ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಸ್ಮಿಕವಾಗಿ ಸಾವಿಗೀಡಾದ ಮೂರು ತಿಂಗಳ ಒಳಗಿನ ಕುರಿ-ಮೇಕೆಗಳಿಗೆ ₹ 2,500 ಹಾಗೂ ಆರು ತಿಂಗಳು ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನ ಕುರಿ-ಮೇಕೆಗಳಿಗೆ ₹ 5,000 ಪರಿಹಾರ ಧನವನ್ನು ಕುರಿಗಾರರಿಗೆ ನೀಡುವ ಯೋಜನೆಯನ್ನು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿಗೊಳಿಸಲಾಗಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಅನುದಾನ ಬಿಡುಗಡೆಯಾಗದೇ ಯೋಜನೆ ಸ್ಥಗಿತಗೊಂಡಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುರಿಗಾರರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.