‘ಶಾಲೆಯ ಕಟ್ಟಡ ನಿರ್ಮಾಣ ಆರಂಭಿಸುವ ಮುನ್ನ ರೈತರೊಂದಿಗೆ ಚರ್ಚಿಸಲಾಗಿತ್ತು. ಅವರು ಹೆಚ್ಚು ಹಣ ಮತ್ತು ನೌಕರಿಗಾಗಿ ಬೇಡಿಕೆ ಇಟ್ಟಿದ್ದರಿಂದ ನಾವು ಸುಮ್ಮನಾದೆವು. ಪ್ರಸ್ತುತ ಇಂದಿರಾಗಾಂಧಿ ವಸತಿ ಶಾಲೆಯ ಪಕ್ಕದಲ್ಲಿಯೇ ರಾಣಿ ಚನ್ನಮ್ಮ ವಸತಿ ಶಾಲೆ ಕಟ್ಟಡಕ್ಕಾಗಿ ಸರ್ಕಾರ ₹25 ಕೋಟಿ ಅನುದಾನ ನೀಡಿದೆ. ಸದ್ಯದಲ್ಲಿಯೇ ಕಟ್ಟಡ ಕಾಮಗಾರಿ ಆರಂಭವಾಗಲಿದೆ. ಅಲ್ಲಿಂದ ನೇರವಾಗಿ ಸರ್ಕಾರಿ ಜಾಗದಲ್ಲಿಯೇ ತೂಗುಣಸಿ ಕ್ರಾಸ್ವರೆಗೆ ರಸ್ತೆ ನಿರ್ಮಾಣ ಮಾಡಲಾಗುವುದು. ಆಗ ಯಾವುದೇ ಸಮಸ್ಯೆ ಇರುವುದಿಲ್ಲ’ ಎಂದು ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಘದ ಎಂಜಿನಿಯರ್ ನಟರಾಜನ್ ಉತ್ತರಿಸುತ್ತಾರೆ.