<p><strong>ಗುಳೇದಗುಡ್ಡ:</strong> ಗ್ರಾಮಗಳು ದೇಶದ ಜೀವಾಳ, ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂದು ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಬಡಿಗೇರ ಹೇಳಿದರು.</p>.<p>ತಾಲ್ಲೂಕಿನ ಹಳದೂರ ಗ್ರಾ.ಪಂ. ವ್ಯಾಪ್ತಿಯ ಅಲ್ಲೂರ ಎಸ್ ಪಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಸಂಜೀವಿನಿ ಕಟ್ಟಡ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು. ಆ ನಿಟ್ಟಿನಲ್ಲಿ ಸಂಜೀವಿನಿ ಕಟ್ಟಡ ಅವಶ್ಯಕತೆ ಇತ್ತು. ಈಗ ಸರ್ಕಾರ ಪಂಚಾಯಿತಿ ಮೂಲಕ ಅನುಕೂಲ ಮಾಡಿ ಕೊಟ್ಟಿರುವುದರಿಂದ ಅದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರಾಮಚಂದ್ರ ಮೈತ್ರಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರ ಹಲವು ಅಭಿವೃದ್ಧಿ ಕೆಲಸ ನೀಡಿದೆ ವಿಶೇಷವಾಗಿ ನರೇಗಾ ಯೋಜನೆ ಮಹತ್ವಪೂರ್ಣವಾಗಿವೆ. ಗ್ರಾಮೀಣ ಮಹಿಳೆಯರು ಸ್ವಯಂ ಉದ್ಯೋಗ ಮಾಡಿ ಸಮಾಜದಲ್ಲಿ ಸಮಾಜದಲ್ಲಿ ಮುಂದೆ ಬರಬೇಕು ಎಂದರು.</p>.<p>ಗುಳೇದಗುಡ್ಡ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು ಮಾತನಾಡಿ, ಗ್ರಾಮಗಳಲ್ಲಿನ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು. ಜೊತೆಗೆ ಗ್ರಾಮಗಳು ಮೂಲ ಸೌಲಭ್ಯಗಳನ್ನು ಹೊಂದಬೇಕು. ಆ ದಿಸೆಯಲ್ಲಿ ಸರ್ಕಾರ ಉತ್ತಮವಾದ ಸೌಲಭ್ಯ ನೀಡುತ್ತಿದೆ ಎಂದರು.</p>.<p>₹17 ಲಕ್ಷ ವೆಚ್ಚದಲ್ಲಿ ಸ್ವಚ್ಛತಾ ಸಂಕೀರ್ಣ, ₹6 ಲಕ್ಷ ವೆಚ್ಚದಲ್ಲಿ ಬಿಸಿಯೂಟ ಅಡುಗೆ ಕೋಣೆಯ ಹೊಸ ಕಟ್ಟಡಗಳನ್ನು ಉದ್ಘಾಟಿಸಲಾಯಿತು. ಸ್ವ ಸಹಾಯ ಸಂಘದ ಸದಸ್ಯರಿಗೆ ಸ್ವ ಉದ್ಯೋಗ ಕ್ಯೆಗೊಳ್ಳಲು 5 ಸಂಘಗಳಿಗೆ ಸಾಲದ ಚೆಕ್ ವಿತರಿಸಲಾಯಿತು. ಮತದಾನ ಜಾಗೃತಿ ಮೂಡಿಸುವ ಮತದಾನ ಪ್ರತಿಜ್ಞೆ ವಿಧಿಯನ್ನು ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಬಡಿಗೇರ ಬೋಧಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಹನಮವ್ವ ಉಳ್ಳಾಗಡ್ಡಿ, ಉಪಾಧ್ಯಕ್ಷ ಹನಮಂತ ದನದಮನಿ, ಪಿಡಿಒ ಗೂಳಪ್ಪ ಹೊರಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಈರಯ್ಯ ಹೊಸಮಠ, ಮುತ್ತವ್ವ ಕೊಳಮಲಿ ಇದ್ದರು.</p>
<p><strong>ಗುಳೇದಗುಡ್ಡ:</strong> ಗ್ರಾಮಗಳು ದೇಶದ ಜೀವಾಳ, ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂದು ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಬಡಿಗೇರ ಹೇಳಿದರು.</p>.<p>ತಾಲ್ಲೂಕಿನ ಹಳದೂರ ಗ್ರಾ.ಪಂ. ವ್ಯಾಪ್ತಿಯ ಅಲ್ಲೂರ ಎಸ್ ಪಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಸಂಜೀವಿನಿ ಕಟ್ಟಡ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು. ಆ ನಿಟ್ಟಿನಲ್ಲಿ ಸಂಜೀವಿನಿ ಕಟ್ಟಡ ಅವಶ್ಯಕತೆ ಇತ್ತು. ಈಗ ಸರ್ಕಾರ ಪಂಚಾಯಿತಿ ಮೂಲಕ ಅನುಕೂಲ ಮಾಡಿ ಕೊಟ್ಟಿರುವುದರಿಂದ ಅದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರಾಮಚಂದ್ರ ಮೈತ್ರಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರ ಹಲವು ಅಭಿವೃದ್ಧಿ ಕೆಲಸ ನೀಡಿದೆ ವಿಶೇಷವಾಗಿ ನರೇಗಾ ಯೋಜನೆ ಮಹತ್ವಪೂರ್ಣವಾಗಿವೆ. ಗ್ರಾಮೀಣ ಮಹಿಳೆಯರು ಸ್ವಯಂ ಉದ್ಯೋಗ ಮಾಡಿ ಸಮಾಜದಲ್ಲಿ ಸಮಾಜದಲ್ಲಿ ಮುಂದೆ ಬರಬೇಕು ಎಂದರು.</p>.<p>ಗುಳೇದಗುಡ್ಡ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು ಮಾತನಾಡಿ, ಗ್ರಾಮಗಳಲ್ಲಿನ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು. ಜೊತೆಗೆ ಗ್ರಾಮಗಳು ಮೂಲ ಸೌಲಭ್ಯಗಳನ್ನು ಹೊಂದಬೇಕು. ಆ ದಿಸೆಯಲ್ಲಿ ಸರ್ಕಾರ ಉತ್ತಮವಾದ ಸೌಲಭ್ಯ ನೀಡುತ್ತಿದೆ ಎಂದರು.</p>.<p>₹17 ಲಕ್ಷ ವೆಚ್ಚದಲ್ಲಿ ಸ್ವಚ್ಛತಾ ಸಂಕೀರ್ಣ, ₹6 ಲಕ್ಷ ವೆಚ್ಚದಲ್ಲಿ ಬಿಸಿಯೂಟ ಅಡುಗೆ ಕೋಣೆಯ ಹೊಸ ಕಟ್ಟಡಗಳನ್ನು ಉದ್ಘಾಟಿಸಲಾಯಿತು. ಸ್ವ ಸಹಾಯ ಸಂಘದ ಸದಸ್ಯರಿಗೆ ಸ್ವ ಉದ್ಯೋಗ ಕ್ಯೆಗೊಳ್ಳಲು 5 ಸಂಘಗಳಿಗೆ ಸಾಲದ ಚೆಕ್ ವಿತರಿಸಲಾಯಿತು. ಮತದಾನ ಜಾಗೃತಿ ಮೂಡಿಸುವ ಮತದಾನ ಪ್ರತಿಜ್ಞೆ ವಿಧಿಯನ್ನು ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಬಡಿಗೇರ ಬೋಧಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಹನಮವ್ವ ಉಳ್ಳಾಗಡ್ಡಿ, ಉಪಾಧ್ಯಕ್ಷ ಹನಮಂತ ದನದಮನಿ, ಪಿಡಿಒ ಗೂಳಪ್ಪ ಹೊರಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಈರಯ್ಯ ಹೊಸಮಠ, ಮುತ್ತವ್ವ ಕೊಳಮಲಿ ಇದ್ದರು.</p>