ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲಿಕೊಂಡಕ್ಕೆ ಜಿಲ್ಲಾಧಿಕಾರಿ ಭೇಟಿ: ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

Last Updated 20 ಫೆಬ್ರುವರಿ 2021, 8:57 IST
ಅಕ್ಷರ ಗಾತ್ರ

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲ್ಲಿಕೊಂಡ ಗ್ರಾಮದಲ್ಲಿ ಜನರ ಭೇಟಿಗೆ ಬಂದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.

ಗ್ರಾಮಕ್ಕೆ ಜಿಲ್ಲಾಧಿಕಾರಿ ಬರುತ್ತಿದ್ದಂತೆಯೇ ಅವರನ್ನು ವಿವಿಧ ಜಾನಪದ ಕಲಾ ತಂಡಗಳ ಸದಸ್ಯರು ಹಾಗೂ ಶಾಲಾ ಮಕ್ಕಳ ಮೆರವಣಿಗೆಯಲ್ಲಿ ಗ್ರಾಮದ ಹಣಮಂತ ದೇವರ ಗುಡಿಗೆ ಕರೆತಂದರು.

ದೇವರ ದರ್ಶನ ಪಡೆದ ಅವರು, ಗ್ರಾಮಸ್ಥರ ಕುಶಲೋಪರಿ ಮಾಡಿದರು ಊರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಜಿಲ್ಲಾಧಿಕಾರಿ ಭೇಟಿಗೆ ಅಕ್ಕಪಕ್ಕದ ಊರಿನ ಜನರು ಬಂದಿದ್ದಾರೆ. ಸಂಜೆ 5 ಗಂಟೆಯವರೆಗೆ ಜಿಲ್ಲಾಧಿಕಾರಿ ಗ್ರಾಮದಲ್ಲಿ ಇರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT