<p><strong>ಬೀಳಗಿ</strong>: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಸಮರ್ಥವಾಗಿ ಹಾಗೂ ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಗುರುರಾಜ ಲೂತಿ ಹೇಳಿದರು.</p>.<p>ತಾಲ್ಲೂಕಿನ ಅಮಲಝರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.</p>.<p>ಉತ್ತಮ ಫಲಿತಾಂಶಕ್ಕಾಗಿ ಈಗಾಗಲೇ ಇಲಾಖೆ ವತಿಯಿಂದ ಶಾಲಾ ಅವಧಿಯ ನಂತರ ಮತ್ತು ರಾತ್ರಿ ಸಮಯದಲ್ಲಿ ವಿಶೇಷ ತರಗತಿಗಳನ್ನು ನಡೆಸಿ ಮಾರ್ಗದರ್ಶನ ನೀಡಿದ್ದರೆ. ಅದನ್ನು ಗಮನದಲ್ಲಿಟ್ಟುಕೊಂಡು ಮಕ್ಕಳು ಪರೀಕ್ಷೆಗಳನ್ನು ಎದುರಿಸಬೇಕು ಎಂದರು.</p>.<p>ಮುಖ್ಯಶಿಕ್ಷಕಿ.ವಿ.ಎಸ್.ಪಡತಾರೆ ಮಾತನಾಡಿ, ’ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ವಿನಯ ರೂಢಿಸಿಕೊಳ್ಳಬೇಕು. ಶಿಕ್ಷಕರು ತರಗತಿಯಲ್ಲಿ ಬೋಧಿಸಿದ ವಿಷಯಾಂಶದ ಆಧಾರದ ಮೇಲೆ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಬೇಕು ಎಂಉ ತಿಳಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ವಾಸುದೇವ ಚಿಕ್ಕಿ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಬಿ.ಬಿ.ನಾಯಕ ಮಾತನಾಡಿದರು.</p>.<p>ಬಿ.ವೈ.ಹರದೊಳ್ಳಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಭೀಮಸಿ ತಳವಾರ ಹಾಗೂ ವಿದ್ಯಾರ್ಥಿಗಳು, ಶಿಕ್ಷಕರಾದ ಎಚ್.ಬಿ.ನಾಯ್ಕರ, ವಿ.ಸಿ.ಕಂಠಿ, ಚಂದ್ರಶೇಖರ ಕಂಬಾರ, ಸಾವಿತ್ರಿ ಕುಂಬಾರ, ಹನಮಂತ ಮೇತ್ರಿ, ದೀಪಾ ಹೂಗಾರ ಅಬ್ದುಲ್ ನದಾಫ, ಹನುಮಂತ ಹೊಳ್ಳೆಪ್ಪಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಸಮರ್ಥವಾಗಿ ಹಾಗೂ ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಗುರುರಾಜ ಲೂತಿ ಹೇಳಿದರು.</p>.<p>ತಾಲ್ಲೂಕಿನ ಅಮಲಝರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.</p>.<p>ಉತ್ತಮ ಫಲಿತಾಂಶಕ್ಕಾಗಿ ಈಗಾಗಲೇ ಇಲಾಖೆ ವತಿಯಿಂದ ಶಾಲಾ ಅವಧಿಯ ನಂತರ ಮತ್ತು ರಾತ್ರಿ ಸಮಯದಲ್ಲಿ ವಿಶೇಷ ತರಗತಿಗಳನ್ನು ನಡೆಸಿ ಮಾರ್ಗದರ್ಶನ ನೀಡಿದ್ದರೆ. ಅದನ್ನು ಗಮನದಲ್ಲಿಟ್ಟುಕೊಂಡು ಮಕ್ಕಳು ಪರೀಕ್ಷೆಗಳನ್ನು ಎದುರಿಸಬೇಕು ಎಂದರು.</p>.<p>ಮುಖ್ಯಶಿಕ್ಷಕಿ.ವಿ.ಎಸ್.ಪಡತಾರೆ ಮಾತನಾಡಿ, ’ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ವಿನಯ ರೂಢಿಸಿಕೊಳ್ಳಬೇಕು. ಶಿಕ್ಷಕರು ತರಗತಿಯಲ್ಲಿ ಬೋಧಿಸಿದ ವಿಷಯಾಂಶದ ಆಧಾರದ ಮೇಲೆ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಬೇಕು ಎಂಉ ತಿಳಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ವಾಸುದೇವ ಚಿಕ್ಕಿ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಬಿ.ಬಿ.ನಾಯಕ ಮಾತನಾಡಿದರು.</p>.<p>ಬಿ.ವೈ.ಹರದೊಳ್ಳಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಭೀಮಸಿ ತಳವಾರ ಹಾಗೂ ವಿದ್ಯಾರ್ಥಿಗಳು, ಶಿಕ್ಷಕರಾದ ಎಚ್.ಬಿ.ನಾಯ್ಕರ, ವಿ.ಸಿ.ಕಂಠಿ, ಚಂದ್ರಶೇಖರ ಕಂಬಾರ, ಸಾವಿತ್ರಿ ಕುಂಬಾರ, ಹನಮಂತ ಮೇತ್ರಿ, ದೀಪಾ ಹೂಗಾರ ಅಬ್ದುಲ್ ನದಾಫ, ಹನುಮಂತ ಹೊಳ್ಳೆಪ್ಪಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>