<p><strong>ಜಮಖಂಡಿ:</strong> ಸಮಾಜದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯುವ ಸಮುದಾಯಕ್ಕೆ ಒಳ್ಳೆಯ ಮಾರ್ಗದರ್ಶನ ಅವಶ್ಯಕವಾಗಿದೆ. ಮನೆಯಲ್ಲಿ ಪಾಲಕರು ಸಂಸ್ಕಾರ ಕಲಿಸಬೇಕು. ಮಕ್ಕಳ ಮೇಲೆ ಗಮನ ಹರಿಸಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಧೀಶೆ ಶ್ರೀದೇವಿ ನಾಯಕ ಹೇಳಿದರು.</p>.<p>ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಎನ್.ಎಸ್.ಎಸ್.ಘಟಕ, ಇಕೋ ಕ್ಲಬ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.</p>.<p>ವಕೀಲ ಪ್ರವೀಣ ಕಮ್ಮಾರ ಮಾತನಾಡಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ನಶೆಮುಕ್ತ ಭಾರತ ಮಾಡಬೇಕಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಕಾನೂನು ಸರಿಯಾಗಿ ತಿಳಿದುಕೊಂಡು, ದುಶ್ಚಟಗಳಿಂದ ದೂರ ಇರಬೇಕು ಎಂದರು.</p>.<p>ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ, ಪ್ರಾಚಾರ್ಯ ಎಸ್.ಎಸ್.ಬಿರಾದಾರ ಇದ್ದರು. ಉಪನ್ಯಾಸಕಿ ಭವಾನಿ ಗುಗ್ಗರಿ ಪ್ರಾರ್ಥಿಸಿದರು. ಸಿ,ಎಸ್,ಜನಗೊಂಡ ಸ್ವಾಗತಿಸಿದರು, ಎಲ್.ಕೆ. ಗವಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಎಸ್.ಭಾಗೊಜಿ ಪರಿಚಯಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ಸಮಾಜದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯುವ ಸಮುದಾಯಕ್ಕೆ ಒಳ್ಳೆಯ ಮಾರ್ಗದರ್ಶನ ಅವಶ್ಯಕವಾಗಿದೆ. ಮನೆಯಲ್ಲಿ ಪಾಲಕರು ಸಂಸ್ಕಾರ ಕಲಿಸಬೇಕು. ಮಕ್ಕಳ ಮೇಲೆ ಗಮನ ಹರಿಸಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಧೀಶೆ ಶ್ರೀದೇವಿ ನಾಯಕ ಹೇಳಿದರು.</p>.<p>ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಎನ್.ಎಸ್.ಎಸ್.ಘಟಕ, ಇಕೋ ಕ್ಲಬ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.</p>.<p>ವಕೀಲ ಪ್ರವೀಣ ಕಮ್ಮಾರ ಮಾತನಾಡಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ನಶೆಮುಕ್ತ ಭಾರತ ಮಾಡಬೇಕಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಕಾನೂನು ಸರಿಯಾಗಿ ತಿಳಿದುಕೊಂಡು, ದುಶ್ಚಟಗಳಿಂದ ದೂರ ಇರಬೇಕು ಎಂದರು.</p>.<p>ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ, ಪ್ರಾಚಾರ್ಯ ಎಸ್.ಎಸ್.ಬಿರಾದಾರ ಇದ್ದರು. ಉಪನ್ಯಾಸಕಿ ಭವಾನಿ ಗುಗ್ಗರಿ ಪ್ರಾರ್ಥಿಸಿದರು. ಸಿ,ಎಸ್,ಜನಗೊಂಡ ಸ್ವಾಗತಿಸಿದರು, ಎಲ್.ಕೆ. ಗವಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಎಸ್.ಭಾಗೊಜಿ ಪರಿಚಯಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>