<p><strong>ಬಾಗಲಕೋಟೆ:</strong>ಹಡಪದ ಕ್ಷೌರಿಕ ಅಭಿವೃದ್ಧಿ ನಿಗಮ ಆರಂಭಿಸುವಂತೆ ಮುಂಬರುವ ವಿಧಾನಸಭೆ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಒತ್ತಡ ಹೇರಲು ಮಂಗಳವಾರ ಇಲ್ಲಿ ನಡೆದಹಡಪದ ಸಮಾಜದ ರಾಜ್ಯ ಕಾರ್ಯಕಾರಿಣಿ ಸಭೆ ತೀರ್ಮಾನಿಸಿತು.</p>.<p>ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾರಾವ ನರಿಬೋಳ ನೇತೃತ್ವದಲ್ಲಿನಗರದ ಅನುಗ್ರಹ ಹೋಟೆಲ್ನಲ್ಲಿ ಮಂಗಳವಾರ ಕಾರ್ಯಕಾರಿಣಿ ಸಭೆ ನಡೆಯಿತು.</p>.<p>‘ತಳಸಮುದಾಯಗಳನ್ನು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಸದೃಢಗೊಳಿಸಲು ಸರ್ಕಾರ ವಿವಿಧ ಸಮುದಾಯಗಳ ಅಭಿವೃದ್ಧಿಗೆ ನಿಗಮಗಳ ರಚನೆ ಮಾಡಿದೆ. ಅದೇ ರೀತಿ ಹಡಪದ ಕ್ಷೌರಿಕ ಅಭಿವೃದ್ಧಿ ನಿಗಮದ ಆರಂಭಕ್ಕೂ ಮುಂದಾಗಲಿ. ಆ ನಿಟ್ಟಿನಲ್ಲಿ ಸಮಾಜದವರು ಒಗ್ಗಟ್ಟಿನಿಂದ ಪ್ರಯತ್ನ ಆರಂಭಿಸೋಣ‘ ಎಂಬ ಕೂಗು ಸಭೆಯಲ್ಲಿ ಕೇಳಿಬಂದಿತು.</p>.<p>ಸಮಾಜದ ಅಸ್ಮಿತೆಯ ನೆಲೆಯಾದ ಶಿವಶರಣ ಹಡಪದ ಅಪ್ಪಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆ ಮಸಿಬಿನಾಳದ ಮನೆಯನ್ನು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಿ ಜೀರ್ಣೋದ್ಧಾರ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಡಲು ಸಭೆ ಸರ್ವಾನುಮತದಿಂದ ನಿರ್ಣಯಿಸಿತು.</p>.<p>ಸಮಾಜದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಎಚ್.ಡಿ. ವೈದ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಜುಲೈ 16ರಂದು ರಾಜ್ಯ ಸರ್ಕಾರ ಹಡಪದ ಅಪ್ಪಣ್ಣನವರ ಜಯಂತಿಯನ್ನು ಬೆಂಗಳೂರಿನಲ್ಲೇ ಆಚರಿಸಬೇಕು ಎಂದು ಒತ್ತಾಯಿಸಿದರು.</p>.<p>ಸಮಾಜದ ಈ ಬೇಡಿಕೆಗಳು ಈಡೇರದಿದ್ದಲ್ಲಿ ರಾಜ್ಯದಾದ್ಯಂತ ಹಡಪದ ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು. ವಿಧಾನಮಂಡಲದ ಅಧಿವೇಶನದಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳದಿದ್ದರೆ ಮಸಿಬಿನಾಳ ಗ್ರಾಮದಿಂದ ಬೆಳಗಾವಿ ಚಲೋ ಹಮ್ಮಿಕೊಳ್ಳಲು ನಿರ್ಣಯ ಕೈಗೊಳ್ಳಲಾಯಿತು.</p>.<p>ಸಭೆಯಲ್ಲಿ ಮಲ್ಲಿಕಾರ್ಜುನ ಹಡಪದ, ಮಲ್ಲಿಕಾರ್ಜುನ ಬಿಸಲದಿನ್ನಿ, ಅಶೋಕ ಹಡಪದ, ಭಾರತಿ ಹಡಪದ, ಮಹಾರುದ್ರಪ್ಪ ಪಡೇಸೂರ, ಉಳವಪ್ಪ ಹಡಪದ, ಬಸವರಾಜ ಹಡಪದ ಬೆಳಗಾವಿ, ಸುರೇಶ ಹಡಪದ, ವೀರಣ್ಣ ಚಿಕ್ಕಬೆಳ್ಳಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong>ಹಡಪದ ಕ್ಷೌರಿಕ ಅಭಿವೃದ್ಧಿ ನಿಗಮ ಆರಂಭಿಸುವಂತೆ ಮುಂಬರುವ ವಿಧಾನಸಭೆ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಒತ್ತಡ ಹೇರಲು ಮಂಗಳವಾರ ಇಲ್ಲಿ ನಡೆದಹಡಪದ ಸಮಾಜದ ರಾಜ್ಯ ಕಾರ್ಯಕಾರಿಣಿ ಸಭೆ ತೀರ್ಮಾನಿಸಿತು.</p>.<p>ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾರಾವ ನರಿಬೋಳ ನೇತೃತ್ವದಲ್ಲಿನಗರದ ಅನುಗ್ರಹ ಹೋಟೆಲ್ನಲ್ಲಿ ಮಂಗಳವಾರ ಕಾರ್ಯಕಾರಿಣಿ ಸಭೆ ನಡೆಯಿತು.</p>.<p>‘ತಳಸಮುದಾಯಗಳನ್ನು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಸದೃಢಗೊಳಿಸಲು ಸರ್ಕಾರ ವಿವಿಧ ಸಮುದಾಯಗಳ ಅಭಿವೃದ್ಧಿಗೆ ನಿಗಮಗಳ ರಚನೆ ಮಾಡಿದೆ. ಅದೇ ರೀತಿ ಹಡಪದ ಕ್ಷೌರಿಕ ಅಭಿವೃದ್ಧಿ ನಿಗಮದ ಆರಂಭಕ್ಕೂ ಮುಂದಾಗಲಿ. ಆ ನಿಟ್ಟಿನಲ್ಲಿ ಸಮಾಜದವರು ಒಗ್ಗಟ್ಟಿನಿಂದ ಪ್ರಯತ್ನ ಆರಂಭಿಸೋಣ‘ ಎಂಬ ಕೂಗು ಸಭೆಯಲ್ಲಿ ಕೇಳಿಬಂದಿತು.</p>.<p>ಸಮಾಜದ ಅಸ್ಮಿತೆಯ ನೆಲೆಯಾದ ಶಿವಶರಣ ಹಡಪದ ಅಪ್ಪಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆ ಮಸಿಬಿನಾಳದ ಮನೆಯನ್ನು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಿ ಜೀರ್ಣೋದ್ಧಾರ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಡಲು ಸಭೆ ಸರ್ವಾನುಮತದಿಂದ ನಿರ್ಣಯಿಸಿತು.</p>.<p>ಸಮಾಜದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಎಚ್.ಡಿ. ವೈದ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಜುಲೈ 16ರಂದು ರಾಜ್ಯ ಸರ್ಕಾರ ಹಡಪದ ಅಪ್ಪಣ್ಣನವರ ಜಯಂತಿಯನ್ನು ಬೆಂಗಳೂರಿನಲ್ಲೇ ಆಚರಿಸಬೇಕು ಎಂದು ಒತ್ತಾಯಿಸಿದರು.</p>.<p>ಸಮಾಜದ ಈ ಬೇಡಿಕೆಗಳು ಈಡೇರದಿದ್ದಲ್ಲಿ ರಾಜ್ಯದಾದ್ಯಂತ ಹಡಪದ ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು. ವಿಧಾನಮಂಡಲದ ಅಧಿವೇಶನದಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳದಿದ್ದರೆ ಮಸಿಬಿನಾಳ ಗ್ರಾಮದಿಂದ ಬೆಳಗಾವಿ ಚಲೋ ಹಮ್ಮಿಕೊಳ್ಳಲು ನಿರ್ಣಯ ಕೈಗೊಳ್ಳಲಾಯಿತು.</p>.<p>ಸಭೆಯಲ್ಲಿ ಮಲ್ಲಿಕಾರ್ಜುನ ಹಡಪದ, ಮಲ್ಲಿಕಾರ್ಜುನ ಬಿಸಲದಿನ್ನಿ, ಅಶೋಕ ಹಡಪದ, ಭಾರತಿ ಹಡಪದ, ಮಹಾರುದ್ರಪ್ಪ ಪಡೇಸೂರ, ಉಳವಪ್ಪ ಹಡಪದ, ಬಸವರಾಜ ಹಡಪದ ಬೆಳಗಾವಿ, ಸುರೇಶ ಹಡಪದ, ವೀರಣ್ಣ ಚಿಕ್ಕಬೆಳ್ಳಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>