<p><strong>ಕೂಡಲಸಂಗಮ:</strong> ಕೆಳ ಹಾಗೂ ಮಧ್ಯಮ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಕ್ಷಣದ ಜೊತೆಗೆ ಉದ್ಯೋಗವನ್ನು ಕೊಡುವಂತಹ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಬಾಗಲಕೋಟೆ, ವಿಜಯಪುರ ಅವಳಿ ಜಿಲ್ಲೆಯ ಏಕೈಕ ಕೇಂದ್ರವಾಗಿ ಕೂಡಲಸಂಗಮದಲ್ಲಿ ಕಳೆದ 22 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ.</p>.<p>ಕೂಡಲಸಂಗಮ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ದೇಶ ವಿದೇಶ ಕಂಪನಿಗಳಲ್ಲಿ ಉದ್ಯೋಗಿಗಳಾಗಿದ್ದಾರೆ. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವ ಎಸ್.ಎಸ್.ಎಲ್.ಸಿ ಪಾಸಾಗಿರುವ ವಿದ್ಯಾರ್ಥಿಗಳು ಜಿಟಿಟಿಸಿಯಲ್ಲಿ ಪ್ರವೇಶ ಪಡೆಯುವುದು ಉತ್ತಮ ಆಯ್ಕೆ.</p>.<p>ವೃತ್ತಿ ತರಬೇತಿ ಪಡೆಯುವವರಿಗಾಗಿ ರಾಜ್ಯ ಸರ್ಕಾರ 2000ನೇ ಇಸ್ವಿಯಲ್ಲಿ ಕೂಡಲಸಂಗಮದಲ್ಲಿ ಜಿಟಿಟಿಸಿ ಆರಂಭಿಸಿದೆ. ಇಲ್ಲಿ ತರಬೇತಿ ಪಡೆದವರು ನಿರುದ್ಯೋಗಿಯಾಗಿ ಉಳಿದಿಲ್ಲ. ಎಸ್.ಎಸ್.ಎಲ್.ಸಿ ಪಾಸಾಗಿರುವ ವಿದ್ಯಾರ್ಥಿಗಳಿಗೆ 4 ವರ್ಷದ ಡಿಪ್ಲೊಮಾ ಕೋರ್ಸ್ ಇಲ್ಲಿದೆ.</p>.<p>ಟೂಲ್ & ಡೈ ಮೇಕಿಂಗ್ ಮೂರು ವರ್ಷದ ವಿಷಯಾಧಾರಿತ ತರಬೇತಿ ಹಾಗೂ ಒಂದು ವರ್ಷದ ಕೈಗಾರಿಕೆಗಳಲ್ಲಿ ಉದ್ಯಮ ತರಬೇತಿ ಇರುತ್ತದೆ. ಈ ಒಂದು ವರ್ಷದ ಉದ್ಯಮ ತರಬೇತಿಯಲ್ಲಿ ಪ್ರತಿ ವಿದ್ಯಾರ್ಥಿಗೂ ಪ್ರತಿ ತಿಂಗಳು ₹10,000–₹15,000 ಗೌರವ ಧನವನ್ನು ಕಾರ್ಯನಿರ್ವಹಿಸುವ ಕಂಪನಿ ಕೊಡಲಿದೆ.</p>.<p>ಸೆಮಿಸ್ಟೆರ್ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದ್ದು, ಪ್ರತಿ ಸೆಮಿಸ್ಟರಗೆ ₹11,000 ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ನಾಲ್ಕನೇ ವರ್ಷದಲ್ಲಿ ಒಂದು ವರ್ಷಕ್ಕೆ ₹11,000 ಶುಲ್ಕ ಭರಿಸಬೇಕಾಗುತ್ತದೆ.</p>.<p>ಜಿಟಿಟಿಸಿಯಲ್ಲಿ ನಾಲ್ಕು ವರ್ಷದ ಡಿಪ್ಲೊಮಾ ಓದಿದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಮೂರನೇ ಸೆಮಿಸ್ಟರಗೆ ಪ್ರವೇಶ ಹೊಂದಲು ಅವಕಾಶವಿದೆ.</p>.<p>ಜಿಟಿಟಿಸಿಯಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗಿದೆ. ತರಬೇತಿ ನೀಡಲು 11 ಉಪನ್ಯಾಸಕರು, 6 ಶಿಕ್ಷಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ವರ್ಷ ಕ್ಯಾಂಪಸ್ ಸಂದರ್ಶನ ನಡೆಯುವುದು. ಒನ್ ರೂಫ್ ಕ್ಯಾಂಪಸ್ ಆಗಿರುವ ಈ ಶಿಕ್ಷಣ ಕೇಂದ್ರ 10 ಎಕರೆ ವಿಶಾಲವಾದ ಜಾಗದಲ್ಲಿ ಇದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ನಿಲಯ ಇವೆ.</p>.<p>‘ಬ್ಯಾಂಕಾಕ್, ಥಾಯ್ಲೆಂಡ್ನ ಹಾನಿವೊಲ್ ಎಲೆಕ್ಟ್ರಾನಿಕ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಜಿಟಿಟಿಸಿ ಮುಗಿಸಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ವಿಪುಲ ಅವಕಾಶಗಳು ಇವೆ’ ಎಂದು ಕೂಡಲಸಂಗಮ ಜಿಟಿಟಿಸಿಯಲ್ಲಿ ತರಬೇತಿ ಪಡೆದ ಶಾಹಿದ್ ಡೊನೂರ ಹೇಳಿದರು.</p>.<p><strong>ಸಂಪರ್ಕ ವಿಳಾಸ:</strong> ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕೂಡಲಸಂಗಮ. ದೂರವಾಣಿ: 08351–268048 ಮೊಬೈಲ್ ಫೋನ್:<br />7411811916.</p>.<p>*<br />ಗ್ರಾಮೀಣ, ನಗರ ಪ್ರದೇಶದ ಬಡ, ಮಧ್ಯಮ ವರ್ಗದ ಮಕ್ಕಳು ನಿಶ್ಚಿತವಾಗಿ ಬಹುಬೇಗ ಉದ್ಯೋಗ ಹೊಂದಲು ಜಿಟಿಟಿಸಿ ಉತ್ತಮ ಆಯ್ಕೆ. ಇಲ್ಲಿ ಶಿಕ್ಷಣ ಪಡೆದು ವಿದ್ಯಾರ್ಥಿಗಳು ನಿಶ್ಚಿತವಾಗಿ ಉದ್ಯೋಗಕ್ಕೆ ಸೇರುವರು.<br /><em><strong>-ನಿರಂಜನ ಎನ್, ಪ್ರಾಚಾರ್ಯ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡಲಸಂಗಮ:</strong> ಕೆಳ ಹಾಗೂ ಮಧ್ಯಮ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಕ್ಷಣದ ಜೊತೆಗೆ ಉದ್ಯೋಗವನ್ನು ಕೊಡುವಂತಹ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಬಾಗಲಕೋಟೆ, ವಿಜಯಪುರ ಅವಳಿ ಜಿಲ್ಲೆಯ ಏಕೈಕ ಕೇಂದ್ರವಾಗಿ ಕೂಡಲಸಂಗಮದಲ್ಲಿ ಕಳೆದ 22 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ.</p>.<p>ಕೂಡಲಸಂಗಮ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ದೇಶ ವಿದೇಶ ಕಂಪನಿಗಳಲ್ಲಿ ಉದ್ಯೋಗಿಗಳಾಗಿದ್ದಾರೆ. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವ ಎಸ್.ಎಸ್.ಎಲ್.ಸಿ ಪಾಸಾಗಿರುವ ವಿದ್ಯಾರ್ಥಿಗಳು ಜಿಟಿಟಿಸಿಯಲ್ಲಿ ಪ್ರವೇಶ ಪಡೆಯುವುದು ಉತ್ತಮ ಆಯ್ಕೆ.</p>.<p>ವೃತ್ತಿ ತರಬೇತಿ ಪಡೆಯುವವರಿಗಾಗಿ ರಾಜ್ಯ ಸರ್ಕಾರ 2000ನೇ ಇಸ್ವಿಯಲ್ಲಿ ಕೂಡಲಸಂಗಮದಲ್ಲಿ ಜಿಟಿಟಿಸಿ ಆರಂಭಿಸಿದೆ. ಇಲ್ಲಿ ತರಬೇತಿ ಪಡೆದವರು ನಿರುದ್ಯೋಗಿಯಾಗಿ ಉಳಿದಿಲ್ಲ. ಎಸ್.ಎಸ್.ಎಲ್.ಸಿ ಪಾಸಾಗಿರುವ ವಿದ್ಯಾರ್ಥಿಗಳಿಗೆ 4 ವರ್ಷದ ಡಿಪ್ಲೊಮಾ ಕೋರ್ಸ್ ಇಲ್ಲಿದೆ.</p>.<p>ಟೂಲ್ & ಡೈ ಮೇಕಿಂಗ್ ಮೂರು ವರ್ಷದ ವಿಷಯಾಧಾರಿತ ತರಬೇತಿ ಹಾಗೂ ಒಂದು ವರ್ಷದ ಕೈಗಾರಿಕೆಗಳಲ್ಲಿ ಉದ್ಯಮ ತರಬೇತಿ ಇರುತ್ತದೆ. ಈ ಒಂದು ವರ್ಷದ ಉದ್ಯಮ ತರಬೇತಿಯಲ್ಲಿ ಪ್ರತಿ ವಿದ್ಯಾರ್ಥಿಗೂ ಪ್ರತಿ ತಿಂಗಳು ₹10,000–₹15,000 ಗೌರವ ಧನವನ್ನು ಕಾರ್ಯನಿರ್ವಹಿಸುವ ಕಂಪನಿ ಕೊಡಲಿದೆ.</p>.<p>ಸೆಮಿಸ್ಟೆರ್ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದ್ದು, ಪ್ರತಿ ಸೆಮಿಸ್ಟರಗೆ ₹11,000 ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ನಾಲ್ಕನೇ ವರ್ಷದಲ್ಲಿ ಒಂದು ವರ್ಷಕ್ಕೆ ₹11,000 ಶುಲ್ಕ ಭರಿಸಬೇಕಾಗುತ್ತದೆ.</p>.<p>ಜಿಟಿಟಿಸಿಯಲ್ಲಿ ನಾಲ್ಕು ವರ್ಷದ ಡಿಪ್ಲೊಮಾ ಓದಿದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಮೂರನೇ ಸೆಮಿಸ್ಟರಗೆ ಪ್ರವೇಶ ಹೊಂದಲು ಅವಕಾಶವಿದೆ.</p>.<p>ಜಿಟಿಟಿಸಿಯಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗಿದೆ. ತರಬೇತಿ ನೀಡಲು 11 ಉಪನ್ಯಾಸಕರು, 6 ಶಿಕ್ಷಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ವರ್ಷ ಕ್ಯಾಂಪಸ್ ಸಂದರ್ಶನ ನಡೆಯುವುದು. ಒನ್ ರೂಫ್ ಕ್ಯಾಂಪಸ್ ಆಗಿರುವ ಈ ಶಿಕ್ಷಣ ಕೇಂದ್ರ 10 ಎಕರೆ ವಿಶಾಲವಾದ ಜಾಗದಲ್ಲಿ ಇದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ನಿಲಯ ಇವೆ.</p>.<p>‘ಬ್ಯಾಂಕಾಕ್, ಥಾಯ್ಲೆಂಡ್ನ ಹಾನಿವೊಲ್ ಎಲೆಕ್ಟ್ರಾನಿಕ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಜಿಟಿಟಿಸಿ ಮುಗಿಸಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ವಿಪುಲ ಅವಕಾಶಗಳು ಇವೆ’ ಎಂದು ಕೂಡಲಸಂಗಮ ಜಿಟಿಟಿಸಿಯಲ್ಲಿ ತರಬೇತಿ ಪಡೆದ ಶಾಹಿದ್ ಡೊನೂರ ಹೇಳಿದರು.</p>.<p><strong>ಸಂಪರ್ಕ ವಿಳಾಸ:</strong> ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕೂಡಲಸಂಗಮ. ದೂರವಾಣಿ: 08351–268048 ಮೊಬೈಲ್ ಫೋನ್:<br />7411811916.</p>.<p>*<br />ಗ್ರಾಮೀಣ, ನಗರ ಪ್ರದೇಶದ ಬಡ, ಮಧ್ಯಮ ವರ್ಗದ ಮಕ್ಕಳು ನಿಶ್ಚಿತವಾಗಿ ಬಹುಬೇಗ ಉದ್ಯೋಗ ಹೊಂದಲು ಜಿಟಿಟಿಸಿ ಉತ್ತಮ ಆಯ್ಕೆ. ಇಲ್ಲಿ ಶಿಕ್ಷಣ ಪಡೆದು ವಿದ್ಯಾರ್ಥಿಗಳು ನಿಶ್ಚಿತವಾಗಿ ಉದ್ಯೋಗಕ್ಕೆ ಸೇರುವರು.<br /><em><strong>-ನಿರಂಜನ ಎನ್, ಪ್ರಾಚಾರ್ಯ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>