<p>ಬಾಗಲಕೋಟೆ: ಜಿಲ್ಲೆಯ ನಗರಗಳಲ್ಲಿ ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ ಅವರ ಪುತ್ಥಳಿ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿ ಎಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು.</p>.<p>ಭಾರತೀಯ ನೌಕಾದಳದ ಪಿತಾಮಹ ಎಂದು ಘೋಷಿಸಬೇಕು. ಬಾಗಲಕೋಟೆ ರೈಲು ನಿಲ್ದಾಣಕ್ಕೆ ಇಮ್ಮಡಿ ಅವರ ಹೆಸರಿಡಬೇಕು ಎಂದು ಆಗ್ರಹಿಸಲಾಯಿತು.</p>.<p>ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, ಜಗತ್ತಿಗೆ ತಿಳಿದಿರುವಂತೆ ಶಕ್ತಿಶಾಲಿ ಸೈನ್ಯ ಕಟ್ಟಿ ಭಾರತವನ್ನು ಆಳಿದ ಕೀರ್ತಿ ಇಮ್ಮಡಿ ಪುಲಿಕೇಶಿಗೆ ಸಲ್ಲುತ್ತದೆ. ಬಾದಾಮಿ ಇತಿಹಾಸವನ್ನು ಮರೆತಿದ್ದೇವೆ. ಪ್ರವಾಸಿಗರಿಗೆ ಅಂತಹ ಶೂರರನ್ನು ಪರಿಚಯಿಸುವಲ್ಲಿ ವಿಫಲರಾಗಿದ್ದೇವೆ ಎಂದರು.</p>.<p>ರಾಜ್ಯ ವಕ್ತಾರ ಬಿ.ಎಂ.ಪಾಟೀಲ ಮಾತನಾಡಿ, ಕನ್ನಡ ನಾಡು-ನುಡಿಗೆ ಕೀರ್ತಿ ಕಳಶವಾದ ಇಮ್ಮಡಿ ಪುಲಿಕೇಶಿ ಮಹಾರಾಜರ ಪ್ರತಿಮೆಗಳನ್ನು ನಗರ ಸೇರಿದಂತೆ ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಗೌರವ ಅಧ್ಯಕ್ಷ ಪರಶುರಾಮ ಭಾವಿಕಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ಕೋಲಾರ, ಜಿಲ್ಲಾ ಸಂಚಾಲಕ ಗಣೇಶ ನಾಯಕ, ವಿಷ್ಣು ಬಾರಕೇರ, ಉಮೇಶ ಒಡೆಯರ್, ಸಿದ್ದಣ್ಣ ಕಾಳೆ, ಕಸ್ತೂರಿಬಾಯಿ ಮೆಹರವಾಡೆ, ಸಾದಿಕ್ ತಾಳಿಕೋಟಿ, ಪರಶುರಾಮ ಬುಳ್ಳಾಪುರ, ಸಂತೋಷ ಚಿನಿವಾಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಜಿಲ್ಲೆಯ ನಗರಗಳಲ್ಲಿ ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ ಅವರ ಪುತ್ಥಳಿ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿ ಎಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು.</p>.<p>ಭಾರತೀಯ ನೌಕಾದಳದ ಪಿತಾಮಹ ಎಂದು ಘೋಷಿಸಬೇಕು. ಬಾಗಲಕೋಟೆ ರೈಲು ನಿಲ್ದಾಣಕ್ಕೆ ಇಮ್ಮಡಿ ಅವರ ಹೆಸರಿಡಬೇಕು ಎಂದು ಆಗ್ರಹಿಸಲಾಯಿತು.</p>.<p>ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, ಜಗತ್ತಿಗೆ ತಿಳಿದಿರುವಂತೆ ಶಕ್ತಿಶಾಲಿ ಸೈನ್ಯ ಕಟ್ಟಿ ಭಾರತವನ್ನು ಆಳಿದ ಕೀರ್ತಿ ಇಮ್ಮಡಿ ಪುಲಿಕೇಶಿಗೆ ಸಲ್ಲುತ್ತದೆ. ಬಾದಾಮಿ ಇತಿಹಾಸವನ್ನು ಮರೆತಿದ್ದೇವೆ. ಪ್ರವಾಸಿಗರಿಗೆ ಅಂತಹ ಶೂರರನ್ನು ಪರಿಚಯಿಸುವಲ್ಲಿ ವಿಫಲರಾಗಿದ್ದೇವೆ ಎಂದರು.</p>.<p>ರಾಜ್ಯ ವಕ್ತಾರ ಬಿ.ಎಂ.ಪಾಟೀಲ ಮಾತನಾಡಿ, ಕನ್ನಡ ನಾಡು-ನುಡಿಗೆ ಕೀರ್ತಿ ಕಳಶವಾದ ಇಮ್ಮಡಿ ಪುಲಿಕೇಶಿ ಮಹಾರಾಜರ ಪ್ರತಿಮೆಗಳನ್ನು ನಗರ ಸೇರಿದಂತೆ ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಗೌರವ ಅಧ್ಯಕ್ಷ ಪರಶುರಾಮ ಭಾವಿಕಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ಕೋಲಾರ, ಜಿಲ್ಲಾ ಸಂಚಾಲಕ ಗಣೇಶ ನಾಯಕ, ವಿಷ್ಣು ಬಾರಕೇರ, ಉಮೇಶ ಒಡೆಯರ್, ಸಿದ್ದಣ್ಣ ಕಾಳೆ, ಕಸ್ತೂರಿಬಾಯಿ ಮೆಹರವಾಡೆ, ಸಾದಿಕ್ ತಾಳಿಕೋಟಿ, ಪರಶುರಾಮ ಬುಳ್ಳಾಪುರ, ಸಂತೋಷ ಚಿನಿವಾಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>