<p><strong>ಗುಳೇದಗುಡ್ಡ</strong>: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ಪಟ್ಟಣದ ಸಾಲೇಶ್ವರ ದೇವಸ್ಥಾನದ ಹತ್ತಿರ ಹದಿ ಹರಿಯದ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು.</p>.<p>ಸ್ನೇಹ ಕ್ಲಿನಿಕ್ ವಿಭಾಗದ ಆಪ್ತ ಸಮಾಲೋಚಕರಾದ ಜಯಶ್ರೀ ಕಳಸಾ ಮಾತನಾಡಿ, ‘ರಾಷ್ಟ್ರೀಯ ಕಿಶೋರ ಸ್ವಾಸ್ಥ ಯೋಜನೆಯಡಿ ದೈಹಿಕ ಬದಲಾವಣೆ, ಮಾನಸಿಕ ಬದಲಾವಣೆ, ಸಾಮಾಜಿಕ ಮತ್ತು ಭಾವನಾತ್ಮಕ ಬದಲಾವಣೆ, ಪೌಷ್ಟಿಕ ಆಹಾರ, ಋತುಚಕ್ರ ಸಮಸ್ಯೆ , ಲೈಂಗಿಕ ಸಮಸ್ಯೆ, ಕಲಿಕಾ ಸಮಸ್ಯೆ ,ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿಯಿಂದಾಗುವ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ ಪರಿಹಾರೋಪಾಯ ಮಾರ್ಗಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ’ ಎಂದರು.</p>.<p>ಆರೋಗ್ಯ ತಪಾಸಣೆ ಶಿಬಿರದಲ್ಲಿ ಒಟ್ಟು 40 ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು, ಅದರಲ್ಲಿ ಎಂಟು ಮಕ್ಕಳನ್ನು ಹೆಚ್ಚಿನ ಆರೋಗ್ಯ ಸೇವೆಗೆ ಶಿಫಾರಸು ಮಾಡಲಾಯಿತು.</p>.<p>ಮಕ್ಕಳ ತಜ್ಞರಾದ ಡಾ.ಕವಿತಾ ನಾಗರಾಜ್ ಕುರಿ, ವೈದ್ಯಾಧಿಕಾರಿಗಳಾದ ಡಾ.ಕೆ.ಟಿ.ಗಾಜಿ, ಡಾ.ಜ್ಯೋತಿ ಶಿವನಾಯಕ, ನೇತ್ರಾಧಿಕಾರಿ ಅನು ಐಹೊಳೆ, ಪ್ರೀತಿ ಬೆಳಗಲ್ಲ ಸೇರಿದಂತೆ ಆರೋಗ್ಯ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-19-1881288755</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ</strong>: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ಪಟ್ಟಣದ ಸಾಲೇಶ್ವರ ದೇವಸ್ಥಾನದ ಹತ್ತಿರ ಹದಿ ಹರಿಯದ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು.</p>.<p>ಸ್ನೇಹ ಕ್ಲಿನಿಕ್ ವಿಭಾಗದ ಆಪ್ತ ಸಮಾಲೋಚಕರಾದ ಜಯಶ್ರೀ ಕಳಸಾ ಮಾತನಾಡಿ, ‘ರಾಷ್ಟ್ರೀಯ ಕಿಶೋರ ಸ್ವಾಸ್ಥ ಯೋಜನೆಯಡಿ ದೈಹಿಕ ಬದಲಾವಣೆ, ಮಾನಸಿಕ ಬದಲಾವಣೆ, ಸಾಮಾಜಿಕ ಮತ್ತು ಭಾವನಾತ್ಮಕ ಬದಲಾವಣೆ, ಪೌಷ್ಟಿಕ ಆಹಾರ, ಋತುಚಕ್ರ ಸಮಸ್ಯೆ , ಲೈಂಗಿಕ ಸಮಸ್ಯೆ, ಕಲಿಕಾ ಸಮಸ್ಯೆ ,ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿಯಿಂದಾಗುವ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ ಪರಿಹಾರೋಪಾಯ ಮಾರ್ಗಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ’ ಎಂದರು.</p>.<p>ಆರೋಗ್ಯ ತಪಾಸಣೆ ಶಿಬಿರದಲ್ಲಿ ಒಟ್ಟು 40 ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು, ಅದರಲ್ಲಿ ಎಂಟು ಮಕ್ಕಳನ್ನು ಹೆಚ್ಚಿನ ಆರೋಗ್ಯ ಸೇವೆಗೆ ಶಿಫಾರಸು ಮಾಡಲಾಯಿತು.</p>.<p>ಮಕ್ಕಳ ತಜ್ಞರಾದ ಡಾ.ಕವಿತಾ ನಾಗರಾಜ್ ಕುರಿ, ವೈದ್ಯಾಧಿಕಾರಿಗಳಾದ ಡಾ.ಕೆ.ಟಿ.ಗಾಜಿ, ಡಾ.ಜ್ಯೋತಿ ಶಿವನಾಯಕ, ನೇತ್ರಾಧಿಕಾರಿ ಅನು ಐಹೊಳೆ, ಪ್ರೀತಿ ಬೆಳಗಲ್ಲ ಸೇರಿದಂತೆ ಆರೋಗ್ಯ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-19-1881288755</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>