ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್– ಜೆಡಿಎಸ್ ಭಾವನಾತ್ಮಕ ವಿಷಯಗಳನ್ನು ಮುಂದೆ ತರುತ್ತಿವೆ. ನಾವು ಅಭಿವೃದ್ಧಿ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಆರ್ಎಸ್ಎಸ್ ದೇಶಭಕ್ತಿ ಬಗ್ಗೆ ಹೇಳುತ್ತದೆ. ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಸಂತರಾಗಿರುವವರು, ಶರಣರಾಗಿರುವವರು ಕೇಶವ ಕೃಪಾದಲ್ಲಿ ಇದ್ದಾರೆ. ಹೀಗಾಗಿ ಆರ್ಎಸ್ಎಸ್ ಬಗ್ಗೆ ಮಾತನಾಡದಂತೆ ಎಚ್ಚರಿಕೆ ಕೊಡುತ್ತೇನೆ ಎಂದರು.