<p><strong>ರಾಂಪುರ:</strong> ರಾಜ್ಯ ಸರ್ಕಾರ ಜಾರಿ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡವರು ಹಾಗು ಮಧ್ಯಮ ವರ್ಗದ ಕುಟುಂಬಗಳಿಗೆ ಆಶಾಕಿರಣವಾಗಿವೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಎನ್.ರಾಂಪುರ ಹೇಳಿದರು.</p>.<p>ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ಸೋಮವಾರ ಜರುಗಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಗ್ರಾಮ ಪಂಚಾಯಿತಿ ಮಟ್ಟದ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಗ್ಯಾರಂಟಿ ಭರವಸೆಯನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದುಕೊಂಡಿದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಪಿ.ನಾಗರಾಜ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ಬಹು ಉಪಯುಕ್ತ ಯೋಜನೆಯಾಗಿದ್ದು ಫಲಾನುಭವಿಗಳು ಪ್ರಯೋಜನ ಪಡೆದುಕೊಳ್ಳಬೇಕು ಎಂದರು.</p>.<p>ಮುಖ್ಯ ಅತಿಥಿ ಮಲ್ಲಿಕಾರ್ಜುನ ಮೇಟಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರು ಅದರಲ್ಲೂ ಗ್ರಾಮೀಣ ಜನರ ಬದುಕನ್ನು ಶ್ರೀಮಂತಗೊಳಿಸಿವೆ ಎಂದು ಹೇಳಿದರು. </p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಮಿನಸಾಬ ಹವಾಲ್ದಾರ್, ರವಿ ಅನವಾಲ ಮಾತನಾಡಿದರು. ಹೆಸ್ಕಾಂ ಬೇವೂರ ವಲಯ ಅಧಿಕಾರಿ ನಾಮದೇವ ರಾಠೋಡ, ಸಾರಿಗೆ ಸಂಸ್ಥೆಯ ಎಚ್.ಆರ್.ಗೌಡರ, ಆಹಾರ ಇಲಾಖೆಯ ಬಂಗಾರಗುಂಡ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಜಯಶ್ರೀ ಕಟಗಿ ಸಂಬಂಧಿತ ಯೋಜನೆಗಳ ಮಾಹಿತಿ ನೀಡಿದರು. ಪಿಕೆಪಿಎಸ್ ಅಧ್ಯಕ್ಷ ವೇಮನ ಯಡಹಳ್ಳಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪಾರ್ವತಿ ಮಾದರ, ಬಾಲವ್ವ ಮಾದರ, ಬಿ.ಆರ್.ಯಡಹಳ್ಳಿ, ಶಿವನಗೌಡ ಪಾಟೀಲ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಪಾಟೀಲ, ಶಿಕ್ಷಕ ಪಾಂಡು ಸನ್ನಪ್ಪನವರ ಅತಿಥಿಗಳಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ:</strong> ರಾಜ್ಯ ಸರ್ಕಾರ ಜಾರಿ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡವರು ಹಾಗು ಮಧ್ಯಮ ವರ್ಗದ ಕುಟುಂಬಗಳಿಗೆ ಆಶಾಕಿರಣವಾಗಿವೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಎನ್.ರಾಂಪುರ ಹೇಳಿದರು.</p>.<p>ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ಸೋಮವಾರ ಜರುಗಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಗ್ರಾಮ ಪಂಚಾಯಿತಿ ಮಟ್ಟದ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಗ್ಯಾರಂಟಿ ಭರವಸೆಯನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದುಕೊಂಡಿದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಪಿ.ನಾಗರಾಜ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ಬಹು ಉಪಯುಕ್ತ ಯೋಜನೆಯಾಗಿದ್ದು ಫಲಾನುಭವಿಗಳು ಪ್ರಯೋಜನ ಪಡೆದುಕೊಳ್ಳಬೇಕು ಎಂದರು.</p>.<p>ಮುಖ್ಯ ಅತಿಥಿ ಮಲ್ಲಿಕಾರ್ಜುನ ಮೇಟಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರು ಅದರಲ್ಲೂ ಗ್ರಾಮೀಣ ಜನರ ಬದುಕನ್ನು ಶ್ರೀಮಂತಗೊಳಿಸಿವೆ ಎಂದು ಹೇಳಿದರು. </p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಮಿನಸಾಬ ಹವಾಲ್ದಾರ್, ರವಿ ಅನವಾಲ ಮಾತನಾಡಿದರು. ಹೆಸ್ಕಾಂ ಬೇವೂರ ವಲಯ ಅಧಿಕಾರಿ ನಾಮದೇವ ರಾಠೋಡ, ಸಾರಿಗೆ ಸಂಸ್ಥೆಯ ಎಚ್.ಆರ್.ಗೌಡರ, ಆಹಾರ ಇಲಾಖೆಯ ಬಂಗಾರಗುಂಡ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಜಯಶ್ರೀ ಕಟಗಿ ಸಂಬಂಧಿತ ಯೋಜನೆಗಳ ಮಾಹಿತಿ ನೀಡಿದರು. ಪಿಕೆಪಿಎಸ್ ಅಧ್ಯಕ್ಷ ವೇಮನ ಯಡಹಳ್ಳಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪಾರ್ವತಿ ಮಾದರ, ಬಾಲವ್ವ ಮಾದರ, ಬಿ.ಆರ್.ಯಡಹಳ್ಳಿ, ಶಿವನಗೌಡ ಪಾಟೀಲ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಪಾಟೀಲ, ಶಿಕ್ಷಕ ಪಾಂಡು ಸನ್ನಪ್ಪನವರ ಅತಿಥಿಗಳಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>