್ಮಾಪುರ ಸಚಿವ ಅಬಕಾರಿ ಖಾತೆ</span></div>.<div><blockquote>ಸರ್ಕಾರಿ ಶಾಲೆಗೆ ಸೇರುವ ಮಕ್ಕಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಶಿಕ್ಷಕರೇ ಠೇವಣಿ ಯೋಜನೆ ಆರಂಭಿಸಿದ್ದಾರೆ. ಉತ್ತಮ ಕಾರ್ಯ.</blockquote><span class="attribution">ಎ.ಕೆ. ಬಸಣ್ಣವರ ಕ್ಷೇತ್ರ ಶಿಕ್ಷಣಾಧಿಕಾರಿ ಜಮಖಂಡಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲೆಯ ಉತ್ತೂರು, ಶಿರೋಳ, ಹನಗಂಡಿ ಸೇರಿ ವಿವಿಧ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ₹ 1 ಸಾವಿರದಿಂದ ₹ 2 ಸಾವಿರವರೆಗೆ ‘ಠೇವಣಿ’ ಇಡುವ ಯೋಜನೆ ಜಾರಿಗೊಳಿಸಲಾಗಿದೆ. </p>.<p><strong>ಉತ್ತೂರು:</strong> 108 ವರ್ಷದ ಉತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಯವರೆಗೆ 175 ವಿದ್ಯಾರ್ಥಿಗಳು ಇದ್ದಾರೆ. ತಾವು ಓದಿರುವ ಶಾಲೆಗೆ ಈಚೆಗೆ ಭೇಟಿ ನೀಡಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ‘ಒಂದನೇ ತರಗತಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ₹2 ಸಾವಿರ ಠೇವಣಿ ಇಡಲಾಗುವುದು’ ಎಂದು ಘೋಷಿಸಿದರು.</p>.<p>‘ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ಯುಬಿ ಕಂಪನಿಯು ಉತ್ತೂರು ಶಾಲೆಗೆ ₹5 ಕೋಟಿ ವೆಚ್ಚದಲ್ಲಿ 20 ಕೊಠಡಿಗಳನ್ನು ನಿರ್ಮಿಸಲಿದೆ. ಸಚಿವ ತಿಮ್ಮಾಪುರ ಅವರು ಆಸಕ್ತಿ ತೋರಿದ್ದಾರೆ. ಸದ್ಯ 8 ಮಕ್ಕಳು ಪ್ರವೇಶ ಪಡೆದಿದ್ದು, ಪ್ರಕ್ರಿಯೆ ಮುಂದುವರಿದಿದೆ’ ಎಂದು ಉತ್ತೂರು ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಅಶೋಕ ಬಾಗೋಜಿ ತಿಳಿಸಿದರು.</p>.<p><strong>ಶಿರೋಳ:</strong> 150 ವರ್ಷದ ಶಿರೋಳದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ 500 ರಿಂದ 205ಕ್ಕೆ ಇಳಿಮುಖವಾಗಿದೆ. ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಮೊದಲನೇ ತರಗತಿಗೆ ದಾಖಲಾಗುವ ಪ್ರತಿ ಮಗುವಿನ ಹೆಸರಿನಲ್ಲಿ ₹1 ಸಾವಿರ ಠೇವಣಿ ಇಡಲು ನಿರ್ಧರಿಸಿದೆ.</p>.<p>‘ಶಿರೋಳದ ಶಾಲೆಯಲ್ಲಿ ಮೊದಲನೇ ತರಗತಿಗೆ ದಾಖಲಾದ 7 ಮಕ್ಕಳ ಹೆಸರಿನಲ್ಲಿ ಠೇವಣಿ ಇಡಲಾಗಿದೆ. ಠೇವಣಿ ಜೊತೆಗೆ ಎರಡು ಸ್ಟಾರ್ಟ್ ಕ್ಲಾಸ್, ಗ್ರಂಥಾಲಯ ಸೇರಿ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ’ ಎಂದು ಶಿರೋಳ ಶಾಲೆಯ ಮುಖ್ಯ ಶಿಕ್ಷಕ ರಾಮನಗೌಡ ಪಾಟೀಲ ತಿಳಿಸಿದರು.</p>.<p>ಇದೇ ರೀತಿ ಹನಗಂಡಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಆರ್.ಎಲ್. ಪತ್ತಾರ, ಅಲಗೂರ್ ತೋಟದ ಶಾಲೆಯ ಶಿಕ್ಷಕ ಬಿ.ಎಸ್. ಅರವತ್ತಿ ಮತ್ತು ಲಿಂಗನೂರ ಶಾಲೆ ಎಸ್ಡಿಎಂಸಿ ಸದಸ್ಯರು ಠೇವಣಿ ಇಡಲು ನಿರ್ಧರಿಸಿದ್ದಾರೆ.</p>.<div><blockquote>ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳಿವೆ. ಮಕ್ಕಳನ್ನು ಪ್ರೋತ್ಸಾಹಿಲು ಠೇವಣಿ ಯೋಜನೆ ಜಾರಿಗೊಳಿಸಲಾಗಿದೆ. ಇದು ಸದ್ಬಳಕೆ ಆಗಬೇಕು.</blockquote><span class="attribution"> ಆರ್.ಬಿ. ತಿಮ್ಮಾಪುರ ಸಚಿವ ಅಬಕಾರಿ ಖಾತೆ</span></div>.<div><blockquote>ಸರ್ಕಾರಿ ಶಾಲೆಗೆ ಸೇರುವ ಮಕ್ಕಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಶಿಕ್ಷಕರೇ ಠೇವಣಿ ಯೋಜನೆ ಆರಂಭಿಸಿದ್ದಾರೆ. ಉತ್ತಮ ಕಾರ್ಯ.</blockquote><span class="attribution">ಎ.ಕೆ. ಬಸಣ್ಣವರ ಕ್ಷೇತ್ರ ಶಿಕ್ಷಣಾಧಿಕಾರಿ ಜಮಖಂಡಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>