2021-22ನೇ ಸಾಲಿನ ಬಜೆಟ್ಮಂಡಿಸಿ, ಚರ್ಚೆ ಮಾಡಿ, ಅನುಮೋದನೆ ಪಡೆಯಲು ಸಭೆ ಕರೆಯಲಾಗಿತ್ತು.ಸಭೆ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯ ಉಮೇಶ ಹುನಗುಂದ, ಸಂತೋಷ ನಾಯನೇಗಲಿ, ಕಾಂಗ್ರೆಸ್ಸಿನವಿನೋದ ಮದ್ದಾನಿ, ಯಲ್ಲಪ್ಪ ಮನ್ನಿಕಟ್ಟಿ ಮುಂತಾದವರು ಪೂರ್ವಭಾವಿ ಸಭೆ ಕರೆಯದೆ ಕರಡು ಪ್ರತಿ ತಯಾರಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಸಭೆ ಮುಂದೂಡಲು ಅಧ್ಯಕ್ಷರನ್ನು ಒತ್ತಾಯಿಸಿದರು. ಮುಖ್ಯಾಧಿಕಾರಿ ಚಿದಾನಂದ ಮಠಪತಿ ಸದಸ್ಯರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಲಿಲ್ಲ.