<p><strong>ಗುಳೇದಗುಡ್ಡ</strong> : ‘ದೇಶದಲ್ಲಿ ಸಂತಪರಂಪರೆ ಅನಾದಿಕಾಲದಿಂದಲೂ ಇದೆ. ಅವರು ಕೀರ್ತನೆಗಳ ಮೂಲಕ ಸಮಾಜ ಸುಧಾರಣೆ ಮಾಡಿದರು. ಭಕ್ತಿ ಪರಂಪರೆಯ ಮಾರ್ಗದ ಮೂಲಕ ಅಪಾರವಾದ ಕೊಡುಗೆ ನೀಡಿದರು’ ಎಂದು ಮಾಜಿ ಶಾಸಕ ರಾಜಶೇಖರ ಶೀಲವಂತ ಹೇಳಿದರು.</p>.<p>ಅವರು ಗುರುವಾರ ಪಟ್ಟಣದ ಪಾಂಡುರಂಗ ವಿಠ್ಠಲ ದೇವಸ್ಥಾನದಲ್ಲಿ ರಾಮನವಮಿ ಉತ್ಸವದ ನಿಮಿತ್ತ ಹಮ್ಮಿಕೊಂಡ ದಿಂಡಿ ಸಪ್ತಾಹ, ಜ್ಞಾನೇಶ್ವರಿ ಪಾರಾಯಣ ಹಾಗೂ ಕಳಸಾರೋಹನ ಸಮಾರಂಭದಲ್ಲಿ ಮಾತನಾಡಿದರು.</p>.<p>ಜನರು ಭಕ್ತಿ ಮಾರ್ಗದ ಮೂಲಕ ನೆಮ್ಮದಿ ಕಾಣಬಹುದಾಗಿದ್ದು ದೇವರನ್ನು ಭಜನೆ,ಕೀರ್ತನೆಗಳನ್ನು ಸ್ಮರಿಸಬಹುದಾಗಿದೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ ಮಾತನಾಡಿದರು. ಕೃಷ್ಣ ಮಹಾರಾಜರು,ಮುರುಘಾಮಠದ ಕಾಶೀನಾಥ ಶ್ರೀಗಳು ಸಾನಿಧ್ಯವಹಿಸಿ ಮಾತನಾಡಿದರು. ಕೀರ್ತನಕಾರರಿಗೆ,ಮೃದಂಗವಾದಕರಿಗೆ,ದಾನಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾಂಡುರಂಗನ ಭಾವಚಿತ್ರದ ಮೆರವಣಿಗೆ ಮಹಿಳೆಯರು ಕುಂಭ ಕಳಸದೊಂದಿಗೆ ಜರುಗಿತು.</p>.<p>ಸಂಪತ್ಕುಮಾರ ರಾಠಿ,ರಂಗಪ್ಪ ಶೇಬಿನಕಟ್ಟಿ,ಮುರುಗೇಶ ರಾಜನಾಳ,ಸುಭಾಷ ಸಿಂಧೆ,ಗೋಪಾಲ ಸಿಂಧೆ,ಪರಶುರಾಮ ಸಿಂಧೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ</strong> : ‘ದೇಶದಲ್ಲಿ ಸಂತಪರಂಪರೆ ಅನಾದಿಕಾಲದಿಂದಲೂ ಇದೆ. ಅವರು ಕೀರ್ತನೆಗಳ ಮೂಲಕ ಸಮಾಜ ಸುಧಾರಣೆ ಮಾಡಿದರು. ಭಕ್ತಿ ಪರಂಪರೆಯ ಮಾರ್ಗದ ಮೂಲಕ ಅಪಾರವಾದ ಕೊಡುಗೆ ನೀಡಿದರು’ ಎಂದು ಮಾಜಿ ಶಾಸಕ ರಾಜಶೇಖರ ಶೀಲವಂತ ಹೇಳಿದರು.</p>.<p>ಅವರು ಗುರುವಾರ ಪಟ್ಟಣದ ಪಾಂಡುರಂಗ ವಿಠ್ಠಲ ದೇವಸ್ಥಾನದಲ್ಲಿ ರಾಮನವಮಿ ಉತ್ಸವದ ನಿಮಿತ್ತ ಹಮ್ಮಿಕೊಂಡ ದಿಂಡಿ ಸಪ್ತಾಹ, ಜ್ಞಾನೇಶ್ವರಿ ಪಾರಾಯಣ ಹಾಗೂ ಕಳಸಾರೋಹನ ಸಮಾರಂಭದಲ್ಲಿ ಮಾತನಾಡಿದರು.</p>.<p>ಜನರು ಭಕ್ತಿ ಮಾರ್ಗದ ಮೂಲಕ ನೆಮ್ಮದಿ ಕಾಣಬಹುದಾಗಿದ್ದು ದೇವರನ್ನು ಭಜನೆ,ಕೀರ್ತನೆಗಳನ್ನು ಸ್ಮರಿಸಬಹುದಾಗಿದೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ ಮಾತನಾಡಿದರು. ಕೃಷ್ಣ ಮಹಾರಾಜರು,ಮುರುಘಾಮಠದ ಕಾಶೀನಾಥ ಶ್ರೀಗಳು ಸಾನಿಧ್ಯವಹಿಸಿ ಮಾತನಾಡಿದರು. ಕೀರ್ತನಕಾರರಿಗೆ,ಮೃದಂಗವಾದಕರಿಗೆ,ದಾನಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾಂಡುರಂಗನ ಭಾವಚಿತ್ರದ ಮೆರವಣಿಗೆ ಮಹಿಳೆಯರು ಕುಂಭ ಕಳಸದೊಂದಿಗೆ ಜರುಗಿತು.</p>.<p>ಸಂಪತ್ಕುಮಾರ ರಾಠಿ,ರಂಗಪ್ಪ ಶೇಬಿನಕಟ್ಟಿ,ಮುರುಗೇಶ ರಾಜನಾಳ,ಸುಭಾಷ ಸಿಂಧೆ,ಗೋಪಾಲ ಸಿಂಧೆ,ಪರಶುರಾಮ ಸಿಂಧೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>